“ಕೈ’-ಜೆಡಿಎಸ್‌ಗೆ ಸಂಕಷ್ಟ ತಂದ ರೇವಣ್ಣ “ಸ್ಪೀಚ್‌’


Team Udayavani, Mar 13, 2019, 1:16 AM IST

revanna.jpg

ಬೆಂಗಳೂರು: ಗಂಡ ಸತ್ತು ತಿಂಗಳಾಗಿಲ್ಲ ಆಗಲೇ ಸುಮಲತಾ ಚುನಾವಣೆಗೆ ಬಂದಿದ್ದಾರೆ ಎಂಬ ಲೋಕೋಪಯೋಗಿ ಸಚಿವ ಎಚ್‌.ಡಿ.ರೇವಣ್ಣ ಅವರ ಮಾತು ಜೆಡಿಎಸ್‌ ಅಷ್ಟೇ ಅಲ್ಲದೆ ಸಮ್ಮಿಶ್ರ ಸರ್ಕಾ ರದ ಪಾಲುದಾರ ಪಕ್ಷ ಕಾಂಗ್ರೆಸ್‌ಗೂ ತೀವ್ರ ಇರಿಸು ಮುರಿಸು ಉಂಟು ಮಾಡಿದೆ.ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ರೇವಣ್ಣ ಅವರ ಮಾತು ಜೆಡಿಎಸ್‌ ಹಾಗೂ ಕಾಂಗ್ರೆಸ್‌ ನಾಯಕರಿಗೆ ನುಂಗಲಾರದ ತುತ್ತಾಗಿದ್ದು, ಕೆಲವರು ಆ ರೀತಿ ಮಾತನಾಡಬಾರದಿತ್ತು ಎಂದು ತೇಪೆ ಹಾಕಲು ಪ್ರಯತ್ನಿಸಿದರೆ ಮತ್ತೆ ಕೆಲವರುಸಮರ್ಥಿಸಿಕೊಳ್ಳಲು ಪರದಾಡು ವಂತಾಗಿದೆ.

ಮುಖ್ಯಮಂತ್ರಿ ಕುಮಾರಸ್ವಾಮಿ,ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ವಿಶ್ವನಾಥ್‌,ಮಂಡ್ಯ ಜೆಡಿಎಸ್‌ ಸಂಭವನೀಯ ಅಭ್ಯರ್ಥಿ ನಿಖೀಲ್‌ ಕ್ಷಮೆಯಾಚನೆ ಮಾಡಿದರೂ ರೇವಣ್ಣ ನಾನು ತಪ್ಪು ಅಭಿಪ್ರಾಯ ಬರುವ ಮಾತನಾಡಿಲ್ಲ. ಹಿಂದೂ ಸಂಸ್ಕೃತಿ ಬಗ್ಗೆ ಹೇಳಿದ್ದೇನೆ ಅಷ್ಟೆ. ನಾನು ಕ್ಷಮೆ ಕೇಳಲ್ಲ ಎಂದುಹೇಳಿದ್ದಾರೆ.ಈ ಹೇಳಿಕೆಯೂ ಪಕ್ಷದಲ್ಲೇ ಸಾಕಷ್ಟುಬೇಸರಕ್ಕೂ ಕಾರಣವಾಗಿದೆ ಎಂದು
ಹೇಳಲಾಗಿದೆ.

ಸುಮಲತಾ ಬಗ್ಗೆ ರೇವಣ್ಣ ನೀಡಿರುವ ಹೇಳಿಕೆ ದುರಾದೃಷ್ಟಕರ. ರಾಜಕೀಯಕ್ಕೆ ಮಹಿಳೆ ಯಾವ ಸಂದರ್ಭದಲ್ಲಿ ಬರಬೇಕು ಎನ್ನುವುದು ಅವರ ಹಕ್ಕು. ರಾಜಕೀಯಕ್ಕೆ ಬರುವಬಗ್ಗೆ ತೀರ್ಮಾನ ತೆಗೆದುಕೊಳ್ಳುವುದು ಸುಮಲತಾಗೆ ಬಿಟ್ಟಿದ್ದು. ಅದನ್ನು ಯಾರೂ ಪ್ರಶ್ನಿಸುವಂತಿಲ್ಲ.
● ಲಕ್ಷ್ಮೀ ಹೆಬ್ಟಾಳ್ಕರ್‌, ಬೆಳಗಾವಿ ಗ್ರಾಮೀಣ ಕಾಂಗ್ರೆಸ್‌ ಶಾಸಕಿ.

ಪ್ರತಾಪ ಸಿಂಹ ಮಾಡಿದ್ದ ಎಡವಟ್ಟು
ಸಂಸದ ಪ್ರತಾಪಸಿಂಹ ಅವರು ಈ ಹಿಂದೆ ಎಸ್‌.ಎಸ್‌.ಮಹದೇವಪ್ರಸಾದ್‌ ಅವರು ನಿಧನರಾಗಿ ಉಪಚುನಾವಣೆಯಲ್ಲಿ ಅವರ ಪತ್ನಿ ಕಣಕ್ಕಿಳಿದಾಗ “ಗೀತಾ ಅವರು ಕ್ಲಬ್‌ ಹಾಗೂ ಬಾರ್‌ ಗಳಲ್ಲಿ ಕುಡಿಯುತ್ತಾ ಕೂರುತ್ತಾರೆ. ಅವರಿಗೆ ಮತ ಹಾಕಿದರೆ ಏನು ಪ್ರಯೋಜನ?. ಪತಿ ವಿಧಿವಶರಾಗಿ ಸ್ವಲ್ಪ ದಿನವೂ ಆಗಿಲ್ಲ, ಆಗಲೇ ಚುನಾವಣೆಗೆ ಸ್ಪರ್ಧಿಸಿದ್ದಾರೆ’ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು.

ಸುಮಲತಾ ಒಬ್ಬ ಮಹಿಳೆಯಾಗಿ ಯಾವ ಸಂದರ್ಭದಲ್ಲಿ ಏನು ನಿರ್ಧಾರ ತೆಗೆದುಕೊಳ್ಳಬೇಕು ಎನ್ನುವ ಸ್ವಾತಂತ್ರ್ಯ ಅವರಿಗಿದೆ. ಸುಮಲತಾಗೆ ಈಗಿರುವ ಪರಿಸ್ಥಿತಿಯಲ್ಲಿ ಇಡೀ ಸಮಾಜ ಅವರಿಗೆ ಬೆಂಬಲವಾಗಿ ನಿಲ್ಲಬೇಕು.

● ಡಾ. ಪುಷ್ಪಾ ಅಮರನಾಥ್‌, ಕೆಪಿಸಿಸಿ ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ.

ಸುಮಲತಾ ರೇವಣ್ಣ ಆಡಿದ ಮಾತು ಟಂಗ್‌ಸ್ಲಿಪ್‌ ಎಂದು ರಾಜ್ಯಾಧ್ಯಕ್ಷ ಎಚ್‌.ವಿಶ್ವನಾಥ್‌ ಹೇಳಿದ್ದಾರೆ. ಆದರೆ, ಅದು ಟಂಗ್‌ ಸ್ಲಿಪ್‌ ಆಲ್ಲ, ರೇವಣ್ಣ ಅವರ ವ್ಯಕ್ತಿತ್ವವೇ ಸ್ಲಿಪ್‌ ಆಗಿದೆ. ರೇವಣ್ಣ ಕ್ಷಮೆ ಕೇಳಲೂ ಅರ್ಹರಲ್ಲ.
● ಭಾರತಿ ಶೆಟ್ಟಿ, ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ.

ಟಾಪ್ ನ್ಯೂಸ್

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.