ಇಂದಿನಿಂದ ಮಂಡ್ಯದಲ್ಲಿ ನಮ್ಮದೇ ಹವಾ: ಕುಮಾರಸ್ವಾಮಿ


Team Udayavani, Mar 25, 2019, 6:44 AM IST

100-b

ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿಯಾಗಿ ನಿಖಿಲ್‌ ಸೋಮವಾರ ನಾಮಪತ್ರ ಸಲ್ಲಿಸಲಿರುವ ಹಿನ್ನೆಲೆಯಲ್ಲಿ ನಾಗಮಂಗಲ ತಾಲೂಕಿನ ಆದಿಚುಂಚನಗಿರಿ ಕ್ಷೇತ್ರಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಕುಮಾರಸ್ವಾಮಿ ಮತ್ತು ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಅವರು, ಕ್ಷೇತ್ರ ದೈವ ಶ್ರೀ ಕಾಲಭೈರವೇಶ್ವರ, ಮಾಳಮ್ಮ, ಸ್ತಂಭಾಂಬಿಕೆಗಳಿಗೆ ಪೂಜೆ ಸಲ್ಲಿಸಿದರು. ಬಳಿಕ ಆದಿಚುಂಚನಗಿರಿ ಪೀಠಾಧ್ಯಕ್ಷ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಯವರ ಆಶೀರ್ವಾದ ಪಡೆದರು. ಈ ವೇಳೆ ಪತ್ರಕರ್ತರ ಜತೆ ಮಾತನಾಡಿದ ಸಿಎಂ ಕುಮಾರಸ್ವಾಮಿ ಅವರು ಭಿನ್ನಾ ಭಿಪ್ರಾಯ, ಕುತಂತ್ರ ರಾಜಕಾರಣಕ್ಕೆ ನಾನಾಗಲಿ, ದೇವೇಗೌಡರಾಗಲಿ ತಲೆಕೆಡಿಸಿಕೊಳ್ಳುವುದಿಲ್ಲ. ನನಗೆ ಕಾರ್ಯಕರ್ತರ ಶಕ್ತಿ ಇದೆ. ಯಾವುದೇ ಭಯ, ಆತಂಕ ಇಲ್ಲ ಎಂದು ಹೇಳುವ ಮೂಲಕ ನಿಖಿಲ್‌ ಸ್ಫರ್ಧೆಗೆ ವಿರೋಧ ವ್ಯಕ್ತಪಡಿಸಿರುವ ಮಿತ್ರಪಕ್ಷ ಕಾಂಗ್ರೆಸ್‌ನ ಸ್ಥಳೀಯ ಮುಖಂಡರ ವಿರುದ್ಧ ಹರಿಹಾಯ್ದರು. ಸಿಎಂ ಹೇಳಿಕೆಯ ಕೆಲವು ಪ್ರಮುಖ ತುಣುಕುಗಳು ಇಲ್ಲಿವೆ.

ಸೋಮವಾರ ನಿಖಿಲ್‌ ನಾಮಪತ್ರ ಸಲ್ಲಿಸ ಲಿದ್ದು, ಆ ಬಳಿಕ ಕ್ಷೇತ್ರದಲ್ಲಿ ನಮ್ಮ ಹವಾ ಶುರು ವಾಗಲಿದೆ.

ನಾನು ದ್ವೇಷದ ರಾಜಕಾರಣ ಮಾಡುವುದಿಲ್ಲ. ಬೆಂಬಲದ ಭಿಕ್ಷೆ ಕೇಳಲ್ಲ.

ಮೈತ್ರಿ ಮರೆತು ನಮ್ಮ ಪಕ್ಷದ ಅಭ್ಯರ್ಥಿಗಳಿಗೆ ಸ್ಪೀಡ್‌ ಬ್ರೇಕ್‌ ಹಾಕಲು ಕೆಲವರು ಮುಂದಾಗಿ ದ್ದಾರೆ. ಆದರೆ ನಾನು ಅಂಥ ನಂಬಿಕೆ ದ್ರೋಹದ ಕೆಲಸ ಮಾಡುವುದಿಲ್ಲ.

ಹಣ ಕೊಟ್ಟು ಮತ ಕೊಂಡುಕೊಳ್ಳುವವರ ಮಾತಿಗೆ ಜಿಲ್ಲೆಯ ಜನ ಮರುಳಾಗುವುದಿಲ್ಲ ಎಂಬ ವಿಶ್ವಾಸವಿದೆ. ನಿಖೀಲ್‌ ಗೆಲುವು ಖಚಿತ.

ದೇವೇಗೌಡರ ಕುಟುಂಬ ಮತ್ತು ಮಂಡ್ಯ ಜನರ ಬಾಂಧವ್ಯಕ್ಕೆ ಧಕ್ಕೆ ತರಲಾಗದು. ಓರ್ವ ನಿಖೀಲ್‌ನನ್ನು ಸೋಲಿಸಲು ಎಷ್ಟು ಜನ ಒಂದಾಗಿದ್ದಾರೆ ಎಂಬುದು ಗೊತ್ತಾಗಿದೆ. ಬೆನ್ನಿಗೆ ಚೂರಿ ಹಾಕುವುದರಿಂದ ಏನೂ ಸಾಧಿಸಲಾಗದು.

ನಿಖಿಲ್‌ ಸ್ಪರ್ಧೆಯಿಂದ ಮಂಡ್ಯದಲ್ಲಿ ಬಿಜೆಪಿ ಮುಖ್ಯವಾಗಿದೆ.

ಭಕ್ತನಿಂದ ಚುಂಚಶ್ರೀಗೆ ಪ್ರಶ್ನೆ
ಮಂಡ್ಯ: ಒಕ್ಕಲಿಗ ಸಮುದಾಯದ ದೇವೇಗೌಡ ಮತ್ತವರ ಕುಟುಂಬದವರನ್ನು ಮಾತ್ರ ಪೋಷಿಸಿ ಆಶೀರ್ವದಿಸುವುದು ಎಷ್ಟು ಸರಿ ಎಂದು ಸಿದ್ದು ಎಂಬ ಭಕ್ತ ಆದಿಚುಂಚನಗಿರಿ ಪೀಠಾಧ್ಯಕ್ಷ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರನ್ನು ಪ್ರಶ್ನಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಶ್ರೀಗಳಿಗೆ ಪ್ರಶ್ನೆಗಳ ಸುರಿಮಳೆಗರೆದಿರುವ ಸಿದ್ದು, ಇತರ ಒಕ್ಕಲಿಗ ನಾಯಕರ ಬೆಳವಣಿಗೆಯನ್ನು ಸಹಿಸದ ದೇವೇಗೌಡರ ಕುಟುಂಬಕ್ಕೆ ಸಹಕಾರ ನೀಡುವಷ್ಟು ಬೇರೆ ನಾಯಕರಿಗೆ ಏಕೆ ನೀಡುವುದಿಲ್ಲ ಎಂಬ ಪ್ರಶ್ನೆಯನ್ನು ಮುಂದಿಟ್ಟಿದ್ದಾರೆ.

ಸಿದ್ದು ಭೇಟಿ ಮಾಡಿದ ಅನಿತಾ
ಈ ಮಧ್ಯೆ ನಿಖಿಲ್‌ ತಾಯಿ, ಶಾಸಕಿ ಅನಿತಾ ಕುಮಾರಸ್ವಾಮಿ ಅವರು ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಮನೆಗೆ ಭೇಟಿ ನೀಡಿ, ಹಾಸನ ಮಾದರಿಯಲ್ಲೇ ಮಂಡ್ಯ ಜಿಲ್ಲೆಯಲ್ಲೂ ಕಾಂಗ್ರೆಸಿಗರನ್ನು ಒಗ್ಗೂಡಿಸಿ, ನಿಖೀಲ್‌ ಬೆಂಬಲಕ್ಕೆ ನಿಲ್ಲುವಂತೆ ಮನವಿ ಮಾಡಿದರು. ಜಿಲ್ಲೆಯ ಪ್ರಭಾವಿ ಕಾಂಗ್ರೆಸಿಗರು ಸುಮಲತಾ ಬೆಂಬಲಕ್ಕೆ ನಿಂತಿದ್ದು, ಪುತ್ರನಿಗೆ ಸೋಲಿನ ಭಯ ಕಾಡುತ್ತಿದೆ. ಇದು ನಮ್ಮ ಕುಟುಂಬದ ಗೌರವ ಪ್ರಶ್ನೆ. ನಿಖೀಲ್‌ ನಾಮಪತ್ರ ಸಲ್ಲಿಕೆ ವೇಳೆ ಬನ್ನಿ, ಪುತ್ರನ ಪರ ಪ್ರಚಾರ ಮಾಡಿ ಎಂದು ಮನವಿ ಮಾಡಿದರು. ಇದಕ್ಕೆ ಸಿದ್ದರಾಮಯ್ಯ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎನ್ನಲಾಗಿದೆ.

ಚುನಾವಣೆಯಲ್ಲಿ ನನ್ನನ್ನು ಸೋಲಿಸಲು ಕೆಲವೊಂದು ಶಕ್ತಿಗಳು ಹುನ್ನಾರ ನಡೆಸಿವೆ. ಆದರೆ ಜನರು ನನ್ನ ಪರ ಇದ್ದಾರೆ. ಮಂಡ್ಯದ ಜನ ನನ್ನ ಕೈಬಿಡುವುದಿಲ್ಲ ಎನ್ನುವ ವಿಶ್ವಾಸವಿದೆ.
– ನಿಖಿಲ್‌ ಕುಮಾರಸ್ವಾಮಿ, ಮೈತ್ರಿ ಅಭ್ಯರ್ಥಿ

ಸುಮಲತಾಗೆ ಬಿಜೆಪಿ ಬೆಂಬಲ ಸೂಚಿಸಿದೆ. ಹೀಗಾಗಿ ಸುಮಲತಾ ಅವರು ಬಿಜೆಪಿ ಬೆಂಬಲಿತ ಅಭ್ಯರ್ಥಿ ಎಂಬುದನ್ನು ನಾವು ಇಲ್ಲಿ ಅರ್ಥ ಮಾಡಿಕೊಳ್ಳಬೇಕು. ಒಂದು ರಾಷ್ಟ್ರೀಯ ಪಕ್ಷ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸದಿರುವ ಉದ್ದೇಶವೇ ಜೆಡಿಎಸ್‌ ಭದ್ರಕೋಟೆಯನ್ನು ಭೇದಿಸುವ ತಂತ್ರಗಾರಿಕೆ.
– ಡಿ.ಸಿ.ತಮ್ಮಣ್ಣ , ಸಾರಿಗೆ ಸಚಿವ

ಟಾಪ್ ನ್ಯೂಸ್

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

7-

Obsessive Psychiatry: ಗೀಳು ಮನೋರೋಗ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

6-thyroid

Thyroid Disease: ಥೈರಾಯ್ಡ್ ಅನಾರೋಗ್ಯ ನಿರ್ಲಕ್ಷಿಸಿದರೆ ಮಾರಕವಾದೀತು ಎಚ್ಚರ!

5-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇವಸ್ಥಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.