ಬಿಜೆಪಿಯಲ್ಲಿ ರಣೋತ್ಸಾಹ , ಮೈತ್ರಿಯಲ್ಲಿನ್ನೂ ಗೊಂದಲ


Team Udayavani, Mar 4, 2019, 1:35 AM IST

pratap-simha.jpg

ಮೈಸೂರು: ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗುತ್ತಿದ್ದಂತೆ ಮೈಸೂರು- ಕೊಡಗು ಕ್ಷೇತ್ರದ ಹಾಲಿ ಸಂಸದ ಪ್ರತಾಪ್‌ಸಿಂಹ ಪುನರಾಯ್ಕೆ ಬಯಸಿ ರಣೋತ್ಸಾಹದಿಂದ ಮುನ್ನಗ್ಗುತ್ತಿದ್ದರೆ, ಮೈತ್ರಿ ಪಕ್ಷದಲ್ಲಿ ಅಭ್ಯರ್ಥಿ ಯಾರಾಗಬೇಕು ಎಂಬುದಿರಲಿ, ಈ ಕ್ಷೇತ್ರದಲ್ಲಿ ಯಾವ ಪಕ್ಷ ಸ್ಪರ್ಧಿಸಬೇಕು ಎಂಬ ಗೊಂದಲವೇ ಬಗೆಹರಿದಿಲ್ಲ.

ಹಾಗೆ ನೋಡಿದರೆ, ಮೂರು ಪಕ್ಷಗಳಲ್ಲೂ ಆಕಾಂಕ್ಷಿಗಳ ಸಂಖ್ಯೆಗೇನು ಕೊರತೆ ಇಲ್ಲ. ಹಾಲಿ ಸಂಸದರಿಗೇ ಟಿಕೆಟ್‌ ಎನ್ನುವ ನಿಟ್ಟಿನಲ್ಲಿ ಸಂಸದ ಪ್ರತಾಪ್‌ಸಿಂಹ ಅವರು, ಕಳೆದ 5 ವರ್ಷಗಳಲ್ಲಿ ಕ್ಷೇತ್ರದಲ್ಲಿ ತಾವು ಮಾಡಿರುವ ಸಾಧನೆಯ ಜೊತೆಗೆ ಬಿಜೆಪಿ ಯುವ ಮೋರ್ಚಾ ರಾಜ್ಯಾಧ್ಯಕ್ಷನಾಗಿ ಪಕ್ಷ ಸಂಘಟನೆಯಲ್ಲೂ ತೊಡಗಿರುವುದರಿಂದ ತಾವೇ ಅಭ್ಯರ್ಥಿ ಎನ್ನುತ್ತಾ ಮತದಾರರ ಮನಗೆಲ್ಲುವ ಯತ್ನ ನಡೆಸಿದ್ದಾರೆ. ಮಡಿಕೇರಿ ಶಾಸಕ ಅಪ್ಪಚ್ಚು ರಂಜನ್‌, ಕೊಡಗಿನವರಿಗೂ ಒಮ್ಮೆ ಅವಕಾಶ ಕೊಡಿ ಎಂದು ಟಿಕೆಟ್‌ಗಾಗಿ ಹಕ್ಕು ಮಂಡಿಸಿದ್ದರೆ,ವಿಧಾನಸಭಾ ಚುನಾವಣೆಯಲ್ಲಿ ಮೈಸೂರಿನ ಚಾಮರಾಜ ಕ್ಷೇತ್ರದ ಪ್ರಬಲ ಆಕಾಂಕ್ಷಿಯಾಗಿದ್ದ ನಗರ ಬಿಜೆಪಿ ಅಧ್ಯಕ್ಷ ಡಾ.ಬಿ.ಎಚ್‌.ಮಂಜುನಾಥ್‌ ಕೂಡ ಈ ಚುನಾವಣೆಯಲ್ಲಿ ಟಿಕೆಟ್‌ ಬಯಸಿದ್ದಾರೆ. ಆಮತ್ತೂಮ್ಮೆ ಮೋಅಧಿಕಾರಕ್ಕೆ ಬರಬೇಕು ಕಾರಣಕ್ಕೆ ಯಾರಿಗೇ ಟಿಕೆಟ್‌ ಸಿಕ್ಕರೂ ಉಳಿದ ಆಕಾಂಕ್ಷಿ  ಗಳು ಪಕ್ಷದ ಗೆಲುವಿಗಾಗಿ ದುಡಿಯಲಿಎಂಬ ಬಿಜೆಪಿಯವರಲ್ಲಿದೆ. ಹಿಂದೊಮ್ಮೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾಗಿ ಕೆಲಸ ಮಾಡಿ ಜಿಲ್ಲೆಯಲ್ಲಿ ಹಿಡಿತ ಹೊಂದಿರುವ ಶೋಭಾ ಕರಂದ್ಲಾಜೆ ಅವರ ಕಣ್ಣೂ ಕ್ಷೇತ್ರದ ಮೇಲಿದೆ ಎಂದು ಹೇಳಲಾಗುತ್ತಿದೆ. ಮೈತ್ರಿ ಗೊಂದಲ: ರಾಜ್ಯದ ಸಮ್ಮಿಶ್ರ ಸರ್ಕಾರದ ಪಾಲುದಾರ ಪಕ್ಷಗಳಾದ ಜೆಡಿಎಸ್‌ ಮತ್ತು ಕಾಂಗ್ರೆಸ್‌ನವರಲ್ಲಿ ಇನ್ನೂ ರಾಜ್ಯಮಟ್ಟದಲ್ಲಿ ಸ್ಥಾನ ಹೊಂದಾಣಿಕೆಯ ಗೊಂದಲವೇ ಬಗೆಹರಿದಿಲ್ಲ. 12 ಕ್ಷೇತ್ರಗಳಿಗೆ ಜೆಡಿಎಸ್‌ ಬೇಡಿಕೆ ಸಲ್ಲಿಸಿದ್ದರೆ, ಅಷ್ಟು ಕ್ಷೇತ್ರ ಬಿಟ್ಟು ಕೊಡಲಾಗುವುದಿಲ್ಲ ಎಂದು ಕಾಂಗ್ರೆಸ್‌ ಚೌಕಾಸಿ ‌ಡೆಸಿದೆ. ಜೆಡಿಎಸ್‌ನ ‌ಕೋಟೆಗಳಾಗಿರುವ ಹಾಸನ ಮತ್ತು ಮಂಡ್ಯ ಕ್ಷೇತ್ರ ಜೆಡಿಎಸ್‌ಗೆ, ಮೈಸೂರು ಮತ್ತು ಚಾಮರಾಜನಗರ ಕ್ಷೇತ್ರ ಕಾಂಗ್ರೆಸ್‌ಗೆ ಎಂದು ಹೇಳಲಾಗುತ್ತಿದೆಯಾದರೂ ಎರಡೂ ಪಕ್ಷಗಳಲ್ಲಿನ ಸ್ಥಳೀಯ ಮುಖಂಡರು  ಇದಕ್ಕೆ ಅಪಸ್ವರ ಎತ್ತಿರುವುದರಿಂದ ಗೊಂದಲ ಬಗೆಹರಿಯದಾಗಿದೆ. ಶೀಘ್ರವೇ ಈ ಗೊಂದಲ ಬಗೆಹರಿಯದಿದ್ದರೆ ಎರಡೂ ಪಕ್ಷಗಳಿಗೂ ಹಾನಿಯಾಗಲಿದ್ದು, ಬಿಜೆಪಿಗೆ ವರದಾನವಾಗಲಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ಮೈಸೂರು-ಕೊಡಗು ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟು ಕೊಡಬೇಕು ಎಂದು ವಾದ ಮಂಡಿಸುವ ಆ ಪಕ್ಷದ ನಾಯಕರು, ದೇವೇಗೌಡರು ಸ್ಪರ್ಧಿಸಿದರೆ ಗೆಲುವು ಸುಲಭ ಎಂದು ಅವರನ್ನು ಕರೆ ತರುವ ಪ್ರಯತ್ನ ನಡೆಸಿದ್ದಾರೆ. ಜೊತೆಗೆ, ಸುಮಲತಾ ಅಂಬರೀಶ್‌ ಅವರು ಮಂಡ್ಯದಿಂದಲೇ ಸ್ಪರ್ಧಿಸಲು ಪಟ್ಟು ಹಿಡಿದಿರುವುದರಿಂದ ನಿಖೀಲ್‌ ಕುಮಾರಸ್ವಾಮಿ ಸಹ ಮಂಡ್ಯ ಬದಲಿಗೆ ಮೈಸೂರು ಸುರಕ್ಷಿತ ಕ್ಷೇತ್ರ ಎಂದು ಇಲ್ಲಿಂದ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯಅವರು, ” ನಾನು ಜನತಾ ಪರಿವಾರದಲ್ಲಿದ್ದಾಗಲೇ ಈ ಕ್ಷೇತ್ರವನ್ನು ಗೆಲ್ಲಲಾಗಿಲ್ಲ. ಹೀಗಾಗಿ, ಈ ಕ್ಷೇತ್ರವನ್ನು ಕಾಂಗ್ರೆಸ್‌ಗೆà ಬಿಟ್ಟು ಕೊಡಬೇಕು, ಎಂದು ಹಕ್ಕು ಮಂಡನೆ ಮಾಡುತ್ತಿದ್ದಾರೆ.

ಜಿಲ್ಲೆಯ ಸಚಿವರಾದ ಜಿ.ಟಿ.ದೇವೇಗೌಡ ಹಾಗೂ ಸಾ.ರಾ.ಮಹೇಶ್‌ ಅವರು ನಿಖೀಲ್‌ ಕುಮಾರ ಸ್ವಾಮಿ ಅವರೇ ಅಭ್ಯರ್ಥಿ ಎಂದು ಬಿಂಬಿಸುತ್ತಿದ್ದಾರೆ. ಆದರೆ, ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ನಡೆಸುತ್ತಿರುವುದರಿಂದ ಮೈಸೂರಿನವರೇ ಆದ ಸಿದ್ದರಾಮಯ್ಯ ಅವರನ್ನು ವಿಶ್ವಾಸಕ್ಕೆ ತೆಗೆದು ಕೊಳ್ಳದೆ ಜೆಡಿಎಸ್‌ ಮುಂದಡಿಯಿಡುವಂತಿಲ್ಲ.

ಈ ಗೊಂದಲದ ನಡುವೆಯೇ ಕಾಂಗ್ರೆಸ್‌ನಲ್ಲೂ ಆಕಾಂಕ್ಷಿಗಳ ಪಟ್ಟಿ ಬೆಳೆಯುತ್ತಲೇ ಹೋಗುತ್ತಿದೆ. ವಿಧಾನಸಭಾ ಚುನಾವಣೆಗೂ ಮುನ್ನ ಸಿದ್ದರಾಮಯ್ಯ ಅವರೇ ಕಾಂಗ್ರೆಸ್‌ಗೆ ಕರೆ ತಂದಿರುವ ಈ ಕ್ಷೇತ್ರವನ್ನು ಬಿಜೆಪಿಯಿಂದ ಎರಡು ಬಾರಿ ಪ್ರತಿನಿಧಿಸಿದ್ದ ಸಿ.ಎಚ್‌.ವಿಜಯಶಂಕರ್‌ ಪ್ರಬಲ ಆಕಾಂಕ್ಷಿ.

ಅವರ ಜೊತೆಗೆ, ಎಐಸಿಸಿ ಕಾರ್ಯದರ್ಶಿಗಳಾದ ಮಾಜಿ ಮುಖ್ಯಮಂತ್ರಿ  .ದೇವರಾಜ ಅರಸು ಅವರ ಮೊಮ್ಮಗ ಸೂರಜ್‌ ಹೆಗಡೆ, ಮೈಸೂರು ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಡಾ.ಬಿ.ಜೆ. ವಿಜಯಕುಮಾರ್‌, ಜೆ.ಜೆ.ಆನಂದ್‌, ದಾಸೇಗೌಡ
ಮೊದಲಾದವರು ಟಿಕೆಟ್‌ ಬಯಸಿದ್ದಾರೆ. ಹಿರಿಯ ವಕೀಲ ಚಂದ್ರಮೌಳಿ ಅವರ ಹೆಸರೂ ಚಾಲ್ತಿಯಲ್ಲಿದೆ.

ಮೈತ್ರಿ ಧರ್ಮದ ಪ್ರಕಾರ ಈ ಕ್ಷೇತ್ರವನ್ನು ಕಾಂಗ್ರೆಸ್‌ಗೆ ಬಿಟ್ಟು ಕೊಡಬೇಕು. ಕಾಂಗ್ರೆಸ್‌ ಪಕ್ಷದ ಹಿತವೇ ನಮಗೆ ಮುಖ್ಯ.
● ಸೂರಜ್‌ ಹೆಗಡೆ, ಎಐಸಿಸಿ ಮುಖಂಡ.

ಗಿರೀಶ್‌ ಹುಣಸೂರು

ಟಾಪ್ ನ್ಯೂಸ್

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.