ಬಿಜೆಪಿ ಸೇರುತ್ತೇನೆ ಎನ್ನುವುದು ಊಹಾಪೋಹ :ಸುಮಲತಾ


Team Udayavani, Apr 6, 2019, 6:00 AM IST

Sumalatha-Ambareesh-545-D

ಮಂಡ್ಯ: “ನಾನು ಬಿಜೆಪಿಗೆ ಸೇರೋದಿಲ್ಲ. ನಾನು ಬಿಜೆಪಿ ಸೇರುತ್ತೇನೆ ಎನ್ನುವುದು ಕೇವಲ ಊಹಾಪೋಹ’ ಎಂದು ಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್‌ ಸ್ಪಷ್ಟಪಡಿಸಿದ್ದಾರೆ.

ನಗರದ ಗುತ್ತಲು ಬಡಾವಣೆಯ ಕಾಂಗ್ರೆಸ್‌ ಮುಖಂಡ ಮುನಾವರ್‌ ಖಾನ್‌ ನಿವಾಸದಲ್ಲಿ ನಡೆದ ಮುಸಲ್ಮಾನರ ಸಭೆಯಲ್ಲಿ ಮಾತನಾಡಿ,”ನನ್ನ ಮೊದಲ ಆದ್ಯತೆ ಕಾಂಗ್ರೆಸ್‌ ಆಗಿತ್ತು.ಕಾಂಗ್ರೆಸ್‌ ಟಿಕೆಟ್‌ ಕೊಡಲಿಲ್ಲ.ಅದಕ್ಕೆ ಪಕ್ಷೇತರನಾಗಿ ಸ್ಪರ್ಧಿಸುವುದು ಅನಿವಾರ್ಯವಾಯಿತು.ನನಗೆ ಅಧಿಕಾರದ ಆಸೆ ಇಲ್ಲ. ಆ ಆಸೆ ಇದ್ದಿದ್ದರೆ ಕೊಟ್ಟ ಆಫ‌ರ್‌ಗಳನ್ನೇ ಒಪ್ಪಿಕೊಳ್ಳುತ್ತಿದ್ದೆ’ ಎಂದರು.

“ಮಂಡ್ಯ ಕ್ಷೇತ್ರದಲ್ಲಿ ಈ ಬಾರಿ ಬದಲಾವಣೆಯ ಹೊಸ ಗಾಳಿ ಬೀಸುತ್ತಿದೆ. ಅದು ಮತಗಳಾಗಿ ನನಗೆ ಒಲಿದು ಬರಲಿದೆ. ಯುಗಾದಿ ಹಬ್ಬದ ಹಿನ್ನಲೆಯಲ್ಲಿ ನಟರಾದ ದರ್ಶನ್‌ ಮತ್ತು ಯಶ್‌ ಮೂರು ದಿನ ಪ್ರಚಾರ ಕ್ಕೆ ಬರಲ್ಲ. ಮಧ್ಯದಲ್ಲೊಂದು ಬ್ರೇಕ್‌ ಅಷ್ಟೆ.

ಏ.8ರಿಂದ ಮಂಡ್ಯಕ್ಕೆ ಆಗಮಿಸಿ ನನ್ನ ಪರ ಪ್ರಚಾರ ನಡೆಸಲಿದ್ದಾರೆ.ಕೊನೆಯವರೆಗೂ ಅವರು ನನ್ನೊಟ್ಟಿಗೆ ಕ್ಷೇತ್ರದಲ್ಲಿರುತ್ತಾರೆ’ಎಂದು ಹೇಳಿದರು.ನಮ್ಮ ಟೂರಿಂಗ್‌ ಟಾಕೀಸ್‌ ಖಾಲಿ ಆಗುತ್ತಾ ಅಥವಾ ಜೆಡಿಎಸ್‌ನ ಡ್ರಾಮಾ ಕಂಪನಿ ಖಾಲಿ ಆಗುತ್ತಾ ಎಂದು ಚುನಾವಣಾ ಫ‌ಲಿತಾಂಶದ ನಂತರ ನೋಡೋಣ ಎಂದು ಸಂಸದ ಶಿವರಾಮೇ ಗೌಡರಿಗೆ ಟಾಂಗ್‌ ನೀಡಿದರು.

ಈ ಮಧ್ಯೆ,ಕೆಂಗೇರಿಯಿಂದ ಆಗಮಿಸಿದ್ದ ಅರ್ಚಕನೊಬ್ಬ ಪೇಟೆ ಬೀದಿಯಲ್ಲಿ ಚುನಾವಣಾ ಪ್ರಚಾರದಲ್ಲಿ ನಿರತರಾಗಿದ್ದ ಸುಮಲತಾ ಅವರನ್ನು ಭೇಟಿ ಯಾಗಿ ತ್ರಿಶೂಲ ನೀಡಿದ.
“ಕೆಂಗೇರಿ ಯ ದುರ್ಗಾ ಪರಮೇಶ್ವರಿ ನನಗೆ ಹೇಳಿದ್ದಾಳೆ.ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಗೆಲುವು ಶತಸ್ಸಿದಟಛಿ’ಎಂದು ಹೇಳಿ ಆಶೀರ್ವದಿಸಿದ. ಬಳಿಕ, 5 ರೂ.ಡಾಕ್ಟರ್‌ಎಂದೇ ಪ್ರಸಿದಟಛಿರಾಗಿರುವ ಡಾ.ಶಂಕರೇಗೌಡರ ನಿವಾಸಕ್ಕೆ ಭೇಟಿ ನೀಡಿ, ಬೆಂಬಲ ಕೋರಿದರು. ಈ ಮಧ್ಯೆ,ತಾಲೂಕಿನ ಸಂತೆಕಸಲಗೆರೆ ಗ್ರಾಮಕ್ಕೆ ಸುಮಲತಾ ಬಂದಾಗ ಕಾಂಗ್ರೆಸ್‌, ಜೆಡಿಎಸ್‌, ಬಿಜೆಪಿ ಬಾವುಟಗಳು ರಾರಾಜಿಸಿದವು.

ಸುಮಲತಾ ಅವರಂತೆ ಡ್ರಸ್‌ ಮತ್ತು ಕನ್ನಡಕ
ಶ್ರೀರಂಗಪಟ್ಟಣ: ಮಂಡ್ಯ ಲೋಕಸಭಾ ಚುನಾವಣೆಯ ಪಕ್ಷೇತರ ಅಭ್ಯರ್ಥಿಗಳ ಎವಿಎಂನ ಕ್ರಮ ಸಂಖ್ಯೆ 19ರ ಸುಮಲತಾ ಅವರನ್ನು ತಕ್ಷಣ ನೋಡಿದರೆ ಮತದಾರರು ಗೊಂದಲಕ್ಕೀಡಾಗುವ ಸಾಧ್ಯತೆ ಇದೆ.ಸುಮಲತಾ ಅಂಬರೀಶ್‌ ಅವರಂತೆ ಪುಲ್‌ ಬ್ಲೌಸ್‌,ಸೀರೆ ಹಾಗೂ ಕನ್ನಡಕ ಹಾಕಿಸಿ ಪೋಟೊ ಕ್ಲಿಕ್ಕಿಸಿದ್ದಾರೆ.ಆ ಪೋಟೋವನ್ನೇ ಇವಿಎಂನಲ್ಲಿಯೂ ಹಾಕಿದಂತೆ ಕಾಣುತ್ತಿದೆ ಎಂದು ಕ್ರಮಸಂಖ್ಯೆ 19ರ ಸುಮಲತಾ ಹಾಗೂ ಕ್ರಮಸಂಖ್ಯೆ 20ರ ಸುಮಲತಾ ಅಂಬರೀಶ್‌ ಅವರ ಪೋಟೋಗಳು ಜಂಟಿಯಾಗಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.

ಟಾಪ್ ನ್ಯೂಸ್

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.