“ನಿಂಬೆಹಣ್ಣು ರೇವಣ್ಣ’ನ ಆಟ ಈ ಬಾರಿ ನಡೆಯಲ್ಲ: ಈಶ್ವರಪ್ಪ
Team Udayavani, Apr 13, 2019, 5:00 AM IST
ಶಿವಮೊಗ್ಗ: ಈ ಬಾರಿಯ ಚುನಾವಣೆಯಲ್ಲಿ “ನಿಂಬೆಹಣ್ಣು ರೇವಣ್ಣ’ನ ಆಟ ಏನೂ ನಡೆಯಲ್ಲ ಎಂದು ಶಾಸಕ ಕೆ.ಎಸ್.ಈಶ್ವರಪ್ಪ ಲೇವಡಿ ಮಾಡಿದ್ದಾರೆ.
ನಗರದಲ್ಲಿ ಶುಕ್ರವಾರ ಬಿ.ವೈ.ರಾಘವೇಂದ್ರ ಪರ ಅವರು ಪಾದಯಾತ್ರೆ ನಡೆಸಿದರು. ಹಿಂದೆ ದೇವೇಗೌಡರು, ಮೋದಿ ಪ್ರಧಾನಿಯಾದರೆ ದೇಶ ಬಿಟ್ಟು ಹೋಗುತ್ತೇನೆ ಎಂದಿದ್ದರು.
ಈಗ ಮೋದಿ ಮತ್ತೂಮ್ಮೆ ಪ್ರಧಾನಿಯಾದರೆ ರಾಜಕೀಯ ಸನ್ಯಾಸತ್ವ ಸ್ವೀಕರಿಸುವುದಾಗಿ ಎಚ್.ಡಿ.ರೇವಣ್ಣ ಹೇಳಿದ್ದಾರೆ. ದೇವೇಗೌಡರು ದೇಶ ಬಿಟ್ಟು ಹೋಗುವುದೂ ಬೇಡ. ರೇವಣ್ಣ ರಾಜಕೀಯ ಸನ್ಯಾಸತ್ವ ಸ್ವೀಕರಿಸುವುದೂ ಬೇಡ.
ಅಪ್ಪ, ಮಕ್ಕಳು ಮೊದಲು ಸುಳ್ಳು ಹೇಳುವುದನ್ನು ಬಿಡಲಿ ಎಂದರು. ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಮೋದಿ ಮತ್ತೂಮ್ಮೆ ಪ್ರಧಾನಿಯಾಗಲಿ ಎಂದು ಹೇಳಿರುವ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಯಾರ ಬಳಿ ದಂಡ ಇರುತ್ತದೋ ಅವರ ಮಾತು ನಡೆಯುತ್ತದೆ.
ಭಾರತೀಯ ಸೇನೆ ಮತ್ತು ಮೋದಿಯ ಶಕ್ತಿ ಗೊತ್ತಾಗಿ ಇಮ್ರಾನ್ ಖಾನ್ ಭಾರತಕ್ಕೆ ಶರಣಾಗದಿದ್ದರೆ ಪಾಕಿಸ್ತಾನ ಉಳಿಯುವುದಿಲ್ಲ ಎಂದು ಮನಗಂಡು ಇಂತಹ ಹೇಳಿಕೆ ನೀಡಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ
Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ
Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ
Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ
Sandalwood: ಸ್ಟಾರ್ ಸಿನ್ಮಾಗಳ ರಿಲೀಸ್ ಟೆನ್ಶನ್: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ