ಸ್ವಪಕ್ಷದ ಪ್ರಣಾಳಿಕೆಯಲ್ಲೇ ತಪ್ಪು ಹುಡುಕಿದ ಸುಬ್ರಮಣ್ಯನ್ ಸ್ವಾಮಿ
Team Udayavani, Apr 10, 2019, 10:30 AM IST
ಹೊಸದಿಲ್ಲಿ: ಭಾರತೀಯ ಜನತಾ ಪಕ್ಷದ ಹಿರಿಯ ರಾಜಕಾರಣಿ, ರಾಜ್ಯ ಸಭಾ ಸದಸ್ಯ ಸುಬ್ರಮಣ್ಯನ್ ಸ್ವಾಮಿ ತಮ್ಮ ಪಕ್ಷದ ಚುನಾವಣಾ ಪ್ರಣಾಳಿಕೆಯಲ್ಲಿ ತಪ್ಪನ್ನು ಹುಡುಕಿದ್ದಾರೆ. ಬುಧವಾರ ಬೆಳಗ್ಗೆ ಟ್ವೀಟ್ ಮಾಡಿ ಬಿಜೆಪಿಯ ‘ಸಂಕಲ್ಪ ಪತ್ರ’ದ ಎರಡು ಪ್ರಮಾದಗಳನ್ನು ಗುರುತಿಸಿದ್ದಾರೆ.
ಸೋಮವಾರ ಬಿಜೆಪಿ ನಾಯಕ ರಾಜನಾಥ್ ಸಿಂಗ್ ಸಂಕಲ್ಪ ಪತ್ರ ಎಂಬ ಹೆಸರಿನ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದರು. ಇದರಲ್ಲಿ ಹಲವಾರು ಭರವಸೆಗಳನ್ನು ಜನರಿಗೆ ನೀಡಲಾಗಿತ್ತು. 2022ರ ಹೊತ್ತಿಗೆ ರೈತರ ಆದಾಯವನ್ನು ದುಪ್ಪಟ್ಟುಗೊಳಿಸುವ ಆಶ್ವಾಸನೆ ನೀಡಿತ್ತು. ಬಿಜೆಪಿಯ ಈ ಆಶ್ವಾಸನೆಯನ್ನು ಪ್ರಮಾದ ಎಂದಿರುವ ಸ್ವಾಮಿ 2022ರಲ್ಲಿ ರೈತರ ಆದಾಯ ದುಪ್ಪಟ್ಟಾಗುವುದೆಂದರೆ ವಾರ್ಷಿಕ ಶೇಕಡಾ 24ರಷ್ಟು ಬೆಳವಣಿಗೆಯಾಗಬೇಕು. ಆದರೆ ಅದು ಸಾಧ್ಯವಿಲ್ಲ. ವಾರ್ಷಿಕ ಕೇವಲ 10 ಶೇಕಡಾ ಬೆಳವಣಿಗೆ ಸಾಧ್ಯ ಎಂದಿದ್ದಾರೆ.
ಬಿಜೆಪಿಯ ತನ್ನ ಪ್ರಣಾಳಿಕೆಯಲ್ಲಿ ಭಾರತದ ಒಟ್ಟು ದೇಶೀಯ ಉತ್ಪನ್ನ (ಜಿಡಿಪಿ) ವಿಶ್ವದಲ್ಲಿ ಆರನೇ ಸ್ಥಾನದಲ್ಲಿದೆ ಎಂದಿದೆ. ಆದರೆ ಭಾರತದ ಜಿಡಿಪಿ ವಿಶ್ವದಲ್ಲಿ ಮೂರನೇ ಸ್ಥಾನದಲ್ಲಿದೆ ಎಂದು ಆರ್ಥಿಕ ತಜ್ಞರೂ ಆಗಿರುವ ಸುಬ್ರಮಣ್ಯನ್ ಸ್ವಾಮಿ ಬಿಜೆಪಿ ತಪ್ಪುಗಳನ್ನು ಗುರುತಿಸಿದ್ದಾರೆ.
ಕೇಂದ್ರ ಸಚಿವರುಗಳಾದ ರಾಜನಾಥ್ ಸಿಂಗ್, ಅರುಣ್ ಜೇಟ್ಲಿ, ನಿರ್ಮಲಾ ಸೀತರಾಮನ್, ಪಿಯೂಶ್ ಘೋಯಲ್, ರವಿಶಂಕರ್ ಪ್ರಸಾದ್, ಮುಖ್ತಾರ್ ಅಬ್ಬಾಸ್ ನಖ್ವಿ ಮತ್ತು ಮಧ್ಯ ಪ್ರದೇಶದ ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಸೇರಿದಂತೆ 20 ಮಂದಿ ಸದಸ್ಯರು ಸೇರಿ ಬಿಜೆಪಿಯ ಸಂಕಲ್ಪ ಪತ್ರವನ್ನು ಸಿದ್ದ ಪಡಿಸಿದ್ದರು.
I have sent word to Rajnath to revise the Manifesto on two blunder:a) Doubling of farmers income by 2022 means a 24% per year growth rate which is unbelievable given past world record, best can be 10% per year. b)India’s comparable GDP is 3rd largest not 6th.
— Subramanian Swamy (@Swamy39) April 10, 2019
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Bike thief: ಬಜಪೆ ಪೊಲೀಸರಿಂದ ಅಂತರ್ ಜಿಲ್ಲಾ ಬೈಕ್ ಕಳ್ಳನ ಬಂಧನ
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್