ನೀವು ಯಾವ ಆಧಾರದಲ್ಲಿ ಮತ ಯಾಚಿಸುತ್ತೀರಿ?


Team Udayavani, Mar 27, 2019, 8:10 AM IST

2-aa

ರಾಜ್ಯದ ಜಿದ್ದಾಜಿದ್ದಿ ಕ್ಷೇತ್ರಗಳ ಪೈಕಿ ಒಂದು ಎನ್ನಲಾದ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯಿಂದ ಶೋಭಾ ಕರಂದ್ಲಾಜೆ ಮತ್ತು ಕಾಂಗ್ರೆಸ್‌-ಜೆಡಿಎಸ್‌ನಿಂದ ಪ್ರಮೋದ್‌ ಮಧ್ವರಾಜ್‌ ಕಣಕ್ಕಿಳಿದಿದ್ದಾರೆ. “ಉದಯವಾಣಿ’ಗೆ ನೀಡಿದ ಸಂದರ್ಶನದಲ್ಲಿ ಇಬ್ಬರೂ ಮನ ಬಿಚ್ಚಿ ಮಾತನಾಡಿದ್ದಾರೆ.

ಜೆಡಿಎಸ್‌-ಕಾಂಗ್ರೆಸ್‌ ಕಚ್ಚಾಟ ಬಿಜೆಪಿಗೆ ಲಾಭ

ಎರಡನೇ ಬಾರಿಗೆ ಸ್ಪರ್ಧಿಸುತ್ತಿದ್ದೀರಿ. ಅಂದಿಗೂ-ಇಂದಿಗೂ ಏನು ವ್ಯತ್ಯಾಸ?
ಅಂದು ನಾನು ಉಡುಪಿ-ಚಿಕ್ಕಮಗಳೂರಿಗೆ ಹೊಸಬಳಾಗಿದ್ದೆ. ಸಂಸದೆಯಾದ ಬಳಿಕ ಕೇಂದ್ರ ಸರಕಾರದ ಅನೇಕ ಯೋಜನೆಗಳನ್ನು ಕ್ಷೇತ್ರಕ್ಕೆ ತಂದಿದ್ದೇನೆ. ಈ ಬಾರಿ ಪ್ರಧಾನಿ ನರೇಂದ್ರ ಮೋದಿಯವರ ಸಾಧನೆ ಮತ್ತು ಕ್ಷೇತ್ರದಲ್ಲಿನ ನನ್ನ ಸಾಧನೆ ಗೆಲುವಿಗೆ ಪೂರಕವಾಗಲಿದೆ.

 ನಿಮಗೆ ಟಿಕೆಟ್‌ ನೀಡುವ ಕುರಿತು ಅತೃಪ್ತಿ ಇತ್ತಲ್ಲವೆ?
ಎಲ್ಲಿ ಗೆಲ್ಲುವ ಸಾಧ್ಯತೆ ಇರುತ್ತದೋ ಅಲ್ಲಿ ಸ್ಪರ್ಧಾಕಾಂಕ್ಷಿಗಳ ಸಂಖ್ಯೆ ಹೆಚ್ಚು ಇರುವುದು ಸಾಮಾನ್ಯ. ಈಗ ಟಿಕೆಟ್‌ ಹಂಚಿಕೆಯಾದ ಬಳಿಕ ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡುತ್ತಿದ್ದಾರೆ. ಯಾವುದೇ ಅತೃಪ್ತಿ ಇಲ್ಲ.

ಮೈತ್ರಿ ಅಭ್ಯರ್ಥಿ ಪರಿಣಾಮ ಬೀರಲಿದೆಯೆ?
ಜೆಡಿಎಸ್‌- ಕಾಂಗ್ರೆಸ್‌ ಮೈತ್ರಿ ಸರಕಾರ ರಾಜ್ಯದಲ್ಲಿರುವುದರಿಂದ ರಾಜ್ಯಕ್ಕೆ ಲಾಭ ಏನಾಗಿದೆ?ಕಳೆದೊಂದು ವರ್ಷದಿಂದ ರಾಜ್ಯದಲ್ಲಿ ಏನಾದರೂ ಅಭಿವೃದಿಟಛಿ ಕೆಲಸ ಮಾಡಿದ್ದಾರಾ? ರಾಜ್ಯದಲ್ಲಿ ಮೈತ್ರಿ ವಿಫ‌ಲವಾಗಿರುವುದು ಸಾಬೀತಾಗಿದೆ. ಎಲ್ಲ ಸಂದರ್ಭಗಳಲ್ಲೂ ಗೊಂದಲ, ಕಚ್ಚಾಟವೇ ಕಂಡು ಬಂದಿದೆ. ಲೋಕಸಭಾ ಕ್ಷೇತ್ರದ ಟಿಕೆಟ್‌ ಹಂಚಿಕೆಯಲ್ಲಿಯೂ ಕಚ್ಚಾಟ ಮುಂದುವರಿಯುತ್ತಿದೆ. ಇದು ಬಿಜೆಪಿಗೆ ಲಾಭ ತರಲಿದೆ.

 ಯಾವ ಆಧಾರದಲ್ಲಿ ಮತ ಯಾಚಿಸುತ್ತೀರಿ?
ಚಿಕ್ಕಮಗಳೂರು ಮತ್ತು ಉಡುಪಿ ಜಿಲ್ಲೆಯಲ್ಲಿ ಈಗಾಗಲೇ ಜಾರಿಗೊಂಡ ಯೋಜನೆಗಳು, ಬೇಡಿಕೆಗಳನ್ನು ಪೂರ್ಣಗೊಳಿಸಬೇಕಾಗಿದೆ. ನರೇಂದ್ರ ಮೋದಿ ಅವರು ಮತ್ತೆ ಪ್ರಧಾನಿಯಾಗುವ ಮೂಲಕ ದೇಶದ ರಕ್ಷಣೆ ಮತ್ತು ಅಭಿವೃದಿಟಛಿಗೆ ಪೂರಕ ವಾತಾವರಣ ಸೃಷ್ಟಿಸಬೇಕಾಗಿದ್ದು, ಆ ಬಗ್ಗೆ ಜನರಲ್ಲಿ ಮನವರಿಕೆ ಮಾಡುತ್ತೇವೆ.

ಹೊರಗಿನವರಿಗೆ ಕ್ಷೇತ್ರದ ಬಗ್ಗೆ ಮಮಕಾರ ಇರಲ್ಲ

ಲೋಕಸಭೆಗೆ ಮೊದಲ ಬಾರಿ ಸ್ಪರ್ಧಿಸುತ್ತಿದ್ದೀರಿ. ಏನನಿಸುತ್ತಿದೆ? ಚುನಾವಣೆಯಲ್ಲಿ ಸ್ಪರ್ಧಿಸಲು ದೇವರ, ಪಕ್ಷದ,ಪಕ್ಷಗಳ ನಾಯಕರ, ಜನರ ಪ್ರೇರಣೆ ಬೇಕು. ಹಾಗಿದ್ದಾಗ ಮಾತ್ರ ಸ್ಪರ್ಧಿಸಲು ಸಾಧ್ಯ. ದೇವರ ಮೇಲೆ ಮತ್ತು ಜನರ ಮೇಲೆ ಭಾರ ಹಾಕಿ ಸ್ಪರ್ಧಿಸುತ್ತಿದ್ದೇನೆ.

ಸ್ಥಳೀಯವಾಗಿ ಕಾಂಗ್ರೆಸ್‌ನಲ್ಲಿ, ರಾಜ್ಯದಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಎರಡೂ ಪಕ್ಷಗಳಲ್ಲಿ ಅತೃಪ್ತಿ ಇದೆಯಲ್ಲವೆ?
ಪ್ರತಿ ಚುನಾವಣೆಯಲ್ಲಿಯೂ ಸ್ವಲ್ಪ ಮಟ್ಟಿನ ಅತೃಪ್ತಿ ಸಹಜ. ಕಳೆದ 10-15 ದಿನಗಳ ಹಿಂದೆ ಇದ್ದ ಅತೃಪ್ತಿ ಈಗ ಸಾಕಷ್ಟು ಶಮನವಾಗಿದೆ. ಇನ್ನೇನಾದರೂ ಅತೃಪ್ತಿ ಉಳಿದಿದ್ದರೆ ಮಾತುಕತೆ ಮೂಲಕ ನಿವಾರಿಸಲಾಗುತ್ತದೆ. ಎಲ್ಲರೂ ಒಂದಾಗಿ ಚುನಾವಣೆ ಎದುರಿಸುತ್ತೇವೆ ಎಂಬ ವಿಶ್ವಾಸವಿದೆ

ನೀವು ಗೆದ್ದರೆ ಯಾವ ಪಕ್ಷದ ಕಡೆ ಇರುತ್ತೀರಿ?
ಐದು ವರ್ಷ ಎರಡೂ ಪಕ್ಷಗಳ ಜತೆ, ಜತೆಯಾಗಿ ಜವಾಬ್ದಾರಿಯನ್ನು ನಿರ್ವಹಿಸುತ್ತೇನೆ. ನನ್ನ ಪರವಾಗಿ ಕೆಲಸ ಮಾಡಿದ ಕಾರ್ಯಕರ್ತರು, ಮತ ಹಾಕಿದ ಮತದಾರರನ್ನು ಮರೆಯಲು ಸಾಧ್ಯವೆ?

ಯಾವ ಆಧಾರದಲ್ಲಿ ಮತ ಯಾಚಿಸುವಿರಿ?
ದೇವರ ದಯೆಯಿಂದ ಶಾಸಕನಾಗಿ, ಸಚಿವನಾಗಿ ಕೆಲಸ ಮಾಡಲು ನನಗೆ ಅವಕಾಶ ಸಿಕ್ಕಿದಾಗ ಜನರ ಮತ್ತು ಕ್ಷೇತ್ರದ ಅಭಿವೃದ್ಧಿ ಯನ್ನು ಶಕ್ತಿ ಮೀರಿ ಮಾಡಿದ್ದೇನೆ. ಕ್ಷೇತ್ರದ ಹೊರಗಿ ನವರಿಗೂ ನಾನು ನನ್ನ ಕ್ಷೇತ್ರದಲ್ಲಿ ಮಾಡಿದ ಕೆಲಸಗಳ ಮಾಹಿತಿ ತಿಳಿದಿರುತ್ತದೆ. ಕೆಲಸ ಮಾಡದವರು ಮತ್ತು ಮಾಡಿದವರ ನಡುವಿನ ಹೋರಾಟ ಇದು. ಹೊರಗಿನವರಿಗೆ ಅವಕಾಶ ಕೊಟ್ಟರೆ ಅವರಿಗೆ ಕ್ಷೇತ್ರದ ಮೇಲೆ ಮಮಕಾರ ಇರುವುದಿಲ್ಲ ಎಂಬುದಕ್ಕೆ ಶೋಭಾ ಕರಂದ್ಲಾಜೆ ಉದಾಹರಣೆ. ನಮಗೆ ರಾಷ್ಟ್ರ ಮುಖ್ಯ. ಅದರ ಜತೆಗೆ, ಕ್ಷೇತ್ರವೂ ಮುಖ್ಯ. ಕ್ಷೇತ್ರದ ಅಭಿವೃದ್ಧಿ ಯಾದರೆ ಮಾತ್ರ ರಾಷ್ಟ್ರದ ಅಭಿವೃದ್ಧಿಯಾಗುತ್ತದೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.