ದೀದಿ ಕೋಟೆಯಲ್ಲಿ ಮೋದಿ ಅಲೆ?


Team Udayavani, May 20, 2019, 7:06 AM IST

Modi

ಪ್ರಸಕ್ತ ಲೋಕಸಭೆ ಚುನಾವಣೆಯಲ್ಲಿ ಅತ್ಯಂತ ಹೆಚ್ಚು ಹಿಂಸಾಚಾರ, ಘರ್ಷಣೆ, ವಾಕ್ಸಮರಗಳನ್ನು ಕಂಡ ಪಶ್ಚಿಮ ಬಂಗಾಳದಲ್ಲಿ ದೀದಿಯ ಭದ್ರಕೋಟೆಯನ್ನು ಒಡೆಯುವಲ್ಲಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಯಶಸ್ವಿಯಾಗಲಿದೆಯೇ ಎಂಬ ಪ್ರಶ್ನೆ ಕುತೂಹಲಕ್ಕೆ ಕಾರಣವಾಗಿದೆ.

ಬಂಗಾಳದಲ್ಲಿ ದೀದಿ ಪ್ರಭಾವ ಮುಂದುವರಿಯಲಿದೆ ಎಂದು ಕೆಲವು ಸಮೀಕ್ಷೆಗಳು ಹೇಳಿದ್ದರೆ, ಇನ್ನು ಕೆಲವು ಸಮೀಕ್ಷೆಗಳು ಇಲ್ಲಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲುವಲ್ಲಿ ಬಿಜೆಪಿ ಯಶಸ್ವಿಯಾಗಲಿದೆ ಎಂದು ಅಂದಾಜಿಸಿವೆ. ಬಂಗಾಳದಲ್ಲಿ ಟಿಎಂಸಿ ತನ್ನ ಪ್ರಾಬಲ್ಯವನ್ನು ಮುಂದುವರಿಸಲಿದೆ ಮಾತ್ರವಲ್ಲ ಈಗಿರುವುದಕ್ಕಿಂತಲೂ ಹೆಚ್ಚಿನ ಸ್ಥಾನ ಗಿಟ್ಟಿಸಿಕೊಳ್ಳಲಿದೆ ಎಂದು ನ್ಯೂಸ್‌ 18ನ ಐಪಿಎಸ್‌ಒಎಸ್‌ ಚುನಾವಣೋತ್ತರ ಸಮೀಕ್ಷೆ ಭವಿಷ್ಯ ನುಡಿದಿದೆ. ಅದರ ಪ್ರಕಾರ, ಈಗ ಟಿಎಂಸಿ 34 ಸ್ಥಾನಗಳನ್ನು ಹೊಂದಿದ್ದು, ಈ ಸಂಖ್ಯೆ 36ರಿಂದ 38ಕ್ಕೇರಲಿದೆ ಎನ್ನಲಾಗಿದೆ. ಆದರೆ, ಇದಕ್ಕೆ ತದ್ವಿರುದ್ಧ ಎಂಬಂತೆ ಇಂಡಿಯಾ ಟುಡೇ- ಮೈ ಇಂಡಿಯಾ ಎಕ್ಸಿಟ್‌ ಪೋಲ್‌, ಬಿಜೆಪಿ ಉತ್ತಮ ಸಾಧನೆ ಮಾಡುವುದಾಗಿ ತಿಳಿಸಿದೆ. ಬಂಗಾಳದಲ್ಲಿ ಟಿಎಂಸಿ-ಬಿಜೆಪಿ ನಡುವೆ ಹೆಗಲೆಣೆಯ ಪೈಪೋಟಿ ನಡೆದಿದ್ದು, ಬಿಜೆಪಿ 19ರಿಂದ 22 ಸ್ಥಾನಗಳನ್ನು ಗೆದ್ದರೆ, ಟಿಎಂಸಿ 19ರಿಂದ 23 ಸ್ಥಾನಗಳಲ್ಲಿ ಜಯ ಸಾಧಿಸಲಿದೆ ಎಂದು ಹೇಳಿದೆ.

ಟೈಮ್ಸ್‌ ನೌ-ವಿಎಂಆರ್‌ ಸಮೀ ಕ್ಷೆಯು ಬಿಜೆಪಿ ಈ ಬಾರಿ 11 ಸೀಟು ಗಳಲ್ಲಿ ಗೆಲ್ಲಲಿದ್ದು, ಟಿಎಂಸಿ 28ರಲ್ಲಿ ಜಯ ಸಾಧಿಸಲಿದೆ ಎಂದಿದೆ. ಕಾಂಗ್ರೆಸ್‌ ಕೇವಲ 2 ಸ್ಥಾನಗಳಿಗೆ ತೃಪ್ತಿ ಪಟ್ಟುಕೊಳ್ಳ ಲಿದೆ ಎಂದೂ ಹೇಳಿದೆ. ಎಬಿಪಿ ಸಮೀಕ್ಷೆ ಪ್ರಕಾರ ಬಂಗಾಳದಲ್ಲಿ ಬಿಜೆಪಿ 16, ಟಿಎಂಸಿ 24 ಮತ್ತು ಕಾಂಗ್ರೆಸ್‌ 2ರಲ್ಲಿ ಗೆಲ್ಲಲಿದೆ. ಅಚ್ಚರಿ ಯೆಂದರೆ, ಎಲ್ಲ ಸಮೀಕ್ಷೆಗಳು ಕೂಡ ಎಡಪಕ್ಷಗಳು ಶೂನ್ಯ ಸಾಧನೆ ಮಾಡಲಿವೆ ಎಂದು ಹೇಳಿವೆ.

ಮತಗಟ್ಟೆ ಸಮೀಕ್ಷೆಗಳ ಈ ಫ‌ಲಿತಾಂಶವು ಮಮತಾ ಬ್ಯಾನರ್ಜಿ ಅವರನ್ನು ಕೆರಳಿಸಿದೆ. ಸಮೀಕ್ಷೆಗಳ ಭವಿಷ್ಯವನ್ನು ಅಲ್ಲಗಳೆದಿರುವ ಅವರು, ಇದನ್ನು ಯಾರೂ ನಂಬಬೇಡಿ. ಈ ರೀತಿಯ ಗಾಸಿಪ್‌ ಮೂಲಕ ಸಾವಿರಾರು ಇವಿಎಂಗಳನ್ನು ಬದಲಿಸಲು ಗೇಮ್‌ ಪ್ಲಾನ್‌ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಟಾಪ್ ನ್ಯೂಸ್

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

17

ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್‌ ರೋಲ್ ನಲ್ಲಿ ಫಾಫಾ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

Apex

CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

17

ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್‌ ರೋಲ್ ನಲ್ಲಿ ಫಾಫಾ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

12-malpe

Malpe: ಶ್ರೀ ವಡಭಾಂಡ ಬಲರಾಮ ದೇವಸ್ಥಾನ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಸಂಪನ್ನ

Apex

CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.