ಸೈಕಲ್ ಏರಿ ಮತದಾನ ಜಾಗೃತಿ ಮೂಡಿಸಿದ ಪೊಲೀಸರು ಮತ್ತು ಪತ್ರಕರ್ತರು
Team Udayavani, Apr 10, 2019, 7:46 PM IST
ರಾಜ್ಯದ ಹೆಸರಾಂತ ಕನ್ನಡ ದಿನಪತ್ರಿಕೆ ಉದಯವಾಣಿ ಮತ್ತು ಕರ್ನಾಟಕ ರಾಜ್ಯ ಮೀಸಲು ಪೊಲೀಸ್ (KSRP) ಸಹಯೋಗದಲ್ಲಿ ಬೆಂಗಳೂರು ನಗರದಲ್ಲಿ ಏಪ್ರಿಲ್ 10, ಬುಧವಾರದಂದು ಮತದಾನ ಜಾಗೃತಿ ಸೈಕಲ್ ಜಾಥಾ ನಡೆಯಿತು. ಉದಯವಾಣಿ ಮಾರುಕಟ್ಟೆ ವಿಭಾಗದ ಉಪಾಧ್ಯಕ್ಷರಾಗಿರುವ ಅನಂತಕೃಷ್ಣ ಹಾಗೂ KSRP ಮೂರನೇ ಬೆಟಾಲಿಯನ್ ಕಮಾಂಡೆಂಟ್ ರಾಮಕೃಷ್ಣ ಪ್ರಸಾದ್ ಜಂಟಿಯಾಗಿ ಈ ಸೈಕಲ್ ಜಾಥಾಗೆ ಚಾಲನೆ ನೀಡಿದರು. KSRP ADGP ಭಾಸ್ಕರ್ ರಾವ್, DIG ಸತೀಶ್ ಕುಮಾರ್, ನಾಲ್ಕನೇ ಬೆಟಾಲಿಯನ್ ಕಮಾಂಡೆಂಟ್ ಕುಮಾರಿ ಮೊಹಮ್ಮದ್ ಸುಜೀತಾ, ಕಮಾಂಡೆಂಟ್ ರಾಮಕೃಷ್ಣ ಪ್ರಸಾದ್, ಇನ್ ಸ್ಪೆಕ್ಟರ್ ಸಮಂತ್ ಸೇರಿದಂತೆ ಹಲವು ಅಧಿಕಾರಿಗಳು ಹಾಗೂ ಉದಯವಾಣಿ ದಿನಪತ್ರಿಕೆಯ ಸಿಬ್ಬಂದಿ ವರ್ಗದವರು ಸೈಕಲ್ ಏರಿ ಮಹಾನಗರಿಯ ನಾಗರಿಕರಲ್ಲಿ ಮತದಾನದ ಅರಿವು ಮೂಡಿಸುವ ಪ್ರಶಂಸಾರ್ಹ ಕಾರ್ಯವನ್ನು ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ