ಅನುಕಂಪದ ಅಲೆ ಇಂಪ್ಯಾಕ್ಟ್?


Team Udayavani, Mar 19, 2019, 6:29 AM IST

anukamoada.jpg

ಕ್ಷೇತ್ರದ ವಸ್ತುಸ್ಥಿತಿ: ಈ ಕ್ಷೇತ್ರದಲ್ಲಿ ಬರುವ ಆರೂ ಬಿಬಿಎಂಪಿ ವಾರ್ಡ್‌ಗಳು ಬಿಜೆಪಿ ತೆಕ್ಕೆಯಲ್ಲಿವೆ. ಕಳೆದ ಮೂರೂ ವಿಧಾನಸಭಾ ಚುನಾವಣೆಗಳಲ್ಲಿ ಮತದಾರರು ಬಿಜೆಪಿ ಕೈಹಿಡಿದಿದ್ದಾರೆ. ಲೋಕಸಭೆ ವಿಚಾರದಲ್ಲೂ ಇಲ್ಲಿನ ಮತದಾರರ ಆಯ್ಕೆ ಕಮಲ. ಈ ನಿಟ್ಟಿನಲ್ಲಿ ಬಸವನಗುಡಿ ಬಿಜೆಪಿಯ ಭದ್ರಕೋಟೆ. ಇದರ ಪ್ರತಿಸ್ಪರ್ಧಿ ಕಾಂಗ್ರೆಸ್‌  ಪ್ರತಿ ಬಾರಿ ಅಭ್ಯರ್ಥಿ ಆಯ್ಕೆಯಲ್ಲಿಯೇ ಎಡವುತ್ತಿದೆ. ಪ್ರತಿ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಹೊಸ ಮುಖಗಳು ಕಾಣಿಸಿಕೊಳ್ಳುತ್ತವೆ. ಸೋಲುಂಡ ನಂತರ ಅವರು ಜನರ ಸಂಪರ್ಕದಿಂದಲೂ ದೂರ ಉಳಿಯುತ್ತಾರೆ. ಇದು ಕೂಡ ಬಿಜೆಪಿಗೆ ವರವಾಗಿದೆ.

ಸಾಮಾನ್ಯವಾಗಿ ಲೋಕಸಭಾ ಚುನಾವಣೆಯಲ್ಲಿ ಬಸವನಗುಡಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಪರ ಶೇ.50ರಿಂದ 60ರಷ್ಟು ಮತಗಳು ಚಲಾವಣೆ ಆಗುತ್ತಿದ್ದವು. ಆದರೆ, 2014ರಲ್ಲಿ ಪ್ರಧಾನಿ ನರೇಂದ್ರ ಮೋದಿ ಅಲೆ ಇದ್ದುದರಿಂದ ಈ ಮತದಾನ ಪ್ರಮಾಣ ಶೇ.68ಕ್ಕೆ ಏರಿಕೆಯಾಗಿತ್ತು. ಈ ಬಾರಿ ಕಣದ ಚಿತ್ರಣ ಬದಲಾಗಿದೆ. ಬಿಜೆಪಿಯಲ್ಲೂ ಲೋಕಸಭೆಗೆ ಹೊಸ ಮುಖ ಕಾಣಿಸಿಕೊಳ್ಳಲಿದೆ. ಇದರ ಲಾಭ ಪಡೆಯಲು ಕಾಂಗ್ರೆಸ್‌ ತಂತ್ರ ರೂಪಿಸುತ್ತಿದೆ. ಈ ನಿಟ್ಟಿನಲ್ಲಿ ಜನಸಂಪರ್ಕ ಅಭಿಯಾನ, ಕಾರ್ಯಕರ್ತರಿಗೆ ತರಬೇತಿ ಶಿಬಿರಗಳ ಮೂಲಕ ಚುನಾವಣಾ ಪ್ರಚಾರಕ್ಕೆ ಪಡೆಯನ್ನು ಸಜ್ಜುಗೊಳಿಸುತ್ತಿದೆ.

ಆದರೆ, ಅನಂತಕುಮಾರ್‌ ಪತ್ನಿ ತೇಜಸ್ವಿನಿ ಅನಂತಕುಮಾರ್‌ ಅವರೇ ಬಹುತೇಕ ಇಲ್ಲಿ ಕಣಕ್ಕಿಳಿಯಲಿದ್ದಾರೆ. ಅನಂತಕುಮಾರ್‌ ಅವಧಿಯಲ್ಲಿ ಆಗಿರುವ ಜನೌಷಧ ಕೇಂದ್ರ ಸೇರಿದಂತೆ ಹಲವು ಅಭಿವೃದ್ಧಿ ಕಾರ್ಯಕ್ರಮಗಳು ಬಿಜೆಪಿ ಗೆಲುವಿಗೆ ವರವಾಗಲಿವೆ. ಜತೆಗೆ ಪರ ಅನುಕಂಪದ ಅಲೆ ಕೆಲಸ ಮಾಡಲಿದೆ ಎಂಬ ವಿಶ್ವಾಸ ಬಿಜೆಪಿಯದ್ದು. ಅನುಕಂಪದ ಅಲೆ ಯಾವಾಗಲೂ ಕೆಲಸ ಮಾಡುವುದಿಲ್ಲ. ಉದಾಹರಣೆಗೆ ಜಯನಗರ ವಿಧಾನಸಭೆ ಕ್ಷೇತ್ರ ನಮ್ಮ ಮುಂದಿದೆ ಎಂಬ ವಾದ ಕಾಂಗ್ರೆಸ್‌ನದ್ದಾಗಿದೆ.

ಸಂಸದರಿಂದ ಬಂದ ಪ್ರಮುಖ ಕೊಡುಗೆಗಳು
-ಒಟ್ಟಾರೆ ನೀಡಿದ ಅನುದಾನ 3.52 ಕೋಟಿ 
-70 ಕಡೆ 93 ಸಿಸಿಟಿವಿ ಅಳವಡಿಕೆ. ಅಪರಾಧ ಪ್ರಕರಣ ಶೇ.50ರಷ್ಟು ಇಳಿಮುಖ
-ರಾಜ್ಯದ ಮೊದಲ ಜನೌಷಧ ಕೇಂದ್ರ ಸ್ಥಾಪನೆ
-3 ಶುದ್ಧ ಕುಡಿಯುವ ನೀರಿನ ಘಟಕಗಳು
-ಶಾಲಾ ಕೊಠಡಿಗಳ ನಿರ್ಮಾಣ

ನಿರೀಕ್ಷೆಗಳು
-ಹನುಮಂತನಗರ ಮುಖ್ಯರಸ್ತೆ ಸೇರಿದಂತೆ ಪ್ರಮುಖ ವೃತ್ತಗಳಲ್ಲಿ ಸಂಚಾರದಟ್ಟಣೆ ಸಮಸ್ಯೆ ನಿವಾರಣೆ

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ
-ವಿಧಾನಸಭಾ ಕ್ಷೇತ್ರ- ಬಸವನಗುಡಿ
-ವಾರ್ಡ್‌ಗಳು- 6
-ಬಿಜೆಪಿ- 6
-ಕಾಂಗ್ರೆಸ್‌- 0
-ಜೆಡಿಎಸ್‌- 0

-ಜನಸಂಖ್ಯೆ- 3,49,297
-ಮತದಾರರ ಸಂಖ್ಯೆ- 2,30,175
-ಪುರುಷರು- 1,17,851
-ಮಹಿಳೆಯರು- 1,12,324

2014ರ ಚುನಾವಣೆಯಲ್ಲಿ
ಚಲಾವಣೆಯಾದ ಮತಗಳು- 1,22,231 (ಶೇ. 55.46)
ಬಿಜೆಪಿ ಪಡೆದ ಮತಗಳು- 84,149 (ಶೇ. 68.8)
ಕಾಂಗ್ರೆಸ್‌ ಪಡೆದ ಮತಗಳು- 30,585 (ಶೇ. 25)
ಜೆಡಿಎಸ್‌ ಪಡೆದ ಮತಗಳು- 3,725 (ಶೇ. 3)

2014ರ ಲೋಕಸಭೆ ಚುನಾವಣೆ ವೇಳೆ ಕ್ಷೇತ್ರದ ಚಿತ್ರಣ
-ಶಾಸಕ- ಎಲ್‌.ಎ. ರವಿಸುಬ್ರಹ್ಮಣ್ಯ (ಬಿಜೆಪಿ)
-ಪಾಲಿಕೆಯಲ್ಲಿ ಕಾಂಗ್ರೆಸ್‌ ಸದಸ್ಯರು- 1
-ಬಿಜೆಪಿ ಸದಸ್ಯರು- 4
-ಜೆಡಿಎಸ್‌- 1

ಮಾಹಿತಿ: ವಿಜಯಕುಮಾರ್‌ ಚಂದರಗಿ

ಟಾಪ್ ನ್ಯೂಸ್

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

4-bng

Bengaluru: 290 ರೌಡಿಶೀಟರ್‌ಮನೆಗಳ ಮೇಲೆ ದಾಳಿ 

3-crime

Bengaluru: ಸ್ನೇಹಿತರಿಂದಲೇ ಸುಪಾರಿ ಕಿಲ್ಲರ್‌ನ ಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.