ಮಂಜು, ಬಿಎಸ್ವೈಗೆ ಟೋಪಿ ಹಾಕಲ್ವಾ?
Team Udayavani, Mar 28, 2019, 6:12 AM IST
ಹಾಸನ: “ಉಂಡೂ ಹೋದ, ಕೊಂಡೂ ಹೋದ ಎಂಬಂತೆ ಕಾಂಗ್ರೆಸ್ನಲ್ಲಿ ಶಾಸಕರಾಗಿ, ಮಂತ್ರಿಯಾಗಿ ಆ ಪಕ್ಷಕ್ಕೇ ದ್ರೋಹ ಮಾಡಿದ ಎ.ಮಂಜು ಅವರು, ಸಿದ್ದರಾಮಯ್ಯಗೆ ಟೋಪಿ ಹಾಕಿ ಹೋಗಿದ್ದಾರೆ. ಇನ್ನು ನರೇಂದ್ರ ಮೋದಿಗೆ ಹಾಗೂ ಯಡಿಯೂರಪ್ಪಗೆ ಯಾವಾಗ ಟೋಪಿ ಹಾಕುತ್ತಾರೋ ನೋಡಬೇಕು. ಕಾಂಗ್ರೆಸ್ ಹುಲ್ಲುಗಾವಲಿನಲ್ಲಿ ಮೇಯ್ದು, ಈಗ ಬಿಜೆಪಿಯಲ್ಲಿ ಮೇಯಲು ಹೋಗಿದ್ದಾರೆ’ ಎಂದು ಮಾಜಿ ಸಚಿವ ಎ.ಮಂಜು ವಿರುದ್ಧ ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಟೀಕಾಪ್ರಹಾರ ನಡೆಸಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿ, ಹಾಸನ ತಾಲೂಕಿನ ಸೋಮನಹಳ್ಳಿ ಕಾವಲು ಗೌರಿಪುರದ ಬಳಿ ಪ್ರಜ್ವಲ್ ಅವರು ಸರ್ಕಾರಿ ಭೂಮಿ ಕಬಳಿಸಿದ್ದಾರೆ ಎಂಬ ದೂರನ್ನು ರಾಜ್ಯದ ಸರ್ಕಾರಿ ಭೂಮಿ ಕಬಳಿಕೆ ವಿಚಾರಣೆಯ ವಿಶೇಷ ನ್ಯಾಯಾಲಯವು ವಜಾ ಮಾಡಿದೆ. ಎ.ಮಂಜು ಅವರು ನ್ಯಾಯಾಲಯದಲ್ಲಿ ದಾವೆ ಹೂಡಿದ್ದರು. ನ್ಯಾಯಾಲಯವು ಪ್ರಜ್ವಲ್ಗೆ ಕ್ಲೀನ್ಚಿಟ್ ನೀಡಿದೆ ಎಂದರು.
ಈ ಮಧ್ಯೆ, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಪ್ರಜ್ವಲ್ ಪರ ಪ್ರಚಾರಕ್ಕೆ ಬರಲಿದ್ದಾರೆ. ಅವರೇ ಸೂಕ್ತ ದಿನಾಂಕವನ್ನು ನೀಡಲಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ