ಸೋಲುವ ಭೀತಿ ನನಗಿಲ್ಲ ; ಪ್ರಮೋದ್‌ ಹತಾಶೆಗೆ ಅವರ ಹೇಳಿಕೆಗಳೇ ಸಾಕ್ಷಿ

ಶೋಭಾ ಕರಂದ್ಲಾಜೆ

Team Udayavani, Apr 13, 2019, 6:00 AM IST

shobha-karandlaje-545-D

ಉಡುಪಿ: ನಾಮಪತ್ರ ಸಲ್ಲಿಕೆಯಾದಂದಿನಿಂದ ನಾನು ವ್ಯಾಪಕ ಪ್ರಚಾರದಲ್ಲಿ ತೊಡಗಿದ್ದೇನೆ. ನಾಯಕರು, ಕಾರ್ಯಕರ್ತರು “ಮತ್ತೂಮ್ಮೆ ಮೋದಿ ಪ್ರಧಾನಿ’ ಎಂಬ ಘೋಷಣೆಯೊಂದಿಗೆ ಹಗಲು ರಾತ್ರಿ ಶ್ರಮಿಸುತ್ತಿದ್ದು, ಬಿಜೆಪಿ ಗೆಲುವು ನಿಶ್ಚಿತವಾಗಿದೆ.

ಸೋಲುವ ಭೀತಿ ಇರುವುದು ಮೈತ್ರಿ ಪಕ್ಷದ ಅಭ್ಯರ್ಥಿಗೆ. ಅವರು ಹತಾಶರಾಗಿರುವುದಕ್ಕೆ ಅವರ ಹೇಳಿಕೆಗಳೇ ಸಾಕ್ಷಿ ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಹೇಳಿದರು.

ಅವರು ಕಾಪು ಕ್ಷೇತ್ರದ ಹಿರಿಯಡಕದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದರು.ಕ್ಷೇತ್ರದ 7 ಮಂದಿ ಶಾಸಕರು ಮತ್ತು 2 ಜಿಲ್ಲೆಗಳ ಅಧ್ಯಕ್ಷರು, ಸಾವಿರಾರು ಮುಖಂಡರು ಹಾಗೂ ಕಾರ್ಯಕರ್ತರು ಪ್ರಚಾರದಲ್ಲಿ ನಿರತರಾಗಿದ್ದು, ಈ ಚುನಾವಣೆಯಲ್ಲಿ ಕಳೆದ ಬಾರಿಗಿಂತ ಹೆಚ್ಚು ಅಂತರದಿಂದ ಗೆಲ್ಲುವುದಲ್ಲಿ ಸಂಶಯವೇ ಇಲ್ಲ ಎಂದರು.

ಕಾಂಗ್ರೆಸ್‌ನವರು 60 ವರ್ಷಗಳಿಂದ ಇಂದಿರಾ ಗಾಂಧಿ ಹೆಸರನ್ನು ಹೇಳುತ್ತಾ ಅವರ ಮತ್ತು ರಾಜೀವ್‌ ಗಾಂಧಿ ಅಂತ್ಯಸಂಸ್ಕಾರದ ವೀಡಿಯೊ ತುಣುಕುಗಳನ್ನು ತೋರಿಸಿ ಮತ ಕೇಳಬಹುದಾದರೆ ಬಿಜೆಪಿ ಕಾರ್ಯಕರ್ತರು ಈ ದೇಶಕ್ಕೆ ಗೌರವ ತಂದ, ಐದೇ ವರ್ಷಗಳಲ್ಲಿ ಅದ್ಭುತ ಸಾಧನೆ ಮಾಡಿದ, ಜಗತ್ತಿಗೆ ಬಲಿಷ್ಠ ಭಾರತವನ್ನು ಪರಿಚಯಿಸಿದ ಹೆಮ್ಮೆಯ ಪ್ರಧಾನಿಯ ಹೆಸರನ್ನು ಏಕೆ ಬಳಸಬಾರದು? ಮೈತ್ರಿ ಪಕ್ಷದವರಿಗೆ ಇದನ್ನು ಕೇಳಲು ನೈತಿಕತೆ ಇದೆಯೇ ಎಂದು ಶೋಭಾ ಪ್ರಶ್ನಿಸಿದರು.

ಈ ಬಾರಿ ಚುನಾವಣೆಯಲ್ಲಿ ಕನಿಷ್ಠ ಚಿಹ್ನೆಯನ್ನು ಉಳಿಸಿ ಕೊಳ್ಳಲು ಸಾಧ್ಯವಾಗದ ಕಾಂಗ್ರೆಸಿಗರು ಹತಾಶರಾಗಿ ಪಕ್ಷ ಬಿಟ್ಟ ಪ್ರಮೋದ್‌ ಅವರಿಂದ ಏನೇನೋ ಹೇಳಿಕೆ ನೀಡಿಸುತ್ತಿರುವುದು ಹಾಸ್ಯಾಸ್ಪದ ಎಂದರು.

ಉತ್ತರಿಸುವ ಅಗತ್ಯವಿಲ್ಲ
ಉಸ್ತುವಾರಿ ಸಚಿವರಾಗಿದ್ದ ಪ್ರಮೋದ್‌ ಅವರು ಉಡುಪಿ ವಿಧಾನಸಭಾ ಕ್ಷೇತ್ರದಲ್ಲೇ ತಿರಸ್ಕರಿಸಲ್ಪಟ್ಟು, ಅಸ್ತಿತ್ವ ಕಳೆದುಕೊಂಡ ದುರ್ಬಲ ಅಭ್ಯರ್ಥಿಯಾಗಿದ್ದಾರೆ. ತನ್ನ ವಿಧಾನಸಭಾ ಕ್ಷೇತ್ರದಲ್ಲಿ ಒಂದೇ ಒಂದು ಸ್ಥಳೀಯ ಸಂಸ್ಥೆಯ ಚುನಾವಣೆಯಲ್ಲಿ ಗೆಲ್ಲಲಾಗದೆ, ಸಂಪೂರ್ಣ ಹತಾಶರಾಗಿ ನಿರಂತರವಾಗಿ ಬೇರೆ ಪಕ್ಷಗಳ ಬಾಗಿಲು ಬಡಿಯುತ್ತಿರುವ ದುರ್ಬಲ ವ್ಯಕ್ತಿಯ ಹೇಳಿಕೆಗಳಿಗೆ ಉತ್ತರಿಸುವ ಅಗತ್ಯ ಬಿಜೆಪಿಗರಿಗಿಲ್ಲ ಎಂದು ಶೋಭಾ ತಿಳಿಸಿದ್ದಾರೆ.

ಪ್ರಧಾನಿ ಮೋದಿ ಅವರ “ಆಯುಷ್ಮಾನ್‌ ಭಾರತ’ ಯೋಜನೆ ಒಂದು ಕುಟುಂಬಕ್ಕೆ 5 ಲಕ್ಷ ರೂ. ವರೆಗಿನ ವೈದ್ಯಕೀಯ ವೆಚ್ಚ ಭರಿಸುವ ಅದ್ಭುತ ಯೋಜನೆ ಯಾಗಿದ್ದು, ಕೋಟ್ಯಂತರ ಜನರು ಇದರ ಫ‌ಲಾನು ಭವಿಗಳಾಗಿದ್ದಾರೆ. ಜನೌಷಧ ಮಳಿಗೆ ತೆರೆದು ಅಗ್ಗದ ದರದಲ್ಲಿ ಔಷಧ ನೀಡಿದ್ದಾರೆ. ಉಜ್ವಲ ಯೋಜನೆ ಜಾರಿಗೆ ತಂದು ಕೋಟ್ಯಂತರ ಮಹಿಳೆಯರ ಕಣ್ಣೀರು ಒರೆಸುವ ಕೆಲಸ ಮಾಡಿದ್ದಾರೆ. ದೀನದಯಾಳು ಗ್ರಾಮೀಣ ವಿದ್ಯುದೀಕರಣ ಮೂಲಕ ಬಡವರ ಮನೆ ಬೆಳಗಿದ್ದಾರೆ. ಸ್ವತ್ಛ ಭಾರತದ ನಿರ್ಮಾತೃ, ಲಕ್ಷಾಂತರ ಉದ್ಯೋಗ ಸೃಷ್ಟಿಸಿ ಯುವಕರ ಬಾಳಿಗೆ ಭದ್ರತೆಯನ್ನು ನೀಡಿದ್ದು, ವಿವಿಧ ವಿಮಾ ಯೊಜನೆಗಳ ಮೂಲಕ ಅಶಕ್ತರ ಬಾಳಿನಲ್ಲಿ ಶಕ್ತಿ ತುಂಬಿದ್ದಾರೆ ಎಂದರು.

ಶತ್ರು ರಾಷ್ಟ್ರಗಳಿಂದ, ಉಗ್ರರಿಂದ ದೇಶವನ್ನು ಮುಕ್ತ ಗೊಳಿಸಿದ ಪ್ರಧಾನಿಯನ್ನು ಜನ ಮರೆಯುವರೇ? ಸಂಕಲ್ಪಿತ ಭಾರತ, ಸಶಕ್ತ ಭಾರತಕ್ಕಾಗಿ ಮೋದಿಯೊಂದಿಗೆ ಕೈ ಜೋಡಿಸಿ ಎಂದು ಶೋಭಾ ವಿನಂತಿಸಿದರು.

ಕುಯಿಲಾಡಿ ಸುರೇಶ್‌ ನಾಯಕ್‌, ಗುರ್ಮೆ ಸುರೇಶ್‌ ಶೆಟ್ಟಿ, ಲಾಲಾಜಿ ಆರ್‌. ಮೆಂಡನ್‌, ಕುತ್ಯಾರು ನವೀನ್‌ ಶೆಟ್ಟಿ, ಪ್ರಕಾಶ್‌ ಶೆಟ್ಟಿ ಪಾದೆಬೆಟ್ಟು, ಉಮೇಶ್‌ ಶೆಟ್ಟಿ, ಹರೀಶ್‌, ಪ್ರವೀಣ್‌ ಪೂಜಾರಿ, ಸಂಧ್ಯಾ ಕಾಮತ್‌, ಜಿಯಾನಂದ ಹೆಗ್ಡೆ, ಸುರೇಶ್‌ ಶೆರ್ವೆಗಾರ್‌, ಸತ್ಯಾನಂದ ನಾಯಕ್‌, ಅಶೋಕ್‌ ಜೋಗಿ, ಸವಿತಾ ನಾಯಕ್‌ ಉಪಸ್ಥಿತರಿದ್ದರು.


ಟಾಪ್ ನ್ಯೂಸ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12-uv-fusion

UV Fusion: ಮಕ್ಕಳ ಆಸಕ್ತಿ ಹುಡುಕುವ ಕೆಲಸವಾಗಲಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

11-mallige

Bappanadu Durgaparameshwari: ಮಲ್ಲಿಗೆ ಪ್ರಿಯೆ ದೇವಿಗೆ ಲಕ್ಷ ಮಲ್ಲಿಗೆ ಶಯನೋತ್ಸವ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.