ಸ್ಪರ್ಧಿಸದೇ ಇರುವ ನಿರ್ಧಾರ ಪ್ರಿಯಾಂಕಾರದ್ದೇ: ಸ್ಯಾಮ್
Team Udayavani, Apr 27, 2019, 5:37 PM IST
ವಾರಾಣಸಿಯಲ್ಲಿ ಪ್ರಧಾನಿ ಮೋದಿ ವಿರುದ್ಧ ಸ್ಪರ್ಧಿಸದೇ ಇರುವುದು ಸ್ವತಃ ಪ್ರಿಯಾಂಕಾ ವಾದ್ರಾ ಅವರ ನಿರ್ಧಾರ ಎಂದು ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ ಶುಕ್ರವಾರ ತಿಳಿಸಿದ್ದಾರೆ. ಪ್ರಿಯಾಂಕಾ ಅವರು ಮೋದಿ ವಿರುದ್ಧ ಕಣಕ್ಕಿಳಿಯುತ್ತಾರೆ ಎಂಬ ಸುದ್ದಿಗಳು ಹರಿದಾಡಿದ್ದರೂ, ಕೊನೆಗೆ ಆ ಕ್ಷೇತ್ರದಲ್ಲಿ
ಅಜಯ್ ರೈಗೆ ಟಿಕೆಟ್ ನೀಡುವ ಮೂಲಕ ಕಾಂಗ್ರೆಸ್ ಅಚ್ಚರಿ ಮೂಡಿಸಿತ್ತು. ಈ ಕುರಿತು ಪ್ರಶ್ನಿಸಿದಾಗ ಅದಕ್ಕೆ ಪ್ರತಿಕ್ರಿಯಿಸಿದ ಪಿತ್ರೋಡಾ, “ಈ ಕುರಿತು ಅಂತಿಮ ನಿರ್ಧಾರವನ್ನು ನೀವೇ ಕೈಗೊಳ್ಳಬೇಕು ಎಂದು ಪಕ್ಷದ ಅಧ್ಯಕ್ಷರು
ಪ್ರಿಯಾಂಕಾರಿಗೆ ಸೂಚಿಸಿದ್ದರು.
ಅದರಂತೆ ಪ್ರಿಯಾಂಕಾ ಸ್ಪರ್ಧಿಸದೇ ಇರಲು ನಿರ್ಧರಿಸಿದರು’ ಎಂದು ಹೇಳಿದ್ದಾರೆ. ಒಂದೇ ಕ್ಷೇತ್ರದ ಕಡೆಗೆ ಗಮನ ಹರಿಸುವ ಬದಲಿಗೆ, ಸದ್ಯಕ್ಕೆ ತಮಗೆ ನೀಡಲಾದ ಜವಾಬ್ದಾರಿಯನ್ನು ನಿಭಾಯಿಸುವುದಕ್ಕೆ ಗಮನ ಕೇಂದ್ರೀಕರಿಸುವುದು ಸೂಕ್ತ ಎಂದು ಮನಗಂಡು ಪ್ರಿಯಾಂಕಾ ಈ ನಿರ್ಧಾರ ಕೈಗೊಂಡರು ಎಂದೂ ಪಿತ್ರೋಡಾ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್