ಕೃಷ್ಣ ದರ್ಶನ’ ಪಡೆದ ಸುಮಲತಾ


Team Udayavani, Mar 16, 2019, 12:30 AM IST

2000.jpg

ಬೆಂಗಳೂರು: ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಮುಂದಾಗಿರುವ ಸುಮಲತಾ ಅಂಬರೀಶ್‌ ಅವರು ಬಿಜೆಪಿ ಹಿರಿಯ ನಾಯಕ ಎಸ್‌. ಎಂ.ಕೃಷ್ಣ ಅವರನ್ನು ಶುಕ್ರವಾರ ಭೇಟಿಯಾಗಿ ಮಾತುಕತೆ ನಡೆಸಿದ್ದು, ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಸದಾಶಿವನಗರದಲ್ಲಿನ ಕೃಷ್ಣ ನಿವಾಸಕ್ಕೆ ಶುಕ್ರವಾರ ಮಧ್ಯಾಹ್ನ 12.10ರ ಹೊತ್ತಿಗೆ ಭೇಟಿ ನೀಡಿದ ಸುಮಲತಾ ಅವರು, ಕೃಷ್ಣ ಅವರೊಂದಿಗೆ ಅರ್ಧ ಗಂಟೆ ಮಾತುಕತೆ ನಡೆಸಿದರು. ಮಂಡ್ಯ ಜಿಲ್ಲೆಯಲ್ಲಿನ ಇತ್ತೀಚಿನ ರಾಜಕೀಯ ಬೆಳವಣಿಗೆ ಬಗ್ಗೆ ಮಾಹಿತಿ ನೀಡಿದ ಸುಮಲತಾ, ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದರೆ ಬೆಂಬಲಿಸುವಂತೆ ಮನವಿ ಮಾಡಿದ್ದಾರೆ ಎನ್ನಲಾಗಿದೆ.

ಮಾತುಕತೆ ಬಳಿಕ ಪ್ರತಿಕ್ರಿಯಿಸಿದ ಕೃಷ್ಣ ಅವರು, “ಸುಮಲತಾ ಅವರು ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಪ್ರಸ್ತಾಪ ಮಾಡಿದ್ದಾರೆ. ಈ ಬಗ್ಗೆ ನಾಯಕರೊಂದಿಗೆ ಚರ್ಚಿಸಿ, ಮಾ.18ಕ್ಕೆ ತೀರ್ಮಾನ ತಿಳಿಸಲಿದ್ದೇನೆ. ಬಿಜೆಪಿ ಬೆಂಬಲ ನೀಡುತ್ತದೆಯೋ, ಇಲ್ಲವೋ ಎಂಬ ಬಗ್ಗೆಯೂ ಸದ್ಯದಲ್ಲೇ ತಿಳಿಸಲಾಗುವುದು. ಇತ್ತೀಚೆಗೆ ನಡೆದ ಮಂಡ್ಯ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದ ಡಾ.ಸಿದ್ದರಾಮಯ್ಯ ಅವರು 2.5 ಲಕ್ಷ ಮತ ಪಡೆದಿದ್ದು, ಪಕ್ಷಕ್ಕೆ ಉತ್ತಮ ಸ್ಪಂದನೆ ಇದೆ. ಸುಮಲತಾ ಅವರು ಒಂದು ನಿಲುವು ಕೈಗೊಂಡ ಬಳಿಕ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು’ ಎಂದು ತಿಳಿಸಿದರು. ಇದೇ ವೇಳೆ, “ವಂಶ ಪಾರಂಪರ್ಯವಾಗಿ ಕುಟುಂಬ ರಾಜಕಾರಣ ಮಾಡುವುದಕ್ಕೆ ನನ್ನ ವಿರೋಧವಿದೆ’ ಎಂದರು.

ಕೃಷ್ಣ ಆಶೀರ್ವಾದ ಕೋರಿದ್ದೇನೆ: ಸುಮಲತಾ ಪ್ರತಿಕ್ರಿಯಿಸಿ, “ಕೃಷ್ಣ ಅವರು ಹಿರಿಯ ನಾಯಕರು.ಮಂಡ್ಯ ಜಿಲ್ಲೆಯಿಂದ ಬಂದು ಮುಖ್ಯಮಂತ್ರಿಯಾಗಿದ್ದವರು. ಹಾಗಾಗಿ, ಅವರ ಆಶೀರ್ವಾದ ಪಡೆಯಲು ಬಂದಿದ್ದೇನೆ. ಜತೆಗೆ, ಮಂಡ್ಯದ ರಾಜಕೀಯ ಬೆಳವಣಿಗೆ, ಸದ್ಯದ ಪರಿಸ್ಥಿತಿಯ ಬಗ್ಗೆ ವಿವರ ನೀಡಿದ್ದೇನೆ. ಈಗಾಗಲೇ ಕಾಂಗ್ರೆಸ್‌ ಪಕ್ಷವು ಮಂಡ್ಯ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟು ಕೊಟ್ಟಿರುವುದರಿಂದ ಆ ಬಗ್ಗೆ ಮಾತನಾಡುವುದಿಲ್ಲ. ನಾನು ಹಿರಿಯ ನಾಯಕರನ್ನು ಭೇಟಿಯಾಗಿ ಆಶೀರ್ವಾದ ಪಡೆಯಬೇಕಿದೆ. ಬಿಜೆಪಿಯಿಂದಲೂ ಯಾರೊಬ್ಬರು ಅಧಿಕೃತವಾಗಿ ಬೆಂಬಲ ನೀಡುವ ಬಗ್ಗೆ ಮಾತನಾಡಿಲ್ಲ. ನಾನು ಎಲ್ಲರ ಬೆಂಬಲ ನಿರೀಕ್ಷಿಸುತ್ತಿದ್ದೇನೆ’ ಎಂದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.