ತಮಗರಿವಿಲ್ಲದೆ ಪಕ್ಷಗಳ ಸದಸ್ಯತ್ವ; ಕಿರಿಕಿರಿ


Team Udayavani, Apr 3, 2019, 3:00 AM IST

tamagarivill

ಬೆಂಗಳೂರು: ಕೆಲದಿನಗಳ ಹಿಂದೆ ಹಲಸೂರಿನ 89ನೇ ವಾರ್ಡ್‌ನಲ್ಲಿ ಆರೋಗ್ಯ ಕಾರ್ಡ್‌ಗೆ ಹೆಸರು ನೋಂದಣಿ ಅಭಿಯಾನ ನಡೆಯಿತು. ಅಭಿಯಾನದಲ್ಲಿ ಅದೇ ವಾರ್ಡ್‌ನ ನಿವಾಸಿ ಮಹೇಶ್‌ ಕೂಡ ಹೆಸರು ಬರೆಸಿದ್ದರು. ಇದಕ್ಕೆ ಪ್ರತಿಯಾಗಿ ಆ ಅಭಿಯಾನದ ತಂಡವು ಒಂದು ಮೊಬೈಲ್‌ ಸಂಖ್ಯೆಯನ್ನು ನೀಡಿ, “ಆ ನಂಬರ್‌ಗೆ ಕರೆ ಮಾಡಿದ ತಕ್ಷಣ ಮೆಸೇಜ್‌ ಬರುತ್ತದೆ’ ಎಂದು ಹೇಳಿದ್ದರು.

ನಂತರದಲ್ಲಿ ಮಹೇಶ್‌ ಮೊಬೈಲ್‌ಗೆ ಮೆಸೇಜೂ ಬಂತು. ಆದರೆ, ಅದು ಆರೋಗ್ಯ ಕಾರ್ಡ್‌ಗೆ ಸಂಬಂಧಿಸಿದ್ದಾಗಿರಲಿಲ್ಲ. ರಾಷ್ಟ್ರೀಯ ಪಕ್ಷವೊಂದರ ಸದಸ್ಯತ್ವ ನೋಂದಣಿ ಖಾತ್ರಿಗೆ ಸಂಬಂಧಿಸಿದ್ದಾಗಿತ್ತು! ಈಗ ಚುನಾವಣೆ ಹಿನ್ನೆಲೆಯಲ್ಲಿ ಒಂದಿಲ್ಲೊಂದು ಪ್ರಚಾರ ಕಾರ್ಯಕ್ರಮಗಳು ನಡೆಯುತ್ತವೆ. ಮಹೇಶ್‌ಗೂ ತಪ್ಪದೆ ಆ ಪಕ್ಷದಿಂದ ಆಮಂತ್ರಣ ಬರುತ್ತದೆ. ಈ ಮೂಲಕ ತಮಗೆ ಅರಿವಿಲ್ಲದೆ, ಅವರು ರಾಜಕೀಯ ಪಕ್ಷವೊಂದರ ಶಾಶ್ವತ ಸದಸ್ಯ ಹಾಗೂ ಕಾರ್ಯಕರ್ತರೂ ಆಗಿಬಿಟ್ಟಿದ್ದಾರೆ.

ಯಶವಂತಪುರ ವಾರ್ಡ್‌ವೊಂದರಲ್ಲಿ ಪಾಲಿಕೆ ಸದಸ್ಯರ ಬೆಂಬಲಿಗರು ಉಚಿತ ವೈ-ಫೈ ನೀಡಲಾಗುವುದು ಎಂದು ಹೇಳಿ, ಮಂಜುನಾಥ್‌ ಎಂಬುವವರ ಮತದಾರರ ಗುರುತಿನಚೀಟಿ ಸಂಖ್ಯೆಯನ್ನು ಅವರದ್ದೇ ಮೊಬೈಲ್‌ನಲ್ಲಿ ಟೈಪ್‌ ಮಾಡಿ, ಸಂದೇಶ ಕಳುಹಿಸಿದರು. ಕೆಲವೇ ಹೊತ್ತಿನಲ್ಲಿ ಮಂಜುನಾಥ್‌ ಪಕ್ಷವೊಂದರ ಸದಸ್ಯತ್ವ ನೋಂದಣಿ ಆಗಿರುವ ಬಗ್ಗೆ ಸಂದೇಶ ಬಂತು.

ಅದೇ ರೀತಿ, ಬೊಮ್ಮನಹಳ್ಳಿಯಲ್ಲಿ ನೀರಿನ ಸಮಸ್ಯೆ ಬಗೆಹರಿಸಲು ಗ್ರೂಪ್‌ ಮಾಡುವ ನೆಪದಲ್ಲಿ ಆ ಏರಿಯಾದ ಮತದಾರರ ಗುರುತಿನ ಚೀಟಿ ಮತ್ತು ಮೊಬೈಲ್‌ ಸಂಖ್ಯೆ ಪಡೆಯಲಾಯಿತು. ನಂತರದಲ್ಲಿ ಅವರೆಲ್ಲರೂ ಮತ್ತೂಂದು ರಾಷ್ಟ್ರೀಯ ಪಕ್ಷದ ಸದಸ್ಯತ್ವ ಪಡೆದಿದ್ದರು. ಈಗ ನಿತ್ಯ ಆ ಪ್ರದೇಶದ ನಿವಾಸಿಗಳಿಗೆ ಕಾರ್ಯಕ್ರಮಗಳ ಆಮಂತ್ರಣ ಬರುತ್ತಿದೆ.

ಇವು ಕೆಲವು ಸ್ಯಾಂಪಲ್‌ಗ‌ಳಷ್ಟೇ. ನಗರದಲ್ಲಿ ವಿವಿಧ ರಾಜಕೀಯ ಪಕ್ಷಗಳಿಗೆ ಸಾವಿರಾರು ಕಾರ್ಯಕರ್ತರು ಹೀಗೆ ತಮಗೆ ಅರಿವಿಲ್ಲದೆ ಸದಸ್ಯತ್ವ ಪಡೆದಿದ್ದಾರೆ. ಎಲ್ಲ ಕಾರ್ಯಕರ್ತರಂತೆ ಈ “ಅತಿಥಿ’ಗಳಿಗೂ ಆಮಂತ್ರಣ ಬರುತ್ತಿವೆ. ಕಡಿಮೆ ಶ್ರಮದಲ್ಲಿ ಹೆಚ್ಚು ಜನರನ್ನು ತಲುಪಲು ಹಾಗೂ ಅಧಿಕ ಸದಸ್ಯತ್ವವನ್ನು ತೋರಿಸಲು ರಾಜಕೀಯ ಪಕ್ಷಗಳು ಕಂಡುಕೊಂಡ ಮಾರ್ಗ ಇದು.

ಚುನಾವಣೆ ಹಿನ್ನೆಲೆಯಲ್ಲಿ ಆಯಾ ಪಕ್ಷದ ಅಭ್ಯರ್ಥಿ ಪರ ಮತ ಚಲಾಯಿಸುವಂತೆ ಮನವಿ ಮಾಡುವುದು ಸಾಮಾನ್ಯ. ಆದರೆ, ವಿವಿಧ ಮೊಬೈಲ್‌ ಕಂಪೆನಿಗಳ ಜತೆ ರಾಜಕೀಯ ಪಕ್ಷಗಳ ಕರೆಗಳೂ ಬರುತ್ತಿವೆ. ಇದೊಂದು ರೀತಿಯ ಕಿರಿಕಿರಿ ಆಗುತ್ತದೆ. ಕಳೆದ ಎರಡು ತಿಂಗಳಿಂದಲೂ ಪಕ್ಷಗಳಿಗೆ ಸಂಬಂಧಿಸಿದ ಮೆಸೇಜ್‌ಗಳು ಬರುತ್ತಲೇ ಇವೆ ಎನ್ನುತ್ತಾರೆ ಹಲಸೂರಿನ ನಿವಾಸಿ ಗಿರೀಶ್‌.

ಪರೋಕ್ಷ ವಂಚನೆ: ಸುಳ್ಳು ಹೇಳಿ ಹೀಗೆ ವೈಯಕ್ತಿಕ ಮಾಹಿತಿಯನ್ನು ಪಡೆಯುವುದು ತಪ್ಪು. ಪಡೆದ ಮಾಹಿತಿಯನ್ನು ಬೇರೊಂದು ಉದ್ದೇಶಕ್ಕೆ ಬಳಸಿಕೊಳ್ಳುವುದು ಇನ್ನೂ ದೊಡ್ಡ ತಪ್ಪು. ಇದು ಪರೋಕ್ಷವಾಗಿ ವಂಚನೆ ಮಾಡಿದಂತಾಗುತ್ತದೆ. ಈ ಬಗ್ಗೆ ತಕ್ಷಣ ಚುನಾವಣಾ ಆಯೋಗ ಕ್ರಮ ಕೈಗೊಳ್ಳಬೇಕು. ಮತದಾರರೂ ಈ ಬಗ್ಗೆ ಜಾಗೃತಿ ವಹಿಸಬೇಕು ಎಂದು ವಿವಿಧ ಸಿವಿಕ್‌ ಸಂಘಟನೆಗಳ ಪದಾಧಿಕಾರಿಗಳು ತಿಳಿಸುತ್ತಾರೆ.

ಈ ರೀತಿ ಮಾಡುವುದು ನೀತಿಸಂಹಿತೆಯ ಸ್ಪಷ್ಟ ಉಲ್ಲಂಘನೆ. ಇಂತಹ ಘಟನೆಗಳು ಗಮನಕ್ಕೆ ಬಂದರೆ, ಸಾರ್ವಜನಿಕರು ಮಾಹಿತಿ ನೀಡಬೇಕು. ತಕ್ಷಣ ಕ್ರಮ ಕೈಗೊಳ್ಳಲಾಗುವುದು. ಬೆಂಗಳೂರು ಜಿಲ್ಲಾ ಚುನಾವಣಾ ವಿಚಕ್ಷಣ ಘಟಕಕ್ಕೆ ದೂರು ಸಲ್ಲಿಸಬಹುದು.
-ಎನ್‌.ಮಂಜುನಾಥ ಪ್ರಸಾದ್‌, ನಗರ ಜಿಲ್ಲಾ ಚುನಾವಣಾಧಿಕಾರಿ

* ವಿಜಯಕುಮಾರ್‌ ಚಂದರಗಿ

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.