ಇಂದು ಒಂದೇ ವೇದಿಕೆಯಲ್ಲಿ ಮಾಯಾ-ಮುಲಾಯಂ


Team Udayavani, Apr 19, 2019, 6:00 AM IST

21

ಹಲವು ದಶಕಗಳ ಕಾಲ ಹಾವು-ಮುಂಗುಸಿಯಂತೆ ಕಚ್ಚಾಡುತ್ತಿದ್ದ ಎಸ್‌ಪಿ ಸ್ಥಾಪಕ ಮುಲಾಯಂ ಸಿಂಗ್‌ ಯಾದವ್‌ ಮತ್ತು ಬಿಎಸ್‌ಪಿ ಅಧಿನಾಯಕಿ ಮಾಯಾವತಿ ಶುಕ್ರವಾರ ಉತ್ತರಪ್ರದೇಶದ ಮೈನ್‌ಪುರಿಯಲ್ಲಿ ಎಸ್‌ಪಿ-ಬಿಎಸ್ಪಿ-ಆರ್‌ಎಲ್‌ಡಿ ಮೈತ್ರಿಕೂಟದ ರ್ಯಾಲಿಯಲ್ಲಿ ವೇದಿಕೆ ಹಂಚಿಕೊಳ್ಳಲಿದ್ದಾರೆ. 1995ರಲ್ಲಿ ಎಸ್‌ಪಿ ಕಾರ್ಯಕರ್ತರು ರಾಜ್ಯ ಅತಿಥಿ ಗೃಹದಲ್ಲಿ ಬಿಎಸ್ಪಿ ನಾಯಕಿ ಮಾಯಾವತಿಯವರ ಮೇಲೆ ಹಲ್ಲೆ ನಡೆಸಿದ ಘಟನೆ ನಡೆದಾಗಿನಿಂದಲೂ ಎರಡೂ ಪಕ್ಷಗಳ ನಡುವೆ ವೈರತ್ವ ತೀವ್ರಗೊಂಡಿತ್ತು. ಆದರೆ ಈ ಬಾರಿ ಬಿಜೆಪಿಯನ್ನು ಸೋಲಿಸುವ ಉದ್ದೇಶದಿಂದ ಉಭಯ ಪಕ್ಷಗಳು ಮೈತ್ರಿ ಮಾಡಿಕೊಂಡಿದೆಯಲ್ಲದೆ, ಶುಕ್ರವಾರ ಮೈನ್‌ಪುರಿಯಲ್ಲಿ ಶಕ್ತಿಪ್ರದರ್ಶನವನ್ನೂ ಮಾಡಲಿವೆ.

ಅಖೀಲೇಶ್‌, ಮನೇಕಾ ನಾಮಪತ್ರ
ಸಮಾಜವಾದಿ ಪಕ್ಷದ ನಾಯಕ ಅಖೀಲೇಶ್‌ ಯಾದವ್‌ ಗುರುವಾರ ಉತ್ತರ ಪ್ರದೇಶದ ಅಜಂಗಡ ಲೋಕಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದಾರೆ. ಇವರಿಗೆ ಬಿಎಸ್ಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸತೀಶ್‌ಚಂದ್ರ ಮಿಶ್ರಾ ಸಾಥ್‌ ನೀಡಿದ್ದಾರೆ. ಇನ್ನೊಂದೆಡೆ, ಕೇಂದ್ರ ಸಚಿವೆ, ಬಿಜೆಪಿ ನಾಯಕಿ ಮನೇಕಾ ಗಾಂಧಿ ಅವರು ಸುಲ್ತಾನ್‌ಪುರ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದಾರೆ.

ಪಟ್ಟಿಯಲ್ಲಿ ಹೆಸರಿಲ್ಲದ್ದನ್ನು ಖಂಡಿಸಿ ಕಾಶ್ಮೀರಿ ಪಂಡಿತರ ಪ್ರತಿಭಟನೆ
ಜಮ್ಮುವಿನ ಶ್ರೀನಗರ ಕ್ಷೇತ್ರದಲ್ಲಿ ರಚಿಸಲಾಗಿದ್ದ ವಿಶೇಷ ಮತಗಟ್ಟೆಗಳಲ್ಲಿನ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರಿಲ್ಲದ ಕಾರಣ ನೊಂದು ಹಲವು ಕಾಶ್ಮೀರಿ ಪಂಡಿತರು ಪ್ರತಿಭಟನೆ ನಡೆಸಿದ್ದಾರೆ. ನಮ್ಮ ಹಕ್ಕನ್ನು ಕಸಿಯಲಾಗಿದೆ. ವಲಸಿಗರನ್ನು ತಮ್ಮ ಹಕ್ಕುಗಳಿಂದ ವಂಚಿಸಲು ಸಂಚು ನಡೆದಿದೆ ಎಂದೂ ಅವರು ಆರೋಪಿಸಿದ್ದಾರೆ.

ಆಕ್ಷೇಪಾರ್ಹ ಹೇಳಿಕೆ: ಕೇಸು ದಾಖಲು
ಇಸ್ಲಾಂ ವಿರೋಧಿ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಕೇರಳ ಬಿಜೆಪಿ ರಾಜ್ಯಾಧ್ಯಕ್ಷ ಪಿ.ಎಸ್‌.ಶ್ರೀಧರನ್‌ ಪಿಳ್ಳೆ ವಿರುದ್ಧ ಕೇರಳ ಪೊಲೀಸರು ಕೇಸು ದಾಖಲಿಸಿದ್ದಾರೆ. ಸಿಪಿಎಂ ನಾಯಕ ವಿ. ಶಿವನ್‌ಕುಟ್ಟಿ ನೀಡಿದ ದೂರಿನ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ.

ಬೆರಳನ್ನೇ ಕತ್ತರಿಸಿಕೊಂಡ ಬಿಎಸ್ಪಿ ಬೆಂಬಲಿಗ
ವಿಚಿತ್ರ ಬೆಳವಣಿಗೆಯೊಂದರಲ್ಲಿ, ಉತ್ತರಪ್ರದೇಶದ ಬುಲಂದ್‌ಶಹರ್‌ನಲ್ಲಿ ಬಿಎಸ್‌ಪಿ ಬೆಂಬಲಿಗನೊಬ್ಬ ಬಹುಜನ ಸಮಾಜವ ಪಕ್ಷಕ್ಕೆ ಮತ ಹಾಕುವ ಬದಲಿಗೆ, ತಪ್ಪಾಗಿ ಬಿಜೆಪಿ ಅಭ್ಯರ್ಥಿಗೆ ಮತ ಹಾಕಿದ್ದರಿಂದ ನೊಂದು ತಮ್ಮ ಬೆರಳನ್ನು ತಾವೇ ಕತ್ತರಿಸಿಕೊಂಡಿದ್ದಾನೆ. ಇಲ್ಲಿನ ಶಿಕಾರ್‌ಪುರ ಮತಗಟ್ಟೆಯಲ್ಲಿ ಈ ಘಟನೆ ನಡೆದಿದೆ. ಬುಲಂದ್‌ಶಹರ್‌ನಲ್ಲಿ ಬಿಜೆಪಿ ಅಭ್ಯರ್ಥಿ ಭೋಲಾ ಸಿಂಗ್‌ ಮತ್ತು ಎಸ್ಪಿ-ಬಿಎಸ್ಪಿ ಮೈತ್ರಿಕೂಟದ ಅಭ್ಯರ್ಥಿ ಯೋಗೇಶ್‌ ವರ್ಮಾ ನಡುವೆ ಪೈಪೋಟಿಯಿದೆ. ಬಿಎಸ್ಪಿ ಬೆಂಬಲಿಗನಾದ 25 ವರ್ಷದ ಪವನ್‌ ಕುಮಾರ್‌, ತನ್ನಿಂದಾದ ತಪ್ಪಿನಿಂದ ನೊಂದು ಮನೆಗೆ ವಾಪಸಾದವನೇ ಬೆರಳನ್ನು ಕತ್ತರಿಸಿಕೊಂಡಿದ್ದಾನೆ. ಬಳಿಕ ತನ್ನ ಕೃತ್ಯವನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲೂ ಅಪ್‌ಲೋಡ್‌ ಮಾಡಿದ್ದಾನೆ.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.