ನಾಮಧಾರ್‌ಗೆ ಸೋಲಿನ ಭಯ: ಮೋದಿ


Team Udayavani, Apr 10, 2019, 3:00 AM IST

namadhar

ಮೈಸೂರು: ಕಾಂಗ್ರೆಸ್‌ ಅಧ್ಯಕ್ಷ ನಾಮ್‌ಧಾರ್‌ರ ಹಿಂದಿನ ಕ್ಷೇತ್ರದಲ್ಲಿ ಸೋಲಿನ ಭಯ ಕಾಡುತ್ತಿರುವುದರಿಂದ ದಕ್ಷಿಣಕ್ಕೆ ಓಡಿ ಬಂದಿದ್ದಾರೆ. ಪಕ್ಷದ ಅಧ್ಯಕ್ಷನ ಸ್ಥಿತಿಯೇ ಹೀಗಾದರೆ, ಇನ್ನು ಪಕ್ಷದ ಪರಿಸ್ಥಿತಿ ಹೇಗಿರಬಹುದು ಎಂದು ಪ್ರಧಾನಿ ನರೇಂದ್ರಮೋದಿ, ರಾಹುಲ್‌ ಗಾಂಧಿ ಹೆಸರೇಳದೆ ಲೇವಡಿ ಮಾಡಿದರು.

ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಮಂಗಳವಾರ ಏರ್ಪಡಿಸಿದ್ದ ಲೋಕಸಭಾ ಚುನಾವಣೆ ಪ್ರಚಾರದ ಬೃಹತ್‌ ಸಭೆಯನ್ನು ಉದ್ದೇಶಿಸಿ ಮಾತನಾಡಿದ, ಅವರು ತಮ್ಮ 23 ನಿಮಿಷಗಳ ಭಾಷಣದಲ್ಲಿ ಎಲ್ಲಿಯೂ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಹೆಸರು ಪ್ರಸ್ತಾಪಿಸದೆ ನಾಮ್‌ಧಾರ್‌ ಎಂದೇ ಪರೋಕ್ಷವಾಗಿ ತಿವಿದರು.

ನಮ್ಮ ಸೇನೆಯ ಪರಾಕ್ರಮದ ಮೇಲೆ ಭರವಸೆ ಇದೆಯಾ ಎಂದು ಜನರನ್ನು ಪ್ರಶ್ನಿಸಿದ ಅವರು, ಕಾಂಗ್ರೆಸ್‌ ಮತ್ತು ಅದರ ಮಿತ್ರ ಪಕ್ಷಗಳಿಗೆ ಸೇನೆಯ ಮೇಲೂ ಸಂಶಯವಿದೆ. ಮತಬ್ಯಾಂಕ್‌ ಗಾಗಿ ಅವರು ಎಲ್ಲದರಲ್ಲೂ ತುಷ್ಠಿàಕರಣದ ರಾಜಕೀಯ ಮಾಡುತ್ತಿದ್ದಾರೆ. ಶಬರಿ ಮಲೆ ವಿಚಾರದಲ್ಲಿ ದೇಶದ ಜನತೆಯ ಭಾವನೆಯೇ ಬಿಜೆಪಿಗೂ ಇದೆ.

ಹೀಗಾಗಿ ಶಬರಿಮಲೆಯ ಪೂಜಾ ಪದ್ಧತಿ ಮುಂದುವರಿಕೆಗೆ ಬಿಜೆಪಿ ಬದ್ಧವಾಗಿದೆ. ಆದರೆ, ಕೇರಳದ ಕಮ್ಯುನಿಸ್ಟ್‌ ಸರ್ಕಾರ ಶಬರಿಮಲೆ ಭಕ್ತರ ಭಾವನೆಗಳ ಜತೆಗೆ ಆಟವಾಡುತ್ತಾ ಭಕ್ತರ ಮೇಲೆ ಲಾಠಿ ಪ್ರಹಾರ ನಡೆಸಿ, ಜೈಲಿಗೂ ಹಾಕಿತು. ಕಮ್ಯುನಿಸ್ಟರ ಈ ಕ್ರಮಕ್ಕೆ ಕಾಂಗ್ರೆಸ್‌ ಕೂಡ ಸಹಮತ ನೀಡಿತ್ತು. ನಮ್ಮ ಸರ್ಕಾರ ಶಬರಿಮಲೆಗೆ ಸಂವಿಧಾನ ಬದ್ಧ ರಕ್ಷಣೆ ನೀಡಲಿದೆ ಎಂದರು.

ದೆಹಲಿಯ ಹವಾನಿಯಂತ್ರಿತ ಕೊಠಡಿಯಲ್ಲಿ ಕುಳಿತು ಅರ್ಧ ಪರ್ಸೆಂಟ್‌ ಅಲ್ಲಿ, ಅರ್ಧ ಪರ್ಸೆಂಟ್‌ ಇಲ್ಲಿ ನೋಡುವವರು ಮೈಸೂರಿನ ಈ ಮೈದಾನವನ್ನೊಮ್ಮೆ ನೋಡಲಿ ಎಂದು ರಾಹುಲ್‌ ಗಾಂಧಿಯನ್ನು ಲೇವಡಿ ಮಾಡಿದರು.

ಇಂದು ಲಾತೂರ್‌ನಿಂದ ಆರಂಭಿಸಿ ಕರ್ನಾಟಕದ ಚಿತ್ರದುರ್ಗ, ಮೈಸೂರಿಗೆ ಬಂದಿದ್ದೇನೆ. ಎಲ್ಲೆಲ್ಲೂ ಜನರ ಉತ್ಸಾಹ ಅಭೂತಪೂರ್ವವಾಗಿ ಕಂಡುಬರುತ್ತಿದೆ. ನಿಮ್ಮ ಸೇವೆ ಮಾಡುವ ಅವಕಾಶವನ್ನು ಮತ್ತೂಮ್ಮೆ ನಮಗೆ ಕೊಡಿ ಎಂದು ಮನವಿ ಮಾಡಿದರು.

ಮೈಸೂರು ವಿಕಾಸ: ಮೈಸೂರು ಭಾರತದ ಸಮೃದ್ಧ ಸಂಸ್ಕೃತಿಯ ಪ್ರತೀಕ. ನಮ್ಮ ಸರ್ಕಾರ ಮೈಸೂರು -ಬೆಂಗಳೂರು ಹೆದ್ದಾರಿ ಅಭಿವೃದ್ಧಿಗೆ ಚಾಲನೆ ನೀಡಿದೆ. ಈ ಕಾಮಗಾರಿ ಪೂರ್ಣಗೊಂಡರೆ ಮೈಸೂರು-ಬೆಂಗಳೂರು ನಡುವೆ ರಸ್ತೆ ಸಂಪರ್ಕ ಉತ್ತಮಗೊಂಡು ಈ ಭಾಗದ ಸಮಗ್ರ ಅಭಿವೃದ್ಧಿ ಸಾಧ್ಯವಾಗಲಿದೆ ಎಂದರು.

ಉಡಾನ್‌ ಯೋಜನೆಯಡಿ ಮೈಸೂರು ವಿಮಾನ ನಿಲ್ದಾಣದಿಂದ ವಿಮಾನ ಹಾರಾಟ ಆರಂಭಿಸಿದ್ದೇವೆ. ಮೈಸೂರಲ್ಲಿ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಿಸಿದ್ದೇವೆ. ಚೌಕಿದಾರ್‌ನ ಸರ್ಕಾರದ ಈ ಕೆಲಸಕ್ಕೆ ನಿಮ್ಮ ಸಹಮತವಿದೆ ಎಂದು ಭಾವಿಸಿದ್ದೇನೆ ಎಂದು ಹೇಳಿದರು.

ಸಿಂಹ, ಪ್ರಸಾದ್‌ ಹೆಸರೇಳಲಿಲ್ಲ: ಮಂಡ್ಯ ಕ್ಷೇತ್ರದಲ್ಲಿ ಬಿಜೆಪಿ ಬೆಂಬಲ ನೀಡಿರುವ ಪಕ್ಷೇತರ ಅಭ್ಯರ್ಥಿ ಸುಮಲತಾ ಅವರ ಹೆಸರು ಪ್ರಸ್ತಾಪಿಸಿದ ಮೋದಿ ಅವರು, ಮೈಸೂರು-ಕೊಡಗು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರತಾಪ್‌ ಸಿಂಹ ಹಾಗೂ ಚಾಮರಾಜ ನಗರ ಕ್ಷೇತ್ರದ ಅಭ್ಯರ್ಥಿ ವಿ.ಶ್ರೀನಿವಾಸ ಪ್ರಸಾದ್‌ ಹೆಸರೇಳದೆ ನಮ್ಮ ಉಮೇದುವಾರರು ಎಂದಷ್ಟೇ ಪ್ರಸ್ತಾಪಿಸಿದ್ದು ಚರ್ಚೆಗೆ ಗ್ರಾಸವಾಗಿದೆ.

ಅನುವಾದ ಬೇಡ: ಮೋದಿಯವರು ಭಾಷಣಕ್ಕೆ ನಿಂತಾಗ ಅವರ ಭಾಷಣವನ್ನು ಕನ್ನಡಕ್ಕೆ ಅನುವಾದಿಸಲು ರಾಜ್ಯ ಬಿಜೆಪಿ ವಕ್ತಾರ ಗೋ.ಮಧುಸೂದನ್‌ ಮೈಕ್‌ ಹಿಡಿದು ಪಕ್ಕಕ್ಕೆ ಬಂದು ನಿಂತರು. ಆಗ ಮೋದಿ, ನನ್ನ ಹಿಂದಿ ಭಾಷಣ ನಿಮಗೆ ಅರ್ಥ ವಾಗುತ್ತದೆಯೇ? ಅನುವಾದ ಬೇಕೆ? ಎಂದು ಪ್ರಶ್ನಿಸಿದರು. ಸಭಿಕರು ಅನುವಾದ ಬೇಡ ಎಂದಿದ್ದರಿಂದ ಮಧುಸೂದನ್‌ ವಾಪಸ್‌ ಹೋದರು.

ಕನ್ನಡದಲ್ಲಿ ಭಾಷಣ ಆರಂಭ: ಸಂಜೆ 5.13ಕ್ಕೆ ವೇದಿಕೆಗೆ ಆಗಮಿಸಿದ ಮೋದಿ ಅವರು 5.17ಕ್ಕೆ ಭಾಷಣ ಆರಂಭಿಸಿದರು. ಕನ್ನಡದಲ್ಲಿ ಭಾಷಣ ಆರಂಭಿಸಿ, ಮೈಸೂರು-ಚಾಮರಾಜ ನಗರ-ಮಂಡ್ಯ-ಹಾಸನ ಜನತೆಗೆ ನಿಮ್ಮ ಚೌಕಿದಾರ್‌ ನರೇಂದ್ರಮೋದಿ ಮಾಡುವ ನಮಸ್ಕಾರಗಳು. ಚಾಮುಂಡೇಶ್ವರಿ ದೇವಿಯ ಈ ನೆಲದಲ್ಲಿ ನಿಂತು ಸರ್‌ ಎಂ.ವಿಶ್ವೇಶ್ವರಯ್ಯರಂತಹ ನಾಯಕ ಸೇರಿದಂತೆ ಎಲ್ಲರಿಗೆ ನಮಿಸುವೆ. 21ನೇ ಶತಮಾನದಲ್ಲಿ ಭಾರತವನ್ನು ಸದೃಢಗೊಳಿಸಲು ಈ ಚೌಕಿದಾರ್‌ನಿಗೆ ನಿಮ್ಮ ಸಹಕಾರವಿರಲಿ ಎಂದು ಕೋರಿದರು.

ಸುಮಲತಾ ಹೆಸರು ಪ್ರಸ್ತಾಪ: ತಮ್ಮ ಭಾಷಣದಲ್ಲಿ ಸುಮಲತಾ ಅವರ ಹೆಸರು ಪ್ರಸ್ತಾಪಿಸಿದ ಮೋದಿ, ಅಂಬರೀಶ್‌ ಉತ್ತಮ ನಾಯಕರಾಗಿದ್ದರು. ಅಂಬರೀಶ್‌ ಮತ್ತು ಸುಮಲತಾ ಕನ್ನಡ ಭಾಷೆ ಮತ್ತು ಸಂಸ್ಕೃತಿಯ ಸೇವೆ ಮಾಡಿದ್ದಾರೆ. ಹೀಗಾಗಿ ಸುಮಲತಾ ಅವರನ್ನು ಆಶೀರ್ವದಿಸುತ್ತೀರಿ ಎನ್ನುವ ವಿಶ್ವಾಸವಿದೆ ಎಂದರು.

ಟಾಪ್ ನ್ಯೂಸ್

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.