ಇವಿಎಂ ಬಗ್ಗೆ ಹಾದಿ-ಬೀದಿ ಚರ್ಚೆ ಬೇಡ


Team Udayavani, Mar 30, 2019, 7:43 AM IST

5-f.

ಬೆಂಗಳೂರು: ವಿದ್ಯುನ್ಮಾನ ಮತಯಂತ್ರಗಳ (ಇವಿಎಂ) ಬಗ್ಗೆ ರಾಜಕೀಯ ಪಕ್ಷಗಳು
ಅಥವಾ ಜನಸಾಮಾನ್ಯರು ಸುಖಾಸುಮ್ಮನೆ ಆರೋಪ ಮಾಡುವುದು ಮತ್ತು ಇದರ
ಬಗ್ಗೆಹಾದಿ-ಬೀದಿಯಲ್ಲಿಮಾತನಾಡುವುದು ಸರಿಯಲ್ಲ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ ಕುಮಾರ್‌ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಇವಿಎಂ-ವಿವಿಪ್ಯಾಟ್‌ಗಳ ತಾಂತ್ರಿಕ ವಿಷಯ
ಗಳ ಕುರಿತು ಶುಕ್ರವಾರ ಹಮ್ಮಿಕೊಂಡಿದ್ದ ಮಾಧ್ಯಮ ಕಾರ್ಯಾಗಾರದಲ್ಲಿ ಮಾತ
ನಾಡಿದ ಅವರು, ಇವಿಎಂನ ತಾಂತ್ರಿಕ ಹಾಗೂ ಆಡಳಿತಾತ್ಮಕ ವಿಷಯಗಳನ್ನು ಬಲವಾಗಿ ಸಮರ್ಥಿಸಿಕೊಂಡರು. ನಮ್ಮ ದೇಶದಲ್ಲಿ ಬಳಕೆ ಆಗುತ್ತಿರುವ ಇವಿಎಂಗಳು
ಇಡೀ ಪ್ರಪಂಚದಲ್ಲೇ ಅತ್ಯಂತ ಸುಧಾರಿತ ಮತ್ತು ತಾಂತ್ರಿಕವಾಗಿ ಸುರಕ್ಷಿತ ಇವಿಎಂಗಳಾಗಿವೆ. ಇವುಗಳನ್ನು ಹ್ಯಾಕ್‌ ಮಾಡಲು, ತಿರುಚಲು, ದುರ್ಬಳಕೆ ಮಾಡಿಕೊಳ್ಳಲು ಯಾವ ಕಾರಣಕ್ಕೂ, ಯಾವ ಹಂತದಲ್ಲೂ ಸಾಧ್ಯ ವಿಲ್ಲ. ಇವುಗಳ ಬಗೆಗಿನ ಎಲ್ಲ ಆರೋಪ, ಆಕ್ಷೇಪ ಮತ್ತು ಅಪಸ್ವರಗಳಿಗೆ ತಾಂತ್ರಿಕ ಉತ್ತರಗಳು ಸಿಕ್ಕಿವೆ. ಮೇಲಾಗಿ ಇದಕ್ಕೆ ನ್ಯಾಯಾಲ ಯದ ಸಮರ್ಥನೆ ಸಿಕ್ಕಿದೆ ಎಂದರು.

ಇವಿಎಂ ಬಗ್ಗೆ ರಾಜಕೀಯ ಪಕ್ಷಗಳಿಂದ ಹಾಗೂ ಜನಸಾಮಾನ್ಯರಿಂದ ಸಾಕಷ್ಟು
ದೂರುಗಳು ಬಂದಿವೆ. ಅನುಮಾನಗಳನ್ನು ವ್ಯಕ್ತಪಡಿಸಲಾಗಿದೆ. ಆದರೆ, ಅದೆಲ್ಲದರ ಬಗ್ಗೆ
ತಾಂತ್ರಿಕ ತಜ್ಞರಿಂದ ಸಮಂಜಸವಾದ ಉತ್ತರ ಮತ್ತು ಸ್ಪಷ್ಟನೆಗಳನ್ನು ಕೊಡಲಾಗಿದೆ.
ಇವಿಎಂ ಹ್ಯಾಕ್‌ ಬಗ್ಗೆ ಬಲವಾದ ಆರೋಪಗಳು ಕೇಳಿ ಬಂದಿದ್ದಾಗ ಕೇಂದ್ರ ಚುನಾವಣಾ
ಆಯೋಗ “ಓಪನ್‌ ಹ್ಯಾಕಥಾನ್‌’ಗೆ ಕರೆ ಕೊಟ್ಟಿತ್ತು. ಆರೋಪ ಮಾಡಿದ್ದ ಯಾರೊಬ
ºರೂ ಅಲ್ಲಿಗೆ ಬಂದಿಲ್ಲ. ಇವಿಎಂ ಬಗ್ಗೆ ಇಲ್ಲಿವರೆಗೆ ಮಾಡಲಾದ ಯಾವ ಆರೋಪವ
ನ್ನೂ ಸಾಬೀತುಪಡಿಸಲು ಸಾಧ್ಯವಾಗಿಲ್ಲ ಎಂದರು.

ಈ ವೇಳೆ, ಉಪ ಮುಖ್ಯ ಚುನಾವಣಾಧಿಕಾರಿ ವಿ.ರಾಘ ವೇಂದ್ರ ಅವರು
ಇವಿಎಂ-ವಿವಿಪ್ಯಾಟ್‌ ಬಗ್ಗೆ ಪ್ರಾತ್ಯಕ್ಷಿಕೆ ನೀಡಿದರು. ವಾರ್ತಾ ಇಲಾಖೆ ನಿರ್ದೇಶಕ
ಭೃಂಗೀಶ್‌ ಮತ್ತಿತರರು ಇದ್ದರು.

5 ಕೋಟಿ ಮಂದಿಗೆ ಪ್ರಾತ್ಯಕ್ಷಿಕೆ
ಕಳೆದ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯಾದ್ಯಂತ 3.5 ಕೋಟಿ ಜನರಿಗೆ ಇವಿಎಂ ಬಗ್ಗೆ ಪ್ರಾತ್ಯಕ್ಷಿಕೆ ನೀಡಲಾಗಿತ್ತು. ಈ ಬಾರಿ ಇಲ್ಲಿವರೆಗೆ 3 ಕೋಟಿಗೂ ಹೆಚ್ಚು ಜನರಿಗೆ ಪ್ರಾತ್ಯಕ್ಷಿಕೆ ನೀಡಲಾಗಿದ್ದು, 5 ಕೋಟಿಗೂ ಹೆಚ್ಚು ಜನರಿಗೆ ಪ್ರಾತ್ಯಕ್ಷಿಕೆ ನೀಡುವ ಗುರಿ ಇಟ್ಟುಕೊಳ್ಳಲಾಗಿದೆ. ವಿವಿಪ್ಯಾಟ್‌ ಬಳಕೆಯಿಂದ ಮತದಾನದ ಖಾತರಿ ಸಿಗಲಿದೆ. ಒಬ್ಬ ಮತದಾರ ಮತ ಚಲಾಯಿಸಿದಾಗ ವಿವಿಪ್ಯಾಟ್‌ನ ಗಾಜಿನ ಕಿಂಡಿಯಲ್ಲಿ ಏಳು ಸೆಕೆಂಡ್‌ ವರೆಗೆ ಮತದಾನದ ವಿವರ ಪ್ರದರ್ಶನಗೊಳ್ಳುತ್ತದೆ. ಇವಿಎಂ ಮತಯಂತ್ರಗಳನ್ನು ಜಿಪಿಎಸ್‌ ವ್ಯವಸ್ಥೆ ಅಳವಡಿಸಿರುವ ವಾಹನಗಳಲ್ಲಿ ಬಿಗಿ ಪೊಲೀಸ್‌ ಭದ್ರತೆಯಲ್ಲಿ
ಸಾಗಿಸಲಾಗುತ್ತದೆ. ರಾಜಕೀಯ ಪಕ್ಷದ ಪ್ರತಿನಿಧಿಗಳ ಬೆಂಗಾವಲಿಗೂ ಅವಕಾಶವಿರುತ್ತದೆ ಎಂದು ಸಂಜೀವ ಕುಮಾರ್‌ ವಿವರಿಸಿದರು.

ಟಾಪ್ ನ್ಯೂಸ್

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.