ಅಂಬೇಡ್ಕರ್ ಜಯಂತಿಯಲ್ಲಿ ಭಾಗಿಯಾದ ಸುಮಲತಾ, ನಿಖಿಲ್
Team Udayavani, Apr 15, 2019, 3:00 AM IST
ಮಂಡ್ಯ: ಚುನಾವಣಾ ಪ್ರಚಾರದ ಅಬ್ಬರದ ನಡುವೆ ಜಿಲ್ಲೆಯಲ್ಲಿ ನಡೆದ ಅಂಬೇಡ್ಕರ್ ಜಯಂತಿಯಲ್ಲಿ ಮೈತ್ರಿಕೂಟ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಹಾಗೂ ಪಕ್ಷೇತರ ಅಭ್ಯರ್ಥಿ ಸುಮಲತಾ ಪಾಲ್ಗೊಂಡಿದ್ದು ವಿಶೇಷವಾಗಿತ್ತು.
ಮಂಡ್ಯದ ಕಾವೇರಿವನದಲ್ಲಿರುವ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಸುಮಲತಾ ಅಂಬೇಡ್ಕರ್ ಜಯಂತಿ ಆಚರಿಸಿದರು. ಬಳಿಕ ಮಾತನಾಡಿ, ಈ ಚುನಾವಣೆಯಲ್ಲಿ ಜಿಲ್ಲೆಯೊಳಗೆ ಭಯದ ವಾತಾವರಣವಿರುವುದು ಸಹಜ. ಆ ಕಾರಣಕ್ಕೆ ನಾನು ಚುನಾವಣಾ ಆಯೋಗಕ್ಕೆ ದೂರು ಕೊಟ್ಟಿದ್ದೇನೆ. ಮೈತ್ರಿ ಸರ್ಕಾರದ ನೇತೃತ್ವ ವಹಿಸಿರುವವರು ಅಧಿಕಾರ ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ ಎಂದು ದೂಷಿಸಿದರು.
ಜಿಲ್ಲೆಯ ಜನರನ್ನು ನಂಬಿ ಮುಖ್ಯಮಂತ್ರಿ, ಮಾಜಿ ಪ್ರಧಾನಿ, ಎಂಟು ಶಾಸಕರು, ಮೂವರು ಎಂಎಲ್ಸಿ ಹಾಗೂ ಒಬ್ಬರು ಸಂಸದರನ್ನು ಎದುರು ಹಾಕಿಕೊಂಡು ಚುನಾವಣೆ ಎದುರಿಸುತ್ತಿದ್ದೇನೆ. ಚುನಾವಣೆಯಲ್ಲಿ ಮಳವಳ್ಳಿ ಹುಚ್ಚೇಗೌಡರ ಸೊಸೆಯನ್ನು ಮಾತ್ರ ಕೈಬಿಡಬೇಡಿ.
ಮಂಡ್ಯ ಜಿಲ್ಲೆಯ ಸ್ವಾಭಿಮಾನದ ಪ್ರಶ್ನೆಯಾಗಿರುವುದರಿಂದ ಮಂಡ್ಯ ಜಿಲ್ಲೆಯ ಸೊಸೆಯಾಗಿರುವ ಸುಮಾಲತಾರನ್ನು ಅತ್ಯಧಿಕ ಮತಗಳ ಅಂತರದಿಂದ ಗೆಲ್ಲಿಸಿ ಎಂದು ಮನವಿ ಮಾಡಿದರು. ಚಿತ್ರ ನಿರ್ಮಾಪಕ ರಾಕ್ಲೈನ್ ವೆಂಕಟೇಶ್ ಸಾಥ್ ನೀಡಿದರು. ಬಳಿಕ, ಮಂಡ್ಯದ ಹಲವು ಚರ್ಚ್ಗಳಿಗೆ ತೆರಳಿ, ಕ್ರೈಸ್ತ ಸಮುದಾಯದ ಮುಖಂಡರೊಂದಿಗೆ ಸಮಾಲೋಚನೆ ನಡೆಸಿ, ಬೆಂಬಲ ಕೋರಿದರು.
ಟಿಪ್ಪು ಸಮಾಧಿಗೆ ನಮನ: ಈ ಮಧ್ಯೆ, ನಿಖಿಲ್ ಕೂಡ ಕಾವೇರಿವನದಲ್ಲಿರುವ ಅಂಬೇಡ್ಕರ್ ಪ್ರತಿಮೆಗೆ ಭಾನುವಾರ ಮಾಲಾರ್ಪಣೆ ಮಾಡಿ, ಚುನಾವಣಾ ಪ್ರಚಾರ ಆರಂಭಿಸಿದರು. “ಚುನಾವಣೆಯಲ್ಲಿ ನನ್ನ ಪರ ಶಕ್ತಿ ತುಂಬಲು ಡಾ.ಯತೀಂದ್ರಣ್ಣ ಬಂದಿದ್ದಾರೆ.
ಮೊನ್ನೆಯಷ್ಟೇ ಸಿದ್ದರಾಮಯ್ಯನವರು ಬಂದು ನನಗೆ ಬೆಂಬಲ ಸೂಚಿಸಿ ಪ್ರಚಾರ ಮಾಡಿ ಹೋಗಿದ್ದಾರೆ. ಏ.16ರಂದು ಮಂಡ್ಯ ನಗರದಲ್ಲಿ ಪ್ರಚಾರ ಮುಗಿಸೋಣ ಎಂದುಕೊಂಡಿದ್ದೇವೆ. ಜನರು ಈ ಬಾರಿ ನನ್ನ ಕೈ ಹಿಡಿದೇ ಹಿಡಿಯುವರೆಂಬ ಆತ್ಮವಿಶ್ವಾಸವಿದೆ’ ಎಂದರು.
ಬಳಿಕ, ಗಂಜಾಂನ ಗುಂಬಸ್ಗೆ ಭೇಟಿ ನೀಡಿ ಟಿಪ್ಪು ಸಮಾಧಿಗೆ ಹೂವಿನ ಚಾದರ ಹೊದಿಸಿ, ಪ್ರಾರ್ಥನೆ ಸಲ್ಲಿಸಿದರು. ಅಲ್ಲಿಂದ ಶ್ರೀ ನಿಮಿಷಾಂಬ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ನಂತರ, ಗಂಜಾಂ ಗ್ರಾಮದಲ್ಲಿ ರೋಡ್ ಶೋ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ