ಪ್ರತಿಪಕ್ಷಗಳು ಪಾಕಿಸ್ತಾನದ ವಕ್ತಾರರು: ಮೋದಿ


Team Udayavani, Apr 3, 2019, 6:30 AM IST

MODI

ಪಾಟ್ನಾ: “ಪ್ರತಿಪಕ್ಷಗಳಿಗೆ ಪಾಕಿಸ್ತಾನದ ಮೇಲೆ ಎಷ್ಟೊಂದು ಪ್ರೀತಿಯೆಂದರೆ, ಭಾರತೀಯ ಸೇನೆಯು ಪಾಕ್‌ನಲ್ಲಿ ದಾಳಿ ನಡೆಸಿದ್ದಕ್ಕೆ ನಮ್ಮ ದೇಶದ ಪ್ರತಿಪಕ್ಷಗಳು ಸಾಕ್ಷ್ಯ ಕೇಳುತ್ತವೆ. ಅವುಗಳು ಭಾರತವನ್ನು ಪ್ರತಿನಿಧಿಸುತ್ತಿರುವ ರಾಜಕೀಯ ಪಕ್ಷಗಳ ಬದಲಾಗಿ ಪಾಕಿಸ್ತಾನದ ವಕ್ತಾರರಂತೆ ವರ್ತಿಸುತ್ತಿವೆ.’
ಬಾಲಕೋಟ್‌ ದಾಳಿಯ ಸಾಕ್ಷ್ಯ ಕೇಳಿ ದ್ದನ್ನು ಪ್ರಸ್ತಾಪಿಸಿ ಪ್ರತಿಪಕ್ಷಗಳ ವಿರುದ್ಧ ಈ ರೀತಿ ಕಿಡಿಕಾರಿದ್ದು ಪ್ರಧಾನಿ ನರೇಂದ್ರ ಮೋದಿ. ಮಂಗಳವಾರ ಬಿಹಾರ ಹಾಗೂ ಒಡಿಶಾದಲ್ಲಿ ಚುನಾವಣಾ ಪ್ರಚಾರ ರ್ಯಾಲಿ ನಡೆಸಿದ ಪ್ರಧಾನಿ ಮೋದಿ, ಪ್ರತಿಪಕ್ಷಗಳ ವಿರುದ್ಧ ಟೀಕಾಪ್ರಹಾರ ನಡೆಸಿದ್ದಾರೆ. ಸಶಸ್ತ್ರ ಪಡೆಗಳ ನೈತಿಕ ಸ್ಥೈರ್ಯವನ್ನು ಕುಸಿಯುವಂತೆ ಮಾಡುತ್ತಿರುವ ಪಾಕಿಸ್ತಾನದ ಸಹಾಯಕರು ಅಧಿಕಾರಕ್ಕೆ ಬರಬೇಕೋ, ಬೇಡವೋ ಎಂಬುದನ್ನು ನೀವೇ ನಿರ್ಧರಿಸಿ ಎಂದೂ ಹೇಳಿದ್ದಾರೆ.
ಯಾವಾಗೆಲ್ಲ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದಿದೆಯೋ, ದೇಶದ ಆಡಳಿತವು ರಿವರ್ಸ್‌ ಗೇರ್‌ನಲ್ಲಿ ಸಾಗಿದೆ. ಭಯೋತ್ಪಾದಕ ಚಟುವಟಿಕೆಗಳು, ಹಿಂಸಾ ಚಾರ, ಕಪ್ಪುಹಣ ಹೆಚ್ಚಾಗಿದೆ. ದೇಶದ ಆರ್ಥಿಕತೆ ಪಾತಾಳಕ್ಕೆ ಕುಸಿದಿದೆ ಎಂದೂ ಮೋದಿ ಆರೋಪಿಸಿದ್ದಾರೆ. ಸಂವಿಧಾನ ಶಿಲ್ಪಿ ಅಂಬೇಡ್ಕರ್‌ಗೆ ನೈಜ ಗೌರವ ಸಲ್ಲಿಸಿದ್ದು ನಾವು. ಲಂಡನ್‌ ಸೇರಿದಂತೆ ಅಂಬೇಡ್ಕರ್‌ ಜತೆ ಸಂಬಂಧವಿರುವ 5 ಪ್ರದೇಶಗಳನ್ನು ಪಂಚ ತೀರ್ಥಗಳಾಗಿ ಅಭಿವೃದ್ಧಿಪಡಿಸಿದ್ದು ನಮ್ಮ ಸರ್ಕಾರ ಎಂದೂ ಹೇಳಿದ್ದಾರೆ.

ಚೌಕಿದಾರನಿಂದ ಪ್ರಗತಿ
ಇದಕ್ಕೂ ಮುನ್ನ ಒಡಿಶಾದಲ್ಲಿ ನಡೆದ ರ್ಯಾಲಿಯಲ್ಲಿ ಆಡಳಿತಾರೂಢ ಬಿಜೆಡಿ ಸರ್ಕಾರ ವನ್ನು ತರಾಟೆಗೆ ತೆಗೆದುಕೊಂಡ ಮೋದಿ, “ಒಡಿಶಾವನ್ನು ಅಭಿವೃದ್ಧಿಪಡಿಸಲು ಬಿಜೆಡಿ ಅಡ್ಡಗಾಲು ಹಾಕುತ್ತಲೇ ಬಂತು. ಆದರೂ ಕೇಂದ್ರದ ವಿವಿಧ ಯೋಜನೆಗಳ ಮೂಲಕ ರಾಜ್ಯವನ್ನು ಈ ಚೌಕಿದಾರ ಅಭಿವೃದ್ಧಿ ಪಥದತ್ತ ಕೊಂಡೊಯ್ದಿದ್ದಾರೆ’ ಎಂದಿದ್ದಾರೆ.

ಟಾಪ್ ನ್ಯೂಸ್

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

5-belagavi

Belagavi: ಗಡಿ ಹೋರಾಟದಲ್ಲಿ‌ ಯಶಸ್ವಿಯಾಗಲು ಒಂದಾಗಿ: ಮನೋಜ್‌ ಜರಾಂಗೆ ಪಾಟೀಲ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.