ನನ್ನ ಹೆಸರು ಮುಂಚೂಣಿಯಲ್ಲಿದೆ : ಎಸ್.ಎಸ್.ಮಲ್ಲಿಕಾರ್ಜುನ್
Team Udayavani, Mar 16, 2019, 12:30 AM IST
ದಾವಣಗೆರೆ: “ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಯಾರ ಹೆಸರೂ ಪಕ್ಕಾ ಆಗಿಲ್ಲ. ನನ್ನ ಹೆಸರು ಮುಂಚೂಣಿಯಲ್ಲಿದೆ. ಆದರೆ, ನಾನಿನ್ನೂಯಾವುದಕ್ಕೂ ಒಪ್ಪಿಗೆ ಸೂಚಿಸಿಲ್ಲ’ ಎಂದು ಮಾಜಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಸ್ಪಷ್ಟಪಡಿಸಿದ್ದಾರೆ.
ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, “ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಯಾರ ಹೆಸರೂ ಪಕ್ಕಾ ಆಗಿಲ್ಲ. ನನ್ನ ಹೆಸರು ಮುಂಚೂಣಿಯಲ್ಲಿದೆ. ಆದರೆ, ನಾನಿನ್ನೂ ಯಾವುದಕ್ಕೂ ಒಪ್ಪಿಗೆ ಸೂಚಿಸಿಲ್ಲ. ನಮಗೇ ಅಂತಿಮ ನಿರ್ಧಾರ ಕೈಗೊಳ್ಳಲು ಹೇಳಿದ್ದಾರೆ.
ಸ್ಕ್ರೀನಿಂಗ್ ಕಮಿಟಿ ಸಭೆಯಲ್ಲಿ ಚರ್ಚಿಸಿದ ನಂತರ ನನ್ನ ತೀರ್ಮಾನ ತಿಳಿಸುವೆ. ನಮ್ಮದು ಯಾವುದೇ ಬೇಡಿಕೆಗಳಿಲ್ಲ. ಹೈಕಮಾಂಡ್ ಸಮ್ಮತಿ ಸಿಕ್ಕರೆ ನಾನೇ ಸ್ಪರ್ಧಿಸುತ್ತೇನೆ’ ಎಂದರು. “ಚುನಾವಣೆಗೆ ಸ್ಪರ್ಧಿಸು ವುದಿಲ್ಲ ಎಂದು ನಾನೆಲ್ಲೂ ಹೇಳಿಲ್ಲ. ಹೈಕಮಾಂಡ್ ಜತೆ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತೇವೆ. ಚುನಾವಣೆಗೆ ಸ್ಪರ್ಧಿಸಲು ಏ.4ರವರೆಗೂ ಸಮಯ ಇದೆ. ನಮ್ಮ ಕುಟುಂಬದವರೇ ಯಾರಾದರೂ ಸ್ಪರ್ಧಿಸ ಬೇಕೆಂಬ ಒತ್ತಡವಿದೆ. ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲಬೇಕಷ್ಟೆ. ಸೋಮವಾರಸ್ಕ್ರೀನಿಂ ಗ್ ಕಮಿಟಿ ಮೀಟಿಂಗ್ ಇದೆ. ಅಲ್ಲಿ ಚರ್ಚೆ ಮಾಡಲಿದ್ದೇವೆ. ಮಾಜಿ ಸಚಿವ ಎಚ್.ಎಂ.ರೇವಣ್ಣ ಜತೆ ಮಾತನಾಡಿದ್ದೇನೆ. ಅವರು ಸ್ಪರ್ಧಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ’ ಎಂದರು.