- Wednesday 11 Dec 2019
ಕುದುರೆ ವ್ಯಾಪಾರದ ಮಾತು
Team Udayavani, Apr 30, 2019, 6:00 AM IST
“ತೃಣಮೂಲ ಕಾಂಗ್ರೆಸ್ನ 40 ಶಾಸಕರು ನಮ್ಮ ಸಂಪರ್ಕದಲ್ಲಿದ್ದು, ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸುತ್ತಿ ದ್ದಂತೆ ಅವರೆಲ್ಲರೂ ಟಿಎಂಸಿಗೆ ಗುಡ್ಬೈ ಹೇಳಲಿದ್ದಾರೆ.’
ಲೋಕಸಭೆ ಚುನಾವಣೆ ಚಾಲ್ತಿಯಲ್ಲಿರುವಾಗಲೇ ಟಿಎಂಸಿ ಯ ಭದ್ರಕೋಟೆ ಪಶ್ಚಿಮ ಬಂಗಾಲದಲ್ಲೇ ನಿಂತು ಪ್ರಧಾನಿ ನರೇಂದ್ರ ಮೋದಿ ಇಂಥದ್ದೊಂದು ಅಚ್ಚರಿಯ ಬಾಂಬ್ ಸಿಡಿಸಿದ್ದಾರೆ. ಸೋಮವಾರ ಪ.ಬಂಗಾಲದ ಶ್ರೀರಾಂಪುರದಲ್ಲಿ ಚುನಾವಣಾ ಪ್ರಚಾರ ರ್ಯಾಲಿ ನಡೆಸಿ ಮಾತನಾಡಿದ ಮೋದಿ, “ದೀದಿ ಅವರೇ ದಿಲ್ಲಿ ಬಹಳ ದೂರ ಇದೆ. ಈ ಚುನಾವಣೆಯ ಫಲಿತಾಂಶ ಬಂದಾಗ ನಿಮ್ಮ ಶಾಸಕರು ಕೂಡ ನಿಮ್ಮನ್ನು ಬಿಟ್ಟು ಹೋಗುತ್ತಾರೆ. ನಿಮ್ಮ 40 ಶಾಸಕರು ನನ್ನೊಂದಿಗೆ ಸಂಪರ್ಕದಲ್ಲಿದ್ದಾರೆ. ಒಮ್ಮೆ ಬಿಜೆಪಿ ಗೆದ್ದರೆ ಸಾಕು, ತತ್ಕ್ಷಣ ಅವರೆಲ್ಲ ಟಿಎಂಸಿಗೆ ರಾಜೀನಾಮೆ ಸಲ್ಲಿಸುತ್ತಾರೆ. ನಿಮ್ಮ ಕಾಲ ಕೆಳಗಿನ ರಾಜಕೀಯ ನೆಲ ಕುಸಿಯುತ್ತಿದೆ’ ಎಂದು ಪ್ರಧಾನಿ ಹೇಳಿದ್ದಾರೆ.
ಅಷ್ಟೇ ಅಲ್ಲ, ಮಮತಾರಿಗೆ ಸೋಲುವ ಭಯ ಕಾಡತೊಡಗಿರುವ ಕಾರಣವೇ, ಅವರು ಆಗಾಗ ಸಹನೆ ಕಳೆದುಕೊಳ್ಳುತ್ತಿ ರುವುದು. ಬೆರಳೆಣಿಕೆಯ ಸೀಟು ಗಳ ಮೂಲಕ ನೀವು ದಿಲ್ಲಿಗೆ ತಲುಪಲು ಸಾಧ್ಯವಿಲ್ಲ. ದಿಲ್ಲಿ ತುಂಬಾ ದೂರ ಇದೆ. ನೀವು ಪ್ರಧಾನಮಂತ್ರಿಯಾ ಗುವ ಕನಸನ್ನು ಕೂಡ ಕಾಣಲು ಸಾಧ್ಯವಾಗದು ಎಂದೂ ಹೇಳುವ ಮೂಲಕ ಮಮತಾರ ಕಾಲೆಳೆದಿದ್ದಾರೆ ಮೋದಿ.
ಮೋದಿಯಿಂದ ಕುದುರೆ ವ್ಯಾಪಾರ: 40 ಶಾಸಕರು ನಮ್ಮೊಂದಿಗಿದ್ದಾರೆ ಎಂಬ ಪ್ರಧಾನಿ ಮೋದಿ ಹೇಳಿಕೆಗೆ ಟಿಎಂಸಿ ಕೆಂಡಾಮಂಡಲ ವಾಗಿದೆ. ಮೋದಿಯವರು ಕುದುರೆ ವ್ಯಾಪಾರ ಮಾಡುತ್ತಿದ್ದು, ಈ ಕುರಿತು ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಲಾಗುವುದು ಎಂದು ಟಿಎಂಸಿ ನಾಯಕ ಡೆರೆಕ್ ಒಬ್ರಿಯಾನ್ ಹೇಳಿದ್ದಾರೆ.
ಇದೇ ಸಂದರ್ಭದಲ್ಲಿ ಮೋದಿ ವಿರುದ್ಧ ಹರಿಹಾಯ್ದ ಅವರು, “ಎಕ್ಸ್ಪೈರಿ ಬಾಬು ಪಿಎಂ ಅವರೇ, ಈ ವಿಷಯ ನೆನಪಿಟ್ಟುಕೊಳ್ಳಿ. ನಿಮ್ಮೊಂದಿಗೆ ಯಾರೂ ಬರಲ್ಲ, ಒಬ್ಬ ಕೌನ್ಸಿಲರ್ ಕೂಡ ಬರುವುದಿಲ್ಲ. ನೀವೇನು ಚುನಾವಣಾ ಪ್ರಚಾರ ಮಾಡಲು ಬಂದಿದ್ದೀರಾ, ಕುದುರೆ ವ್ಯಾಪಾರಕ್ಕೆ ಬಂದಿದ್ದೀರಾ? ನಿಮ್ಮ ಎಕ್ಸ್ಪೈರಿ ದಿನಾಂಕ ಮುಗಿಯಿತು’ ಎಂದಿದ್ದಾರೆ.
ಈ ವಿಭಾಗದಿಂದ ಇನ್ನಷ್ಟು
-
ಪಶ್ಚಿಮ ಬಂಗಾಳದಲ್ಲಿ ಲೋಕಸಭೆ ಚುನಾವಣೆ ವೇಳೆ ನಡೆದ ಹಿಂಸಾಚಾರವನ್ನು ಗಣನೆಗೆ ತೆಗೆದುಕೊಂಡಿರುವ ಸುಪ್ರೀಂ ಕೋರ್ಟ್, ಬಿಜೆಪಿ ಅಭ್ಯರ್ಥಿಯೊಬ್ಬರಿಗೆ ಮೇ 28ರವರೆಗೆ...
-
ಲೋಕಸಭಾ ಚುನಾವಣೆಯ ಮತ ಎಣಿಕೆಗೂ ಮುನ್ನವೇ ಅನುಮಾನಾಸ್ಪದವಾಗಿ ಇವಿಎಂಗಳನ್ನು ಸಾಗಾಟ ಮಾಡುತ್ತಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ಬೆನ್ನಲ್ಲೇ...
-
ಈ ಬಾರಿ ಚುನಾವಣೆಯಲ್ಲಿ ದಿ.ರಾಜೀವ್ ಭ್ರಷ್ಟಾಚಾರದಿಂದ ಹಿಡಿದು ರಾಡಾರ್ನವರೆಗೆ, ಗೋಡ್ಸೆಯಿಂದ ಹಿಡಿದು ಮಹಾತ್ಮಾ ಗಾಂಧೀಜಿಯವರೆಗೆ, ಇವಿಎಂನಿಂದ ಹಿಡಿದು ಮಮತಾ...
-
ಕೊನೆಯ ಹಂತದ ಮತದಾನ ಮುಕ್ತಾಯವಾಗುತ್ತಿದ್ದಂತೆಯೇ ವಿವಿಧ ಸುದ್ದಿವಾಹಿನಿಗಳು ನಡೆಸಿದ ಚುನಾವಣೋತ್ತರ ಸಮೀಕ್ಷೆ ಪ್ರಕಟವಾಗಿವೆ. 13 ಸಮೀಕ್ಷೆಗಳ ಪೈಕಿ ಆರರಲ್ಲಿ...
-
ಲೋಕಸಭೆ ಚುನಾವಣೆಯ ಜೊತೆಗೆ ಈ ಬಾರಿ ನಾಲ್ಕು ರಾಜ್ಯಗಳ ವಿಧಾನಸಭೆ ಚುನಾವಣೆಯೂ ನಡೆದಿದೆ. ಆಂಧ್ರಪ್ರದೇಶ, ಅರುಣಾಚಲ ಪ್ರದೇಶ, ಒಡಿಶಾ ಮತ್ತು ಸಿಕ್ಕಿಂನಲ್ಲಿ ವಿಧಾನಸಭೆ...
ಹೊಸ ಸೇರ್ಪಡೆ
-
ಕಾರ್ಕಳ: 2018 ಆ. 13 ರಂದು ಬೀಸಿದ ಬಿರುಗಾಳಿಗೆ ಸಂಪೂರ್ಣವಾಗಿ ಹಾನಿಗೊಂಡ ಜಯಂತಿ ನಗರ ಪ್ರಾಥಮಿಕ ಶಾಲೆ ಯೀಗ ಶೋಚನೀಯ ಸ್ಥಿತಿಯಲ್ಲಿದೆ. ಕ್ಷೇತ್ರ ಶಿಕ್ಷಣಾಧಿಕಾರಿ...
-
ಕುಂದಾಪುರ: ಕೆಲವು ದಿನಗಳಿಂದ ಸ್ಥಗಿತಗೊಂಡಿದ್ದ ಮರಳುಗಾರಿಕೆ ಮಂಗಳವಾರದಿಂದ ಆರಂಭವಾಗಿದೆ. ಕೆಲವು ವರ್ಷಗಳಿಂದ ನಿಂತಿದ್ದ ಮರಳುಗಾರಿಕೆಗೆ ಅನುಮತಿ ದೊರೆತು...
-
ಸುಳ್ಯ: ಅಂತರ್ಜಲದ ಸಂರಕ್ಷಣೆ ಅಗತ್ಯ ಈ ಕಾಲಘಟ್ಟದಲ್ಲಿ ದೇಶದ ಭವಿಷ್ಯದಷ್ಟೇ ಮಹತ್ವದ್ದು. ಇದನ್ನು ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ವಿದ್ಯಾರ್ಥಿಗಳನ್ನು ಜತೆಗೂಡಿಸಿ...
-
ಉಡುಪಿ: ಮ್ಯಾನ್ ಹೋಲ್ಗಳ್ಳೋ ಅಥವಾ ಮರಣಶ್ಯೆ ದಿಬ್ಬಗಳ್ಳೋ! ಇವುಗಳನ್ನು ಏನೆಂದು ಹೆಸರಿಸಿದರೆ ಸೂಕ್ತ ಎನ್ನುವ ಜಿಜ್ಞಾಸೆ ನಗರವಾಸಿಗಳನ್ನು ಕಾಡುತ್ತಿದೆ. ನೆಲದೊಳಗೆ...
-
ಶೀತ, ಕೆಮ್ಮು ಇದ್ದಾಗ ಏನೇನು ಮಾಡಬೇಕು ಅಂತೆಲ್ಲಾ ಗೊತ್ತೇ ಇದೆ. ಕಷಾಯ ಕುಡಿಯಬೇಕು, ದೇಹವನ್ನು ಬೆಚ್ಚಗಿಡಬೇಕು ಇತ್ಯಾದಿ. ಆದರೆ, ಏನೇನೆಲ್ಲಾ ತಿನ್ನಬಾರದು ಅಂತ...