ಅಸೈಗೊಳಿಯಲ್ಲಿ ನಳಿನ್ ಶಕ್ತಿ ಪ್ರದರ್ಶನ
Team Udayavani, Apr 9, 2019, 9:43 AM IST
ಮಂಗಳೂರು: ದಕ್ಷಿಣ ಕನ್ನಡ ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್ ಅವರು ಮಂಗಳೂರು ವಿಧಾನಸಭಾ ಕ್ಷೇತ್ರದ ಕೊಣಾಜೆ ಶಕ್ತಿ ಕೇಂದ್ರ ಅಸೈಗೊಳಿಯಲ್ಲಿ ನಡೆದ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದರು.
ಸಭೆಯಲ್ಲಿ ಮಾಜೀ ವಿಧಾನಪರಿಷತ್ ಸದಸ್ಯ ಗಣೇಶ್ ಕಾರ್ಣಿಕ್, ಬದ್ರಿನಾಥ್ ಕಾಮತ್, ರವೀಂದ್ರ ಶೆಟ್ಟಿ ಉಳಿದೋಟ್ಟು, ಚಂದ್ರಹಾಸ ಉಳ್ಳಾಲ್, ಸತೀಶ್ ಕುಂಪಲ, ಧನಲಕ್ಷ್ಮೀ ಘಟ್ಟಿ, ಜಯರಾಮ್ ಶೆಟ್ಟಿ, ಸೀತಾರಾಮ್ ಶೆಟ್ಟಿ, ಮೋಹನ್ ರಾಜ್ ಕೋಟೆಕಾರ್ ಇನ್ನಿತರ ನಾಯಕರು ಹಾಗೂ ಬೃಹತ್ ಸಂಖ್ಯೆಯಲ್ಲಿ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.