10,000ಕ್ಕೂ ಅಧಿಕ ರೋಗಿಗಳಿಗೆ ಮತದಾನ ಭಾಗ್ಯವಿಲ್ಲ!


Team Udayavani, Mar 29, 2019, 6:00 AM IST

Vote

ಮಂಗಳೂರು: ಇವರಲ್ಲಿ ಮತ ದಾರರ ಗುರುತಿನ ಚೀಟಿಯಿದೆ. ಮತದಾರರ ಪಟ್ಟಿಯಲ್ಲಿ ಹೆಸರೂ ಇದೆ. ಆದರೂ ಇವರು ಮತದಾನ ಮಾಡಲು ಸಾಧ್ಯವಾಗುತ್ತಿಲ್ಲ. ಯಾಕೆಂದರೆ ಅವರೆಲ್ಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳು!

ಆರೋಗ್ಯ ಇಲಾಖೆಯ ಮೂಲಗಳ ಪ್ರಕಾರ ರಾಜ್ಯದಲ್ಲಿ ಪ್ರತಿದಿನ ದಿನಕ್ಕೆ ಕನಿಷ್ಠ 10,000ಕ್ಕೂ ಅಧಿಕ ಮಂದಿ ನಾನಾ ರೀತಿಯ ಚಿಕಿತ್ಸೆಗಳಿಗೆ ಆಸ್ಪತ್ರೆಯಲ್ಲಿ ದಾಖಲಾಗುತ್ತಿದ್ದಾರೆ. ಈ ಲೆಕ್ಕಾಚಾರ ನೋಡಿದರೆ, ಮತದಾನದ ದಿನವೂ ಹೆಚ್ಚುಕಮ್ಮಿ ಅಷ್ಟೇ ಪ್ರಮಾಣದ ರೋಗಿಗಳು ರಾಜ್ಯದೆಲ್ಲೆಡೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವ ಕಾರಣದಿಂದ ಅವರೆಲ್ಲ ಅನಿವಾರ್ಯವಾಗಿ ಮತದಾನದಿಂದ ದೂರ ಉಳಿಯಬೇಕಾಗುತ್ತದೆ.

ಮಂಗಳೂರಿನ ಖಾಸಗಿ ಆಸ್ಪತ್ರೆಯೊಂದರ ಮೂಲದ ಪ್ರಕಾರ; ಅದು 1,000 ರೋಗಿಗಳಿಗೆ ಚಿಕಿತ್ಸೆ ನೀಡಲು ಇರುವ ಸುಸಜ್ಜಿತ ಆಸ್ಪತ್ರೆ. ಸದ್ಯ ಇಲ್ಲಿ 650 ಒಳರೋಗಿಗಳಿದ್ದಾರೆ. ಅಷ್ಟೇ ಪ್ರಮಾಣದಲ್ಲಿ ಇವರ ಸಂಬಂಧಿಕರು ಆರೈಕೆ ನೋಡಿಕೊಳ್ಳುತ್ತಿದ್ದಾರೆ. ಇದರಲ್ಲಿ ಬಹುತೇಕ ರೋಗಿಗಳು ಕೇರಳ, ಉತ್ತರ ಕರ್ನಾಟಕ ಸೇರಿದಂತೆ ಬೇರೆ ಬೇರೆ ಜಿಲ್ಲೆಯವರು. ಅವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರ ಪ್ರಕಾರ 650 ರೋಗಿಗಳ ಪೈಕಿ ಸುಮಾರು 300ರಷ್ಟು ಜನರಿಗೆ ಆಸ್ಪತ್ರೆ ಬಿಟ್ಟು ಹೋಗುವಂತಿಲ್ಲ. ಹೀಗಾಗಿ ನಾಡಿದ್ದು ಚುನಾವಣೆಯ ದಿನ ಇಷ್ಟೂ ಜನರು ಮತದಾನ ದಿಂದ ವಂಚಿತರಾಗುವುದು ಬಹುತೇಕ ನಿಚ್ಚಳ.

ಇದು ಮಂಗಳೂರಿನ ಒಂದು ಆಸ್ಪತ್ರೆಯ ವಿಷಯವಾದರೆ, ಇಂತಹ 1,000 ಬೆಡ್‌ ಸಾಮರ್ಥ್ಯದ ಸುಮಾರು 10 ಆಸ್ಪತ್ರೆಗಳು ಮಂಗಳೂರು ನಗರ ವ್ಯಾಪ್ತಿಯಲ್ಲಿವೆ. ಇಲ್ಲಿಯೂ ಕೂಡ ಇಂತಹುದೇ ಪರಿಸ್ಥಿತಿ ಉಂಟಾಗಿ ಹೆಚ್ಚಾ ಕಡಿಮೆ 3,000 ಜನರು ಮತದಾನದಿಂದ ವಂಚಿತರಾಗಲಿದ್ದಾರೆ. ಜತೆಗೆ 950 ಬೆಡ್‌ಗಳ ಸಾಮರ್ಥ್ಯದ ವೆನಾÉಕ್‌ ಸರಕಾರಿ ಆಸ್ಪತ್ರೆಯಲ್ಲಿನ ರೋಗಿಗಳಿಗೆ/ಆರೈಕೆ ಮಾಡುವವರ ಪೈಕಿ ಎಲ್ಲರಿಗೂ ಮತದಾನ ಮಾಡುವ ದಿನ ಆಸ್ಪತ್ರೆಯಿಂದ ತೆರಳಲು ಆಗದು.

ಜಿಲ್ಲಾ ಆರೋಗ್ಯ ಇಲಾಖೆಯ ಮಾಹಿತಿಯ ಪ್ರಕಾರ, ದ.ಕ. ಜಿಲ್ಲೆಯಲ್ಲಿ ನರ್ಸಿಂಗ್‌ ಹೋಮ್‌, ಸಮುದಾಯ ಆರೋಗ್ಯ ಕೇಂದ್ರ, ಆಸ್ಪತ್ರೆ ಸೇರಿದಂತೆ ಸುಮಾರು 118 ಖಾಸಗಿ/ಸರಕಾರಿ ಆರೋಗ್ಯ ಕೇಂದ್ರಗಳಿವೆ. ಇವುಗಳಲ್ಲಿ ಕನಿಷ್ಠ 5-6 ಬೆಡ್‌ಗಳಿಂದ 100-200 ಬೆಡ್‌ಗಳ ಸಾಮರ್ಥ್ಯವಿದೆ. ಹೀಗಾಗಿ ಜಿಲ್ಲೆಯಲ್ಲಿಯೇ ಸುಮಾರು ಕನಿಷ್ಠ 10,000ದಷ್ಟು ರೋಗಿಗಳು ಹಾಗೂ ಆರೈಕೆ ನೋಡಿಕೊಳ್ಳುವವರು ಇದ್ದರೆ ಈ ಪೈಕಿ ಸುಮಾರು ಕನಿಷ್ಠ 5,000 ಮಂದಿಗೆ ಮತದಾನ ಮಾಡಲು ಅವಕಾಶವೇ ಸಿಗದು. ಉಡುಪಿ ಜಿಲ್ಲೆಯಲ್ಲಿಯೂ ಸಾವಿರಾರು ರೋಗಿಗಳಿಗೆ ಮತದಾನ ಮಾಡಲು ಸಾಧ್ಯವಾಗುತ್ತಿಲ್ಲ.

ಸಾಧ್ಯತೆ ಇದ್ದರೂ ಸವಾಲು ಅಧಿಕ!
ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳಿಗೆ ಮತದಾನದ ಅವಕಾಶ ಕಲ್ಪಿಸಲು ಯಾವ ವ್ಯವಸ್ಥೆ ಮಾಡಬಹುದು ಎಂಬುದು ಸದ್ಯಕ್ಕೆ ಚುನಾವಣಾ ಆಯೋಗಕ್ಕೂ ಪರಿಹರಿಸಲಾಗದ ವಿಚಾರ. ಸದ್ಯದ ಪ್ರಕಾರ ಅಂಚೆ ಮತಗಳನ್ನು ನೀಡುವಂತಿಲ್ಲ. ಒಂದು ವೇಳೆ ಅಂಚೆ ಮತ ನೀಡಿದರೆ ಅದು ಬೇರೆ ಬೇರೆ ಕಾರಣದಿಂದ ದುರುಪಯೋಗವಾಗುವ ಸಾಧ್ಯತೆಯೂ ಇದೆ. ಬದಲಾಗಿ ಆಯೋಗವೇ ಖುದ್ದಾಗಿ ಆಸ್ಪತ್ರೆಗಳಲ್ಲಿಯೇ ಮತದಾನ ಕೇಂದ್ರ ತೆರೆದರೆ ಸಾಧ್ಯವೇ? ಅಥವಾ ಆಯೋಗದ ಅಧಿಕಾರಿಗಳು ಆಸ್ಪತ್ರೆಗಳಿಗೆ ತೆರಳಿ ಮತದಾನ ಮಾಡಿಸಿಕೊಳ್ಳಲು ಅವಕಾಶವಿದೆಯೇ? ಎಂಬಿತ್ಯಾದಿ ವಿಚಾರಗಳ ಬಗ್ಗೆ ಆಯೋಗ ಚರ್ಚೆ ನಡೆಸುತ್ತಿದೆ. ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವ ರೋಗಿಯ ಮನಸ್ಸು ಆ ಸಂದರ್ಭದಲ್ಲಿ ಚಂಚಲ/ಗೊಂದಲ/ ಸ್ಥಿಮಿತ ಕಳೆದುಕೊಂಡಿರುವ ಸಾಧ್ಯತೆ ಇರುವುದರಿಂದ ಆ ಮತಗಳನ್ನು ಪರಿಗಣಿಸಲು ಸಾಧ್ಯವೇ ಎಂಬ ಪ್ರಶ್ನೆಯೂ ಮೂಡಿದೆ.

“ಜತೆಗಾರರು ಮತ ಚಲಾಯಿಸಿ’
ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳಿಗೆ ಮತದಾನಕ್ಕೆ ಅವಕಾಶ ನೀಡುವ ವಿಶೇಷ ನಿಯಮ ಅಥವಾ ವ್ಯವಸ್ಥೆಯ ಬಗ್ಗೆ ಚುನಾವಣಾ ಆಯೋಗ ತೀರ್ಮಾನ ಕೈಗೊಂಡಿಲ್ಲ. ಮುಂದಿನ ಹಂತದಲ್ಲಿ ಈ ಕುರಿತಂತೆ ಆಯೋಗ ಸೂಕ್ತ ತೀರ್ಮಾನ ಕೈಗೊಳ್ಳಬಹುದು. ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರ ಆರೈಕೆ ನೋಡುವವರು ದಯವಿಟ್ಟು ಮತದಾನದ ದಿನ ನಿಗದಿತ ಸಮಯ ನೋಡಿಕೊಂಡು ಆಸ್ಪತ್ರೆಯಿಂದ ಬಂದು ಮತದಾನ ಮಾಡಬೇಕು.
– ಶಶಿಕಾಂತ ಸೆಂಥಿಲ್‌, ಜಿಲ್ಲಾಧಿಕಾರಿ ದ.ಕ.

“ರೋಗಿಗಳಿಗೆ ಮತದಾನ;
ಪರಿಶೀಲನೆ ನಡೆಯಲಿ’
ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯು ತ್ತಿರುವ ರೋಗಿಗಳು ಹಾಗೂ ಅವರ ಆರೈಕೆಯಲ್ಲಿ ತೊಡಗಿಸಿಕೊಂಡ ಬಹುತೇಕ ಮಂದಿ ಮತದಾನದಿಂದ ವಂಚಿತರಾಗುತ್ತಲೇ ಇದ್ದಾರೆ. ಇದಕ್ಕಾಗಿ ಮುಂದಿನ ಚುನಾವಣೆ ವೇಳೆಯಲ್ಲಿ ಆಸ್ಪತ್ರೆಯಲ್ಲಿರುವವರಿಗೆ ಮತದಾನಕ್ಕೆ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ವಿಶೇಷ ಸರ್ವೆ ಮಾಡಿ, ಸಾಧ್ಯಾಸಾಧ್ಯತೆಗಳನ್ನು ಪರಿಶೀಲಿಸಿ ಕ್ರಮಕ್ಕೆ ಮುಂದಾಗಬೇಕಿದೆ.
– ಡಾ| ಸಚ್ಚಿದಾನಂದ ರೈ,
ಅಧ್ಯಕ್ಷರು, ಭಾರತೀಯ ವೈದ್ಯಕೀಯ
ಸಂಘ ಮಂಗಳೂರು

– ದಿನೇಶ್‌ ಇರಾ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.