ಸ್ಟಾರ್‌ ಪ್ರಚಾರಕರ ನಿರೀಕ್ಷೆಯಲ್ಲಿ ಬಂಟ್ವಾಳ


Team Udayavani, Apr 5, 2019, 10:03 AM IST

star

ಬೆಳ್ತಂಗಡಿ: ಚುನಾವಣೆ ಬಂದರೆ, ಎಲ್ಲ ಪಕ್ಷಗಳ ಕಾರ್ಯಕರ್ತರಿಗೂ ಹಬ್ಬವೇ. ಮನೆ ಮನೆ ಪ್ರಚಾರದಿಂದ ಹಿಡಿದು ಸಭೆ ಗಳು, ಸಮಾವೇಶಗಳು, ರೋಡ್‌ಶೋ- ಹೀಗೆ ಬೇರೆ ಬೇರೆ ರೀತಿಯಲ್ಲಿ ಮತಬೇಟೆ ನಡೆಯುತ್ತದೆ. ಈ ಸಂದರ್ಭ ಸ್ಟಾರ್‌ ಪ್ರಚಾರಕರು ಜತೆಗಿದ್ದರೆ ಅದರ ರಂಗು ಬೇರೆಯೇ.

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಂಟ್ವಾಳ ವಿಧಾನಸಭಾ ಕ್ಷೇತ್ರವು ರಾಜ್ಯ, ರಾಷ್ಟ್ರ ಮಟ್ಟದ ಸ್ಟಾರ್‌ ಪ್ರಚಾರಕರನ್ನು ನಿರೀಕ್ಷಿಸುತ್ತಿದೆ. ಎಲ್ಲ ರಾಜಕೀಯ ಪಕ್ಷಗಳಿಂದಲೂ ಬಂಟ್ವಾಳ ಕ್ಷೇತ್ರದಲ್ಲಿ ಈಗಾಗಲೇ ಪ್ರಚಾರ ನಡೆಯುತ್ತಿದ್ದರೂ ದೊಡ್ಡ ಮಟ್ಟದ ನಾಯಕರ ಆಗಮನ ಇನ್ನೂ ಆಗಿಲ್ಲ.
ಕಾಂಗ್ರೆಸ್‌, ಬಿಜೆಪಿ, ಎಸ್‌ಡಿಪಿಐ ಈಗಾಗಲೇ ಹಲವು ಸಭೆಗಳನ್ನು ಆಯೋಜಿಸಿ ಮತ ಬೇಟೆಗೆ ಕಾರ್ಯ ಕರ್ತರನ್ನು ಸಿದ್ಧಗೊಳಿಸಿವೆ. ದೊಡ್ಡ ಮಟ್ಟದ ಸಮಾವೇಶ, ರೋಡ್‌ಶೋಗಳಿಗೆ ಮಾತುಕತೆ ನಡೆಯುತ್ತಿದೆಯೇ ವಿನಾ ಯಾವುದೂ ಅಂತಿಮಗೊಂಡಿಲ್ಲ.

ಬಿಜೆಪಿ: ಮನೆ ಮನೆ ಪ್ರಚಾರಕ್ಕೆ ಆದ್ಯತೆ
ಬಂಟ್ವಾಳ ಬಿಜೆಪಿಯು ಸಮಾವೇಶಕ್ಕಿಂತಲೂ ರೋಡ್‌ಶೋ ನಡೆಸುವ ಯೋಚನೆಯಲ್ಲಿದೆ. ಆ ಸಂದರ್ಭದಲ್ಲಿ ಯಾವ ಸ್ಟಾರ್‌ ಪ್ರಚಾರಕರು ಸಿಗುತ್ತಾರೋ ಅವರನ್ನು ಕರೆತರಲಾಗುವುದು. ಶಾಸಕ ರಾಜೇಶ್‌ ನಾಯ್ಕ, ಅಭ್ಯರ್ಥಿ ನಳಿನ್‌ ಸೇರಿದಂತೆ ಜಿಲ್ಲಾ ಮಟ್ಟದ ನಾಯಕರು ಬಂಟ್ವಾಳದಲ್ಲಿ ಪ್ರಚಾರ ನಡೆಸು ವರು. ಸಮಾವೇಶ ಯಾ ರೋಡ್‌ಶೋ ಕುರಿತು ತೀರ್ಮಾನ ಕೈಗೊಂಡಿಲ್ಲ. ಮನೆ ಪ್ರಚಾರಕ್ಕೆ ಪ್ರಾಶಸ್ತÂ ನೀಡಲಿದ್ದೇವೆ ಎಂದು ಬಿ. ದೇವದಾಸ್‌ ಶೆಟ್ಟಿ ತಿಳಿಸಿದ್ದಾರೆ.

ಕಾಂಗ್ರೆಸ್‌: ಡಿಕೆಶಿ ನಿರೀಕ್ಷೆ
ಬಂಟ್ವಾಳ ಕ್ಷೇತ್ರದಲ್ಲಿ ಕಾಂಗ್ರೆಸ್‌ ಪಕ್ಷವು ಯುವ ನ್ಯಾಯವಾದಿ ಸುಧೀರ್‌ ಕುಮಾರ್‌ ಮುರೊಳ್ಳಿ ಅವರನ್ನು ಕರೆತಂದು ಸಮಾವೇಶಕ್ಕೆ ಸಿದ್ಧತೆ ನಡೆಸಿದೆ. ಜತೆಗೆ ರಾಜ್ಯ ರಾಜಕಾರಣದಲ್ಲಿ ಟ್ರಬಲ್‌ ಶೂಟರ್‌ ಎಂದೇ ಗುರುತಿಸಲ್ಪಟ್ಟಿರುವ ಸಚಿವ ಡಿ.ಕೆ. ಶಿವಕುಮಾರ್‌ ಅವರನ್ನು ಕರೆತರಲು ಪ್ರಯತ್ನ ನಡೆದಿದೆ ಎಂದು ಕಾಂಗ್ರೆಸ್‌ ಮೂಲಗಳು ತಿಳಿಸಿವೆ. ಬಿ. ರಮಾನಾಥ ರೈ ಕ್ಷೇತ್ರದ ಮಾಜಿ ಶಾಸಕರಲ್ಲದೆ ಮಾಜಿ ಸಚಿವರೂ ಆಗಿರುವುದರಿಂದ ಸದ್ಯ ಅವರೇ ಸ್ಟಾರ್‌. ಉಳಿದಂತೆ ರಾಜ್ಯ ಮಟ್ಟದ ನಾಯಕರು ದ.ಕ. ಕ್ಷೇತ್ರಕ್ಕೆ ಆಗಮಿಸಿದ್ದರೆ ಅವರನ್ನು ಬಂಟ್ವಾಳಕ್ಕೆ ಕರೆತರುವ ಕುರಿತು ಮಾತುಕತೆ ನಡೆಯುತ್ತಿದೆ ಎಂದು ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಬೇಬಿ ಕುಂದರ್‌ ತಿಳಿಸಿದ್ದಾರೆ.

 ಕಿರಣ್‌ ಸರಪಾಡಿ

ಟಾಪ್ ನ್ಯೂಸ್

ಏಕಾಏಕಿ ಯು-ಟರ್ನ್ ತೆಗೆದ ಟ್ರಕ್ ಚಾಲಕ… ಕಾರು ಡಿಕ್ಕಿ ಹೊಡೆದು 6 ಮಂದಿ ಸ್ಥಳದಲ್ಲೇ ಮೃತ್ಯು

ಏಕಾಏಕಿ ಯು-ಟರ್ನ್ ತೆಗೆದ ಟ್ರಕ್ ಚಾಲಕ… ಕಾರು ಡಿಕ್ಕಿ ಹೊಡೆದು 6 ಮಂದಿ ಸ್ಥಳದಲ್ಲೇ ಮೃತ್ಯು

6-bantwala

Bantwala: ನೀರಿನ ಅಭಾವದಿಂದ ಕೃಷಿ ಹಾನಿ; ಮನನೊಂದು ಕೃಷಿಕ ಆತ್ಮಹತ್ಯೆ

Viral: 1 ಗಂಟೆಯಲ್ಲಿ 1,123 ಮರಗಳನ್ನು ಅಪ್ಪಿಕೊಂಡು ಗಿನ್ನೆಸ್​ ವಿಶ್ವ ದಾಖಲೆ ಬರೆದ ಯುವಕ

Viral: 1 ಗಂಟೆಯಲ್ಲಿ 1,123 ಮರಗಳನ್ನು ಅಪ್ಪಿಕೊಂಡು ಗಿನ್ನೆಸ್​ ವಿಶ್ವ ದಾಖಲೆ ಬರೆದ ಯುವಕ

3-kollegala

Kollegala: ಖಾಸಗಿ ಬಸ್ ಡಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Revanna 2

Extended;ಎಚ್.ಡಿ.ರೇವಣ್ಣ ನ್ಯಾಯಾಂಗ ಬಂಧನ ಮೇ 14ರವರೆಗೆ ವಿಸ್ತರಣೆ

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ

1-wwewewqe

Haryana ಬಿಜೆಪಿ ಸರಕಾರಕ್ಕೆ ಶಾಕ್: ಕೈಗೆ ಬೆಂಬಲ ನೀಡಿದ 3 ಪಕ್ಷೇತರರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಏಕಾಏಕಿ ಯು-ಟರ್ನ್ ತೆಗೆದ ಟ್ರಕ್ ಚಾಲಕ… ಕಾರು ಡಿಕ್ಕಿ ಹೊಡೆದು 6 ಮಂದಿ ಸ್ಥಳದಲ್ಲೇ ಮೃತ್ಯು

ಏಕಾಏಕಿ ಯು-ಟರ್ನ್ ತೆಗೆದ ಟ್ರಕ್ ಚಾಲಕ… ಕಾರು ಡಿಕ್ಕಿ ಹೊಡೆದು 6 ಮಂದಿ ಸ್ಥಳದಲ್ಲೇ ಮೃತ್ಯು

ಪ್ರಜ್ವಲ್‌ ಪ್ರಕರಣ ತನಿಖೆಯಲ್ಲಿದ್ದರೂ ಬಿಜೆಪಿಯಿಂದ ರಾಜಕೀಯ:ಸಚಿವ ಬಿ. ನಾಗೇಂದ್ರ

ಪ್ರಜ್ವಲ್‌ ಪ್ರಕರಣ ತನಿಖೆಯಲ್ಲಿದ್ದರೂ ಬಿಜೆಪಿಯಿಂದ ರಾಜಕೀಯ:ಸಚಿವ ಬಿ. ನಾಗೇಂದ್ರ

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಹಾಸಭೆ

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಹಾಸಭೆ

6-bantwala

Bantwala: ನೀರಿನ ಅಭಾವದಿಂದ ಕೃಷಿ ಹಾನಿ; ಮನನೊಂದು ಕೃಷಿಕ ಆತ್ಮಹತ್ಯೆ

Viral: 1 ಗಂಟೆಯಲ್ಲಿ 1,123 ಮರಗಳನ್ನು ಅಪ್ಪಿಕೊಂಡು ಗಿನ್ನೆಸ್​ ವಿಶ್ವ ದಾಖಲೆ ಬರೆದ ಯುವಕ

Viral: 1 ಗಂಟೆಯಲ್ಲಿ 1,123 ಮರಗಳನ್ನು ಅಪ್ಪಿಕೊಂಡು ಗಿನ್ನೆಸ್​ ವಿಶ್ವ ದಾಖಲೆ ಬರೆದ ಯುವಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.