ಶೋಭಾ ಮುಕ್ತ ಕಾಲ ಸನ್ನಿಹಿತ: ಕಾಂಗ್ರೆಸ್
Team Udayavani, Mar 21, 2019, 1:00 AM IST
ಉಡುಪಿ: ಶೋಭಾ ಕರಂದ್ಲಾಜೆ ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಸ್ಪರ್ಧಿಸುವುದಕ್ಕೆ ಪಕ್ಷದೊಳಗೇ ವಿರೋಧ ವ್ಯಕ್ತವಾಗಿದೆ. “ಗೋಬ್ಯಾಕ್ ಶೋಭಾ’ ಚಳವಳಿ ಆರಂಭಗೊಂಡಿದೆ. ಕೆಲವು ಶಾಸಕರೂ ಸ್ಪರ್ಧೆಯನ್ನು ವಿರೋಧಿಸುತ್ತಿದ್ದು, ಶೋಭಾ ಜಿಲ್ಲೆಯಿಂದ ಮುಕ್ತರಾಗುವ ಕಾಲ ಸನ್ನಿಹಿತವಾಗಿದೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಹೇಳಿದೆ.
“ಉಡುಪಿ ಕಾಂಗ್ರೆಸ್ ಮುಕ್ತವಾಗಲಿದೆ’ ಎಂಬ ಶೋಭಾ ಹೇಳಿಕೆಗೆ ಪತ್ರಿಕಾ ಪ್ರಕಟನೆ ಮೂಲಕ ತಿರುಗೇಟು ನೀಡಿರುವ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಬಿ. ನರಸಿಂಹ ಮೂರ್ತಿ ಮತ್ತು ವಕ್ತಾರ ಭಾಸ್ಕರ್ ರಾವ್ ಕಿದಿಯೂರು, “ಇಂದಿರಾ ಗಾಂಧಿಯವರಿಗೆ ರಾಜಕೀಯ ಮರುಜನ್ಮ ನೀಡಿದ ಕ್ಷೇತ್ರದಲ್ಲಿ ಕಾಂಗ್ರೆಸ್ ಬಲಿಷ್ಠವಾಗಿದೆ. ಈ ಕ್ಷೇತ್ರ ಎಂದಿಗೂ ಕಾಂಗ್ರೆಸ್ ಮುಕ್ತವಾಗಲಾರದು. ಶೋಭಾ ಈ ಹಗಲುಗನಸನ್ನು ಬಿಡುವುದು ಒಳಿತು. ಮೈತ್ರಿ ಧರ್ಮದಂತೆ ಉಡುಪಿ-ಚಿಕ್ಕಮಗಳೂರು ಕ್ಷೇತ್ರವನ್ನು ಜೆಡಿಎಸ್ಗೆ ನೀಡಿದರೂ ರಾಜ್ಯದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್
20:8 ಅನುಪಾತದಂತೆ ಸೀಟುಗಳನ್ನು ಹಂಚಿಕೊಂಡಿವೆ’ ಎಂದು ಹೇಳಿದ್ದಾರೆ.