ಉಡುಪಿ-ಚಿಕ್ಕಮಗಳೂರಲ್ಲಿ ಶೋಭಾಗೆ ಈ ಬಾರಿ ಟಿಕೆಟ್ ಸಿಗುವುದೇ ಡೌಟ್
Team Udayavani, Mar 6, 2019, 1:47 AM IST
ಚಿಕ್ಕಮಗಳೂರು: ಮುಂಬರುವ ಚುನಾವಣೆಯಲ್ಲಿ ಉಡುಪಿ ಮತ್ತು ಚಿಕ್ಕಮಗಳೂರು ಲೋಕಸಭಾ ವ್ಯಾಪ್ತಿಯಲ್ಲಿ ಪಕ್ಷದ ವರಿಷ್ಠರು ಸ್ಥಳೀಯರಿಗೆ ಆದ್ಯತೆ ನೀಡಿದರೆ, ಡಿ.ವಿ.ಸದಾನಂದಗೌಡರಿಗಾಗಲಿ, ಶೋಭಾ ಕರಂದ್ಲಾಜೆ ಅವರಿಗಾಗಲಿ ಟಿಕೆಟ್ ಸಿಗುವುದು ಅನುಮಾನ ಎಂದು ಶಾಸಕ ಸಿ.ಟಿ.ರವಿ ಹೇಳಿದರು. ನಗರದಲ್ಲಿ ಮಂಗಳವಾರ ಸುದ್ದಿಗಾರ ರೊಂದಿಗೆ ಅವರು ಮಾತನಾಡಿದರು.
ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಮಾಜಿ ಸಚಿವ ಡಿ.ಎನ್. ಜೀವರಾಜ್, ಬಿಜೆಪಿ ರಾಜ್ಯ ಯುವಮೋರ್ಚಾ ಘಟಕದ ಮುಖ್ಯಸ್ಥರಾಗಿದ್ದ ವಿಲಾಸ್ ನಾಯಕ್, ಬಿಜೆಪಿ ಉಡುಪಿ ಜಿಲ್ಲಾ ಅಧ್ಯಕ್ಷ ಮಟ್ಟಾರು ರತ್ನಾಕರ್ ಮತ್ತು ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ ಆಕಾಂಕ್ಷಿಗಳಾಗಿದ್ದಾರೆ. ಈ ಬಾರಿ ಸ್ಥಳೀಯರಿಗೆ ಟಿಕೆಟ್ ನೀಡಬೇಕೆಂದು ವರಿಷ್ಠ ರಲ್ಲಿ ಮನವಿ ಮಾಡಲಾಗಿದೆ. ಪಕ್ಷದ ವರಿಷ್ಠರು ಸ್ಥಳೀಯರಿಗೆ ಆದ್ಯತೆ ನೀಡಿದಲ್ಲಿ ಈ ಕ್ಷೇತ್ರವನ್ನು ಹಿಂದೆ ಪ್ರತಿನಿಧಿಸಿದ್ದ ಡಿ.ವಿ. ಸದಾನಂದಗೌಡ ರಿಗಾಗಲಿ ಮತ್ತು ಈಗ ಪ್ರತಿನಿಧಿಸುತ್ತಿರುವ ಶೋಭಾ ಕರಂದ್ಲಾಜೆ ಅವರಿಗಾಗಲಿ ಟಿಕೆಟ್ ಸಿಗು ವುದು ಅನುಮಾನ. ಆದರೆ,ವರಿಷ್ಠರು ತೆಗೆದುಕೊಳ್ಳುವ ತೀರ್ಮಾನಕ್ಕೆ ಪಕ್ಷದ ಕಾರ್ಯಕರ್ತರು ಬದ್ಧ ರಾಗಿ ಕೆಲಸ ಮಾಡಲಿದ್ದಾರೆ. ಯಾರೇ ಅಭ್ಯರ್ಥಿಯಾ ದರೂ ಅವರ ಗೆಲುವಿಗೆ ಶ್ರಮಿಸುತ್ತಾರೆ. ಪಕ್ಷಾಧಾರಿತವಾಗಿ ಚುನಾವಣೆ ಎದುರಿ ಸಲು ಎಲ್ಲಾ ಸಿದ್ಧತೆ ನಡೆದಿದೆ ಎಂದರು.