ಪ್ರತಿ ಹನಿ ರಕ್ತಕ್ಕೂ ಪ್ರತೀಕಾರ ತೀರಿಸುವೆ

ಭಯೋತ್ಪಾದನೆ, ನಕ್ಸಲ್‌ವಾದ ನಿರ್ಮೂಲನೆ ಮಾಡಿಯೇ ಸಿದ್ಧ: ಪ್ರಧಾನಿ ನರೇಂದ್ರ ಮೋದಿ

Team Udayavani, May 6, 2019, 6:06 AM IST

PTI5_5_2019_000247A

ಹೊಸದಿಲ್ಲಿ: “ಹುತಾತ್ಮರ ಪ್ರತಿ ಹನಿ ರಕ್ತಕ್ಕೂ ಪ್ರತೀಕಾರ ತೀರಿಸಿಯೇ ಸಿದ್ಧ ಎಂದು ನಾನು ಶಪಥ ಮಾಡಿದ್ದೇನೆ. ದೇಶ ದಿಂದ ಭಯೋತ್ಪಾದನೆ ಮತ್ತು ನಕ್ಸಲ್‌ವಾದವನ್ನು ನಿರ್ಮೂಲನೆ ಮಾಡುತ್ತೇನೆ’.

ಮಧ್ಯಪ್ರದೇಶದ ಸಾಗರದಲ್ಲಿ ರವಿವಾರ ಚುನಾವಣ ಪ್ರಚಾರ ರ‍್ಯಾಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಈ ಮಾತು ಗಳನ್ನಾಡಿದ್ದಾರೆ. ಈ ಚೌಕಿದಾರನು ಪ್ರತಿಯೊಬ್ಬ ಯೋಧನ ನೆತ್ತರಿಗೂ ಪ್ರತೀಕಾರ ತೀರಿಸಲು ಪಣ ತೊಟ್ಟಿದ್ದಾನೆ. ಅದಕ್ಕೆ ನಿಮ್ಮ ಆಶೀರ್ವಾದ ಬೇಕಿದೆ. ಪಾಕಿಸ್ಥಾನದ ಸೂಪರ್‌ ಫೇವರಿಟ್‌ ಭಯೋತ್ಪಾದಕ ಮಸೂದ್‌ ಅಜರ್‌ಗೆ ವಿಶ್ವಸಂಸ್ಥೆ ಹೇರಿದ ನಿಷೇಧ ಹಾಗೂ ಭಾರತದ ನಿಲುವಿಗೆ ಇತರೆಲ್ಲ ದೇಶಗಳೂ ಸಮ್ಮತಿಸಿದ ರೀತಿಯು ಪಾಕಿಸ್ಥಾನಕ್ಕೆ ಕಪಾಳ ಮೋಕ್ಷವಾದಂತಾಗಿದೆ. ಆದರೆ, ಇದು ಕೇವಲ ಆರಂಭವಷ್ಟೆ. ನಾವು ಇನ್ನೂ ಸಾಧಿಸಬೇಕಾದ್ದು ಬಹಳಷ್ಟಿದೆ. ಈಗ ಪಾಕಿಸ್ಥಾನವೇ ತಾವು ಯಾವ ಹಾದಿಯಲ್ಲಿ ಸಾಗಬೇಕು ಎಂಬುದನ್ನು ನಿರ್ಧರಿಸಬೇಕಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ರಾಹುಲ್‌ ವಿರುದ್ಧ ವಾಗ್ಧಾಳಿ: ಯುಕೆ ಮೂಲದ ಬ್ಯಾಕಾಪ್ಸ್‌ ಕಂಪೆನಿ ಜತೆಗೆ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ಗಾಂಧಿಗಿದೆ ಎನ್ನ ಲಾದ ನಂಟಿನ ಬಗ್ಗೆಯೂ ಭಾಷಣದಲ್ಲಿ ಪ್ರಸ್ತಾವಿಸಿದ ಮೋದಿ, “ಬ್ಯಾಕಾಪ್ಸ್‌ ಎಂಬ ಹೆಸರೇ ಕಾಂಗ್ರೆಸ್‌ ಅಧ್ಯಕ್ಷರ ಹಿಂಬಾಗಿಲ ಕಾರ್ಯಾಚರಣೆಯನ್ನು ಸೂಚಿಸುತ್ತದೆ. 21ನೇ ಶತಮಾನದ ಒಂದಿಡೀ ದಶಕವನ್ನೇ ಭಾರತವು ಕಳೆದುಕೊಂಡಿತು. 2004ರಲ್ಲಿ ಕಾಂಗ್ರೆಸ್‌ “ಕುಟುಂಬಕ್ಕೆ ವಿಧೇಯ’ರಾದ ಮನಮೋಹನ್‌ ಸಿಂಗ್‌ರನ್ನು ಪ್ರಧಾನಿ ಹುದ್ದೆಗೇರಿಸಿತು.

ಏಕೆಂದರೆ, ಆಗ ರಾಜಕುಮಾರ ಇನ್ನೂ ಆ ಹುದ್ದೆಗೇರಲು ಸಜ್ಜಾಗಿರಲಿಲ್ಲ. ಆತನಿಗೆ ತರಬೇತಿ ನೀಡುವ ಯತ್ನವೆಲ್ಲವೂ ವಿಫ‌ಲವಾಯಿತು’ ಎಂದು ವ್ಯಂಗ್ಯವಾಡಿದ್ದಾರೆ. ಅಲ್ಲದೆ, ಕಾಂಗ್ರೆಸ್‌ ಅಧ್ಯಕ್ಷರ ಹಗರಣಗಳು ಈಗ ನೆಲ, ಜಲ ಹಾಗೂ ಆಕಾಶದಿಂದಲೂ ಒಂದೊಂದಾಗಿ ಹೊರಬರುತ್ತಿದೆ ಎಂದೂ ಹೇಳಿದ್ದಾರೆ.

ತಲಾಖ್‌ ಪ್ರಸ್ತಾವ: ಉತ್ತರಪ್ರದೇಶದ ಭದೋಹಿಯಲ್ಲಿ ನಡೆದ ಪ್ರಚಾರ ರ್ಯಾಲಿಯಲ್ಲಿ ಮಾತನಾಡಿದ ಮೋದಿ, ಒಂದೇ ಬಾರಿಗೆ ತ್ರಿವಳಿ ತಲಾಖ್‌ ನೀಡುವ ಪದ್ಧತಿಗೆ ನಿಷೇಧ ಹೇರುವಂಥ ಮಸೂದೆಗೆ ಅಡ್ಡಿಪಡಿಸಲು ವಿಪಕ್ಷಗಳು ಹರಸಾಹಸ ಪಡುತ್ತಿವೆ. ಆದರೆ, ಅವರ ಯತ್ನವು ಸಫ‌ಲವಾಗಲು ನಾನು ಬಿಡುವುದಿಲ್ಲ ಎಂದಿದ್ದಾರೆ. ಜತೆಗೆ, ಮಹಾಮಿಲಾವಟ್‌ನ ಪಕ್ಷಗಳು ಅಧಿಕಾರವನ್ನು ತಮ್ಮ ಸಂಪತ್ತು ವೃದ್ಧಿಸಿಕೊಳ್ಳಲು ಬಳಸಿದವು ಎಂದೂ ಮೋದಿ ಆರೋಪಿಸಿದ್ದಾರೆ.

ಟಾಪ್ ನ್ಯೂಸ್

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.