ಮಂಡ್ಯ ವಿವಾದ: ವಿಚಾರಣೆ ಶುರು

ಡಿಸಿ ರಾಜೀನಾಮೆಗೆ ಸುಮಲತಾ ಆಗ್ರಹ

Team Udayavani, Apr 1, 2019, 5:55 AM IST

Sumalatha-(18)

ಮಂಡ್ಯ: ಪ್ರಭಾವಿಗಳನ್ನು ಪಣ ಕ್ಕೊಡ್ಡಿರುವ ಕಣ ವಾದ ಮಂಡ್ಯ ಲೋಕ ಸಭಾ ಕ್ಷೇತ್ರ ಈಗ ವಿವಾದ ದಿಂದ ಸುದ್ದಿ ಮಾಡು ತ್ತಿದೆ. ಜೆಡಿಎಸ್‌ ಅಭ್ಯರ್ಥಿ ನಿಖಿಲ್‌ ಕುಮಾರಸ್ವಾಮಿ ನಾಮಪತ್ರ ಕ್ರಮಬದ್ಧವಾಗಿಲ್ಲ ಎಂಬ ಆರೋಪದ ಬಗ್ಗೆ ಚುನಾವಣ ಆಯೋಗ ವಿಚಾರಣೆ ಆರಂಭಿಸಿದೆ. ರವಿವಾರ ಮೈಸೂರಿನ ಪ್ರಾದೇಶಿಕ ಆಯುಕ್ತ ಟಿ.ಕೆ.ಅನಿಲ್‌ ಕುಮಾರ್‌ ಅವರು ವಿಚಾರಣೆ ನಡೆಸಿದ್ದು, ಜಿಲ್ಲಾಧಿಕಾರಿಗಳ ಇತ್ತೀಚಿನ ನಡವಳಿಕೆಗಳು, ನಾಮಪತ್ರ ಪರಿಶೀಲನೆ ವೇಳೆ ಆಗಿರುವ ಲೋಪ ದೋಷಗಳು, ಅಫಿದವಿತ್‌ನಲ್ಲಿ ಆದ ತಪ್ಪುಗಳ ಕುರಿತಂತೆ ವಿವರಣೆ ಪಡೆದರು. ಈ ಬಗ್ಗೆ ದಿಲ್ಲಿ ಚುನಾವಣ ಆಯೋಗದ ಕೇಂದ್ರ ಕಚೇರಿಗೆ ವರದಿ ನೀಡುವುದಾಗಿ ಹೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ.

ರವಿವಾರ ಸುದ್ದಿಗೋಷ್ಠಿ ನಡೆಸಿದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್‌ , ಜಿಲ್ಲಾ ಚುನಾ ವಣಾಧಿಕಾರಿ ಮತ್ತು ಜಿಲ್ಲಾಧಿಕಾರಿ ಎನ್‌. ಮಂಜುಶ್ರೀ ಮುಖ್ಯಮಂತ್ರಿಗಳ ಒತ್ತಡಕ್ಕೆ ಒಳಗಾಗಿ ಕಾರ್ಯನಿರ್ವಹಿಸುತ್ತಿದ್ದು, ಕೂಡಲೇ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡ ಬೇಕು ಎಂದು ಒತ್ತಾಯಿಸಿದ್ದಾರೆ. ನಿಖಿಲ್‌ ನಾಮಪತ್ರ ದಲ್ಲಿನ ನ್ಯೂನತೆ ಬಗ್ಗೆ ತಮ್ಮ ಚುನಾವಣ ಏಜೆಂಟ್‌ ಸಲ್ಲಿಸಿದ್ದ ಆಕ್ಷೇಪಣೆಯನ್ನು ಪರಿಗಣಿಸಿಲ್ಲ. ನಾಮಪತ್ರ ಪರಿಶೀಲನೆ ಪ್ರಕ್ರಿಯೆಯ ಸಂಪೂರ್ಣ ವೀಡಿಯೋ ನೀಡುವಂತೆ ಮನವಿ ಸಲ್ಲಿಸಿದ್ದರೂ ಅರ್ಧ ಮಾತ್ರ ನೀಡಿದ್ದಾರೆ ಎಂದು ದೂರಿದರು. ನಿಖೀಲ್‌ಗೆ ನಾಮಪತ್ರ ಸಲ್ಲಿಕೆ ದಿನವೇ ಕ್ರಮ ಸಂಖ್ಯೆ 1 ಎಂದು ಹೇಗೆ ಪ್ರಕಟಿಸಲಾಯಿತು. ಇದರಲೆಲ್ಲ ಸಂಶಯ ಕಾಣಿಸುತ್ತಿದೆ ಎಂದರು.

ಕ್ರಮಬದ್ಧವಾಗಿರಲಿಲ್ಲ
ನಿಖಿಲ್‌ ಪರಿಷ್ಕೃತ ಅಫಿದವಿತ್‌ ಅನ್ನು ಮಾ.27 ರಂದು ಬೆಳಗ್ಗೆ 10 ಗಂಟೆಗೆ ಸಲ್ಲಿಸಿದ್ದಾರೆ ಎಂದು ರಿಟರ್ನಿಂಗ್‌ ಆಫೀಸರ್‌ ಹೇಳಿದ್ದಾರೆ. ಹೊಸ ಅಫಿದವಿತ್‌ನಲ್ಲಿ ಮಾ.27ರ ದಿನಾಂಕ ನಮೂದಿಸದೆ ಮಾ.21ರ ದಿನಾಂಕವನ್ನೇ ಉಲ್ಲೇಖೀಸಲಾಗಿದೆ. ಆ ದಿನ ಅಭ್ಯರ್ಥಿ ಕ್ಷೇತ್ರ ದಲ್ಲಿಲ್ಲದಿದ್ದರೂ ಅವರು ಪರಿಷ್ಕೃತ ಅಫಿದವಿತ್‌ನಲ್ಲಿ ಸಹಿ ಇರುವುದು ಹೇಗೆ ಸಾಧ್ಯ ಎಂದು ಅವರು ಪ್ರಶ್ನಿಸಿದ್ದಾರೆ.

ಇಂದಿನಿಂದ ಮತ್ತಷ್ಟು ರಂಗು
ಮಂಡ್ಯ ಕ್ಷೇತ್ರದ ಪ್ರಚಾರ ಅಖಾಡಕ್ಕೆ ಸುಮಲತಾ ಪರ ಸೋಮವಾರ ದಿಂದ ಚಿತ್ರ ನಟ ದರ್ಶನ್‌ ಇಳಿಯಲಿದ್ದರೆ, ಮಂಗಳವಾರ (ಎ.2)ದಿಂದ ಮತ್ತೂಬ್ಬ ನಟ ಯಶ್‌ ಪ್ರಚಾ ರ ಆರಂಭಿಸುತ್ತಾರೆ. ಎ.4ರಂದು ಮಾಜಿ ಮುಖ್ಯ ಮಂತ್ರಿ ಎಸ್‌.ಎಂ. ಕೃಷ್ಣ ಅವರು ಮಂಡ್ಯ ಕದನ ಕಣ ವನ್ನು ಪ್ರವೇಶಿಸಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಸುಮ ಲತಾ ಅಂಬ ರೀಷ್‌ ಪರ ಪ್ರಚಾ ರ ನಡೆಸಲಿದ್ದಾರೆ.

ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಆಗಿದೆ ಎನ್ನಲಾದ ಆಡಳಿತಾತ್ಮಕ ಲೋಪಗಳ ಬಗ್ಗೆ ತನಿಖೆ ಕೈಗೊಳ್ಳಲು ವಲಯ ಆಯುಕ್ತರಿಗೆ ಸೂಚಿಸಲಾಗಿದೆ. ಅವರಿಂದ ವರದಿ ಬಂದ ಬಳಿಕ ಚುನಾವಣ ಆಯೋಗ ಕ್ರಮ ಕೈಗೊಳ್ಳಲಿದೆ.
– ಸಂಜೀವ ಕುಮಾರ್‌
ರಾಜ್ಯ ಮುಖ್ಯ ಚುನಾವಣಾಧಿಕಾರಿ

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.