ಇಂದು ಸಿದ್ದು ಸಂಧಾನ
Team Udayavani, Mar 21, 2019, 1:08 AM IST
ಬೆಂಗಳೂರು: ಮೈತ್ರಿಯಿಂದ ಮುನಿಸಿ ಕೊಂಡಿರುವ ಹಾಸನ ಜಿಲ್ಲಾ ಮುಖಂಡರ ಆಕ್ರೋಶವನ್ನು ತಣಿಸಲು ಸಿದ್ದರಾಮಯ್ಯ ರೇವಣ್ಣ ಅವರೊಂದಿಗೆ ಜಿಲ್ಲಾ ಮುಖಂಡರ ಸಭೆ ಕರೆದಿದ್ದಾರೆ. ಬುಧವಾರ ಕೈಮುಖಂಡರು ನೀಡಿದ ದೂರುಗಳ ಶಮನ ಮಾಡಲು ಕಸರತ್ತು ನಡೆಸಿದ್ದಾರೆ. ಹಾಸನದಲ್ಲಿ ಜೆಡಿಎಸ್ನಿಂದ ಪಕ್ಷದ ಕಾರ್ಯಕರ್ತರಿಗೆ ಆಗುತ್ತಿರುವ ಅನ್ಯಾಯದ ಬಗ್ಗೆ ನನಗೂ ಅರ್ಥವಾಗುತ್ತಿದೆ. ಲೋಕಸಭೆ ಚುನಾವಣೆವರೆಗೂ ಎಲ್ಲವನ್ನೂ ಸಹಿಸಿ ಕೊಳ್ಳಬೇಕಿದೆ ಎಂದು ಹೇಳಿದ್ದಾರೆ ಎನ್ನಲಾಗಿದೆ.
ಮಂಡ್ಯ ಸಂಬಂಧಿಕರಿಗೆ ಸಂದೇಶ : ದೇವೇಗೌಡರು ಮಂಡ್ಯದಲ್ಲಿಯೂ ತಮ್ಮ ಕುಟುಂಬ ರಾಜಕಾರಣ ಮುಂದುವರೆಸಿ ರುವುದಕ್ಕೆ ಆಕ್ರೋಶ ಗೊಂಡಿರುವ ಹಾಸನದ ಕಾಂಗ್ರೆಸ್ ಕಾರ್ಯಕರ್ತರು ಜೆಡಿಎಸ್ ಅಭ್ಯರ್ಥಿ ಸೋಲಿಸಲು ನೆಂಟರು, ಸಂಬಂಧಿಕರು, ಸ್ನೇಹಿತರ ಮೂಲಕ ಸಂದೇಶ ರವಾನಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ತಿಳಿದು ಬಂದಿದೆ. ಹಾಸನದಲ್ಲಿ ಪ್ರಜ್ವಲ್, ಮಂಡ್ಯದಲ್ಲಿ ನಿಖೀಲ್ ಸ್ಪರ್ಧೆ ವಿರುದ್ಧ ಪ್ರಚಾರಕ್ಕೆ ಮುಂದಾಗಿರುವ ಕಾಂಗ್ರೆಸ್ನ ಕೆಲವು ಜಿಲ್ಲಾ ಕಾರ್ಯಕರ್ತರು ಮಂಡ್ಯದಲ್ಲಿ ನಿಖೀಲ್ ಗೆ ಮತ ನೀಡದಂತೆ ಸಂದೇಶ ರವಾನಿಸಿದ್ದಾರೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!