ಪ್ರಜ್ವಲ್‌ ಪ್ರಭೆಗೆ ಆವರಿಸೀತೇ ಮಂಜು

ರಣಾಂಗಣ: ಹಾಸನ

Team Udayavani, Apr 11, 2019, 3:00 AM IST

prajwal

ಹಾಸನ: ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಮೊಮ್ಮಗ, ಲೋಕೋಪಯೋಗಿ ಸಚಿವ ಎಚ್‌.ಡಿ.ರೇವಣ್ಣ ಅವರ ಮಗ ಪ್ರಜ್ವಲ್‌ ರೇವಣ್ಣ ಅವರ ಸ್ಪರ್ಧೆಯಿಂದಾಗಿ ಹಾಸನ ಲೋಕಸಭಾ ಕ್ಷೇತ್ರ ರಾಜ್ಯದ ಹೈವೋಲ್ಟೆàಜ್‌ ಕ್ಷೇತ್ರಗಳಲ್ಲೊಂದಾಗಿದೆ. ಪ್ರತಿ ಚುನಾವಣೆಯಲ್ಲೂ ಈ ಕ್ಷೇತ್ರದಲ್ಲಿ ಜೆಡಿಎಸ್‌ – ಕಾಂಗ್ರೆಸ್‌ ನಡುವೆ ಹಣಾಹಣಿ ನಡೆದು, ಬಿಜೆಪಿ ಮೂರನೇ ಸ್ಥಾನದಲ್ಲಿರುತ್ತಿತ್ತು. ಆದರೆ, ಇದೇ ಮೊದಲ ಬಾರಿಗೆ ಜೆಡಿಎಸ್‌ – ಬಿಜೆಪಿ ನಡುವೆ ನೇರ ಹಣಾಹಣಿ ಏರ್ಪಟ್ಟಿದೆ.

1991ರ ಲೋಕಸಭಾ ಚುನಾವಣೆಯಲ್ಲಿ ದೇವೇಗೌಡರು ಸಮಾಜವಾದಿ ಜನತಾಪಕ್ಷದ ಅಭ್ಯರ್ಥಿಯಾಗಿ ಹಾಸನ ಕ್ಷೇತ್ರದಿಂದ ಆಯ್ಕೆಯಾದ ನಂತರ ಜನತಾ ಪರಿವಾರದ ಭದ್ರಕೋಟೆಯಾಗಿ ಕ್ಷೇತ್ರ ರೂಪುಗೊಂಡಿದೆ. 1996ರ ಚುನಾವಣೆ ಹೊರತುಪಡಿಸಿ 1991ರಿಂದ 2019ರ ಚುನಾವಣೆವರೆಗೂ ದೇವೇಗೌಡರೇ ಈ ಕ್ಷೇತ್ರದ ಅಭ್ಯರ್ಥಿಯಾಗಿದ್ದರು. 1999ರಲ್ಲಿ ದೇವೇಗೌಡರು ಈ ಕ್ಷೇತ್ರದಲ್ಲಿ ಸೋಲನ್ನೂ ಅನುಭವಿಸಿದ್ದರು. ನಂತರ ಸತತವಾಗಿ ಮೂರು ಬಾರಿ ಈ ಕ್ಷೇತ್ರವನ್ನು ಗೆಲ್ಲುವ ಮೂಲಕ 5 ಬಾರಿ ಹಾಸನ ಕ್ಷೇತ್ರವನ್ನು ಪ್ರತಿನಿಧಿಸಿದ್ದರು.

ಮಾಜಿ ಸಚಿವ ಎ.ಮಂಜು, ಬಿಜೆಪಿ ಅಭ್ಯರ್ಥಿ. ದೇವೇಗೌಡರ ಕುಟುಂಬದ ರಾಜಕೀಯ ವೈರಿ, ಬಿಜೆಪಿ ಮತ್ತು ಕಾಂಗ್ರೆಸ್‌ ಪಕ್ಷಗಳೆರಡರಲ್ಲೂ ಎರಡು ದಶಕಗಳಿಂದ ರಾಜಕಾರಣ ಮಾಡಿಕೊಂಡು ಬಂದಿರುವ ಮಂಜು, ಕಾಂಗ್ರೆಸ್‌ ತೊರೆದು ಬಿಜೆಪಿ ಅಭ್ಯರ್ಥಿಯಾಗಿದ್ದಾರೆ. ಮಂಜು ಹೊರತುಪಡಿಸಿ ಬಿಜೆಪಿಯಿಂದ ಬೇರೆ ಯಾರೇ ಅಭ್ಯರ್ಥಿಯಾಗಿದ್ದರೂ ಹಾಸನ ಕ್ಷೇತ್ರದ ಚುನಾವಣೆ ಏಕಪಕ್ಷೀಯವಾಗಿರುತ್ತಿತ್ತು. ಒಕ್ಕಲಿಗರ ಪ್ರಾಬಲ್ಯದ ಕ್ಷೇತ್ರದಲ್ಲಿ ದೇವೇಗೌಡರ ಕುಟುಂಬದವರ ಪ್ರಾಬಲ್ಯವನ್ನು ಮೆಟ್ಟಿ ನಿಲ್ಲುವ ಸಾಮರ್ಥಯ ಬಿಜೆಪಿಗೆ ಇರಲಿಲ್ಲ. ಆದರೆ, ಮಂಜು ಬಿಜೆಪಿ ಅಭ್ಯರ್ಥಿಯಾಗಿರುವುದರಿಂದ ಜೆಡಿಎಸ್‌ – ಬಿಜೆಪಿ ನಡುವೆ ಪೈಪೋಟಿ ಎದುರಾಗಿದೆ.

ಹಿಂದಿನ ಚುನಾವಣೆಯಲ್ಲಿ ದೇವೇಗೌಡರೆದುರು ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸೋತಿದ್ದ ಮಂಜು ಅವರು ಸಾಂಪ್ರದಾಯಿಕವಾಗಿ ಜೆಡಿಎಸ್‌ ವಿರುದ್ಧವಿದ್ದ ಕಾಂಗ್ರೆಸ್‌ ಕಾರ್ಯಕರ್ತರನ್ನೇ ಬಳಸಿಕೊಂಡು ಜೆಡಿಎಸ್‌ನ ನಿದ್ದೆಗೆಡಿಸುತ್ತಿದ್ದಾರೆ. ಆರಂಭದಲ್ಲಿ ತಮ್ಮ ಪ್ರವೇಶಕ್ಕೆ ವಿರೋಧವಿದ್ದ ಬಿಜೆಪಿ ಮುಖಂಡರನ್ನು ಸಮಾಧಾನಪಡಿಸಿ ಅಖಾಡದಲ್ಲಿ ಹೋರಾಟ ನಡೆಸುತ್ತಿದ್ದಾರೆ. ಹಾಸನ ಶಾಸಕ ಪ್ರೀತಂ ಜೆ.ಗೌಡ, ಕಡೂರು ಶಾಸಕ ಬೆಳ್ಳಿಪ್ರಕಾಶ್‌ ಮತ್ತು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪರಾಭವಗೊಂಡ ಬಿಜೆಪಿ ಅಭ್ಯರ್ಥಿಗಳ ಬಲದೊಂದಿಗೆ ಬಿರುಸಿನ ಪ್ರಚಾರದಲ್ಲಿ ತೊಡಗಿದ್ದಾರೆ.

ಪ್ರಜ್ವಲ್‌ಗೆ ಈಗ ಜೆಡಿಎಸ್‌ನಲ್ಲಿ ಎಳ್ಳಷ್ಟೂ ವಿರೋಧವಿಲ್ಲ. ತಂದೆ ಸಚಿವ ಎಚ್‌.ಡಿ.ರೇವಣ್ಣ ಅವರ ಬಲ, ತಾಯಿ, ಭವಾನಿ ರೇವಣ್ಣ ಅವರ ಮಹಿಳಾ ಸಂಘಟನೆಯ ಶ್ರೀರಕ್ಷೆಯಿದೆ. ಕಾಂಗ್ರೆಸ್‌ನ ಬಿ.ಶಿವರಾಮು, ಎಸ್‌.ಎಂ.ಆನಂದ್‌ ಸೇರಿದಂತೆ ಕಾಂಗ್ರೆಸ್‌ ಮುಖಂಡರು ಪ್ರಜ್ವಲ್‌ ಪರವಾಗಿ ನಿಂತಿದ್ದಾರೆ. ಬಿಜೆಪಿಯಲ್ಲಿದ್ದ ಮಾಜಿ ಶಾಸಕ ಬಿ.ವಿ.ಕರೀಗೌಡ, ಅಗಿಲೆ ಯೋಗೀಶ್‌ ಮತ್ತಿತರ ಮುಖಂಡರು ಜೆಡಿಎಸ್‌ ಸೇರಿರುವುದು ಮತ್ತಷ್ಟು ಬಲ ತಂದುಕೊಟ್ಟಿದೆ. ಆದರೆ, ತಳಮಟ್ಟದ ಕಾಂಗ್ರೆಸ್‌ ಕಾರ್ಯಕರ್ತರ ಬೆಂಬಲ ಪಡೆಯಲು ಹರಸಾಹಸ ಪಡಬೇಕಾಗಿದೆ.

ನಿರ್ಣಾಯಕ ಅಂಶ: ಹಾಸನ ಲೋಕಸಭಾ ಕ್ಷೇತ್ರಕ್ಕೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ವಿಧಾನಸಭಾ ಕ್ಷೇತ್ರವೂ ಸೇರಿದೆ. ಕಳೆದ ಬಾರಿ ಹಾಸನ ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳಲ್ಲಿ ಜೆಡಿಎಸ್‌ ಬಹುಮತ ಪಡೆದು ದೇವೇಗೌಡರು ಜಯ ಗಳಿಸಿದ್ದರೂ ಕಡೂರು ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಎ.ಮಂಜು ಅವರಿಗಿಂತ 17 ಸಾವಿರ ಮತಗಳ ಮುನ್ನಡೆ ಸಾಧಿಸಿದ್ದರು.

ಈ ಬಾರಿ ಕಾಂಗ್ರೆಸ್‌ – ಜೆಡಿಎಸ್‌ ಮೈತ್ರಿಯಾಗಿರುವುದರಿಂದ ಈ ಕ್ಷೇತ್ರದಲ್ಲಿ ಜೆಡಿಎಸ್‌ ಮುನ್ನಡೆ/ಸಮಬಲ ಸಾಧಿಸುವ ಅಶಾಭಾವ ಹೊಂದಿದೆ. ಹಾಸನ ಲೋಕಸಭಾ ಕ್ಷೇತ್ರದಲ್ಲಿ 5.50 ಲಕ್ಷದಷ್ಟಿರುವ (ಶೇ.70) ಒಕ್ಕಲಿಗರ ಮತಗಳು ಜೆಡಿಎಸ್‌ ಪರ, ಹಿಂದಿನ ಚುನಾವಣೆಗಳಲ್ಲಿ ಕಾಂಗ್ರೆಸ್‌ ಪರವಾಗಿರುತ್ತಿದ್ದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಕುರುಬ ಸಮುದಾಯದವರು ಈ ಬಾರಿ ಮೈತ್ರಿ ಪರವಾಗಿದ್ದಾರೆ ಎಂಬುದು ಜೆಡಿಎಸ್‌ ಮುಖಂಡರ ನಂಬಿಕೆ.

ಮುಸ್ಲಿಮರು ಜೆಡಿಎಸ್‌ ಪರ ನಿಲ್ಲುವ ಸಾಧ್ಯತೆ ಇದೆ. ಆದರೆ, ಕಡೂರು, ಅರಸೀಕೆರೆ, ಬೇಲೂರು, ಸಕಲೇಶಪುರ ಕ್ಷೇತ್ರದಲ್ಲಿ ಬಹುಸಂಖ್ಯಾತರಾಗಿರುವ ಲಿಂಗಾಯತರ ಮತಗಳು ಬಿಜೆಪಿಗೆ ಹೋಗಲಿವೆ ಎಂಬ ಲೆಕ್ಕಾಚಾರವಿದೆ. ಹಾಗಾಗಿ, ಎಸ್ಸಿ,ಎಸ್ಟಿ, ಕುರುಬ ಮತದಾರರು ಈ ಬಾರಿಯ ಚುನಾವಣೆಯಲ್ಲಿ ನಿರ್ಣಾಯಕರಾಗಲಿದ್ದಾರೆ.

ಕ್ಷೇತ್ರವ್ಯಾಪ್ತಿ: ಹಾಸನ ಜಿಲ್ಲೆಯ ಸಕಲೇಶಪುರ, ಅರಕಲಗೂಡು, ಹೊಳೆನರಸೀಪುರ, ಹಾಸನ, ಶ್ರವಣಬೆಳಗೊಳ, ಅರಸೀಕೆರೆ ಮತ್ತು ಬೇಲೂರು ವಿಧಾನಸಭಾ ಕ್ಷೇತ್ರಗಳು ಹಾಗೂ ಚಿಕ್ಕಮಗಳೂರು ಜಿಲ್ಲೆಯ ಕಡೂರು ವಿಧಾನಸಭಾ ಕ್ಷೇತ್ರಗಳು ಹಾಸನ ಲೋಕಸಭಾ ಕ್ಷೇತ್ರವ್ಯಾಪ್ತಿಯಲ್ಲಿವೆ.

ಕಣ ಚಿತ್ರಣ: ಹಾಸನ ಜಿಲ್ಲೆಯ 6 ವಿಧಾನಸಭಾ ಕ್ಷೇತ್ರಗಳಲ್ಲಿ ಜೆಡಿಎಸ್‌ ಶಾಸಕರಿದ್ದು, ಹಾಸನ ಮತ್ತು ಕಡೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಶಾಸಕರಿದ್ದಾರೆ. ಹಾಸನ ನಗರಸಭೆ, ಹಾಸನ ಜಿಲ್ಲಾ ಪಂಚಾಯಿತಿ ಸೇರಿದಂತೆ ಜಿಲ್ಲೆಯ ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲೂ ಜೆಡಿಎಸ್‌ ಅಧಿಪತ್ಯ ಸಾಧಿಸಿದೆ. ಕಡೂರು ಕ್ಷೇತ್ರದ ಸ್ಥಳೀಯ ಸಂಸ್ಥೆಗಳಲ್ಲಿ ಕಾಂಗ್ರೆಸ್‌ ಪ್ರಭುತ್ವ ಸ್ಥಾಪಿಸಿದೆ. ಬಿಜೆಪಿ ಯಾವುದೇ ಸ್ಥಳೀಯ ಸಂಸ್ಥೆಯಲ್ಲೂ ಇದುವರೆಗೆ ಅಧಿಕಾರ ಹಿಡಿದಿಲ್ಲ.

1999ರ ಲೋಕಸಭಾ ಚುನಾವಣೆ ಹೊರತುಪಡಿಸಿ 1991ರಿಂದಲೂ ಮಾಜಿ ಪ್ರಧಾನಿ ದೇವೇಗೌಡರ ನಾಯಕತ್ವದಲ್ಲಿ ಜನತಾದಳದ ಅಭ್ಯರ್ಥಿಗಳು ಗೆಲ್ಲುತ್ತಾ ಬಂದಿದ್ದಾರೆ. ಈ ಬಾರಿ ದೇವೇಗೌಡರ ಮೊಮ್ಮಗ, 28ರ ಹರೆಯದ ಜೆಡಿಎಸ್‌ ಅಭ್ಯರ್ಥಿ, ಪ್ರಜ್ವಲ್‌ ರೇವಣ್ಣ ಅವರೆದರು 60ರ ಹರೆಯದ ಬಿಜೆಪಿ ಅಭ್ಯರ್ಥಿ ಎ.ಮಂಜು ಎದುರಾಳಿ. ಬಿಎಸ್‌ಪಿ ಅಭ್ಯರ್ಥಿ ವಿನೋದ್‌ರಾಜು, ಉತ್ತಮ ಪ್ರಜಾಕೀಯ ಪಕ್ಷದ ಚಂದ್ರೇಗೌಡ, ಇಬ್ಬರು ಪಕ್ಷೇತರರು ಸೇರಿ ಒಟ್ಟು 6 ಮಂದಿ ಅಭ್ಯರ್ಥಿಗಳು ಸ್ಪರ್ಧಾ ಕಣದಲ್ಲಿದ್ದಾರೆ.

ಮತದಾರರು
-ಒಟ್ಟು - 16,29,587
-ಪುರುಷರು – 8,22,399
-ಮಹಿಳೆಯರು – 8,07,188

ಜಾತಿ ಲೆಕ್ಕಾಚಾರ
ಒಕ್ಕಲಿಗರು – 5,25,000
ಪ.ಜಾತಿ/ಪಂಗಡ – 3,30,000
ಲಿಂಗಾಯತರು – 2,50,000
ಕುರುಬರು -1,30,000
ಮುಸ್ಲಿಮರು – 1,10,000
ಇತರರು – 2,50,000

* ಎನ್‌. ನಂಜುಂಡೇಗೌಡ

ಟಾಪ್ ನ್ಯೂಸ್

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.