ನಳಿನ್ಗೆ ಗೆಲುವು: ಕೋಟ ಶ್ರೀನಿವಾಸ ಪೂಜಾರಿ
Team Udayavani, Apr 11, 2019, 6:00 AM IST
ಮಂಗಳೂರು: ದೇಶ ಮೊದಲು ಎನ್ನುವವರ ಪರವಾಗಿ ಮತದಾರರಿರುವುದು ಸ್ಪಷ್ಟವಾಗಿದೆ. ದ.ಕ. ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲು 2 ಲಕ್ಷಕ್ಕೂ ಅಧಿಕ ಮತಗಳಿಂದ ಗೆಲುವು ಸಾಧಿಸುವುದು ನಿಚ್ಚಳ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಅವರು, ದ.ಕ. ಕ್ಷೇತ್ರದ ಎಲ್ಲ 8 ವಿಧಾನಸಭಾ ಕ್ಷೇತ್ರಗಳು ಮತ್ತು 1,861 ಮತಗಟ್ಟೆಗಳ ಕಾರ್ಯಕರ್ತರು ನೀಡಿದ ಮಾಹಿತಿಯಂತೆ ಮತದಾರರ ಒಲವು ಬಿಜೆಪಿ ಕಡೆಗಿದೆ. ಕೇಂದ್ರ ಸರಕಾರ ಕೈಗೊಂಡಿರುವ ಜನ ಕಲ್ಯಾಣ ಕಾರ್ಯಕ್ರಮ, ದೇಶದ ಸುರಕ್ಷತೆ ದೃಷ್ಟಿಯಿಂದ ಮೋದಿ ಕೈಗೊಂಡ ನಿರ್ಧಾರಗಳು ಮತ್ತು 10 ವರ್ಷಗಳಲ್ಲಿ ವ್ಯಾಪಕ ಜನ ಸಂಪರ್ಕವು ನಳಿನ್ ಗೆಲುವಿಗೆ ಸುಗಮ ದಾರಿಯಾಗಿದೆ ಎಂದರು.
ಬಿಜೆಪಿ ಪ್ರಣಾಳಿಕೆಯಲ್ಲಿ 370ನೇ ವಿಧಿಯನ್ನು ರದ್ದುಪಡಿಸುವ ಸ್ಪಷ್ಟ ಭರವಸೆ, ಸೌಹಾರ್ದದಿಂದ ರಾಮ ಮಂದಿರ ನಿರ್ಮಿಸುವ ಆಶ್ವಾಸನೆ ನೀಡಿದೆ. ಸಮಾನ ನಾಗರಿಕ ಸಂಹಿತೆ ಜಾರಿಗೆ ಬದ್ಧವಾಗಿದೆ ಎಂದರು.
ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರಕಾರವು ಕೇಂದ್ರದ ಜನಪರ ಯೋಜನೆಗಳನ್ನು ಜಾರಿ ಮಾಡಲು ಮತ್ತು ಅವು ಜನರಿಗೆ ತಲುಪದಂತೆ ಮಾಡಲು ಅಡ್ಡಗಾಲು ಹಾಕುತ್ತಿದೆ. ಕಿಸಾನ್ ಸಮ್ಮಾನ್ಗೆ ರಾಜ್ಯದ 76 ಲಕ್ಷ ರೈತರು ಅರ್ಹರಿದ್ದರೂ ಕೇವಲ 16 ಲಕ್ಷ ರೈತರ ಪಟ್ಟಿ ಮಾಡುವ ಮೂಲಕ ಕೇಂದ್ರದ ಯೋಜನೆಯನ್ನು ರೈತರಿಗೆ ತಲುಪದಂತೆ ಮಾಡುತ್ತಿದೆ ಎಂದು ಆರೋಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ
ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ವ್ಯಂಗ್ಯ
Mangaluru ಪೆಟ್ರೋಲ್, ಡೀಸೆಲ್ ತುಟ್ಟಿ : ಪುಷ್ಪಾ ಅಮರನಾಥ್
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ