ಮೋದಿಯಿಂದ ದೇಶದಲ್ಲಿ ಭಯದ ವಾತಾವರಣ


Team Udayavani, Apr 9, 2019, 3:00 AM IST

modi-bhaya

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ದೇಶದಲ್ಲಿ ಭಯದ ವಾತಾವರಣ ನಿರ್ಮಾಣ ಮಾಡಿದ್ದಾರೆ. ಸರ್ಕಾರದ ಸ್ವಾಯತ್ತ ಸಂಸ್ಥೆಗಳೆಲ್ಲವೂ ಮೋದಿ ಪರ ಕೆಲಸ ಮಾಡುತ್ತಿವೆ ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.

ಬೆಂಗಳೂರು ಉತ್ತರ ಕ್ಷೇತ್ರದ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿಕೂಟ ಅಭ್ಯರ್ಥಿ ಪರ ಸೋಮವಾರ ಪ್ರಚಾರ ನಡೆಸಿದ ಅವರು, ಈ ದೇಶದಲ್ಲಿ ಯಾರಾದರೂ ನೀಚ ರಾಜಕಾರಣ ಮಾಡುತ್ತಿದ್ದರೆ ಅದು ನರೇಂದ್ರ ಮೋದಿ ಮಾತ್ರ ಎಂದು ಆಕ್ರೋಶ ವ್ಯಕ್ತಪಡಿಸಿದರು.

ದೇಶದ ಭದ್ರತೆ ಹಾಗೂ ದೇಶದ ನಾಯಕತ್ವ, ಈ ಎರಡೇ ವಿಚಾರಗಳು ಬಿಜೆಪಿಗೆ ಇರುವ ವಿಷಯಗಳು. ಸೈನಿಕರ ಸಾವನ್ನೂ ಪ್ರಧಾನಿಯವರು ಬಂಡವಾಳ ಮಾಡಿಕೊಂಡಿದ್ದಾರೆ. ಪುಲ್ವಾಮಾ ಪ್ರಕರಣವನ್ನು ರಾಜಕಾರಣಕ್ಕಾಗಿ ಬಳಸಿಕೊಳ್ಳುತ್ತಿದ್ದಾರೆ.

ಚುನಾವಣೆ ಹತ್ತಿರ ಬಂದಾಗ ದೇಶದ ಅಭದ್ರತೆಯನ್ನು ಅಸ್ತ್ರವಾಗಿ ಬಳಸಿಕೊಳ್ಳುತ್ತಿದ್ದಾರೆ. ಇದನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ನನಗೆ ಎರಡು ವರ್ಷದ ಹಿಂದೆಯೇ ಹೇಳಿದ್ದರು. ಅದೇ ರೀತಿ ಮೋದಿ ನಡೆದುಕೊಂಡಿದ್ದಾರೆ ಎಂದು ಪುನರುತ್ಛರಿಸಿದರು.

ಮೋದಿ ಸರ್ಕಾರ ಮತ್ತೆ ದೇಶದಲ್ಲಿ ಬರುವುದಿಲ್ಲ. ಒಂದು ವೇಳೆ ಅವರು ಅಧಿಕಾರಕ್ಕೆ ಬಂದರೆ ನಾಲ್ಕೂವರೆ ಟ್ರಿಲಿಯನ್‌ ಕೋಟಿ ಸಾಲ ಮಾಡಿ ಸರ್ಕಾರ ನಡೆಸಲು ಹೊರಟಿದ್ದಾರೆ. ಮೋದಿಯವರದು ದಿವಾಳಿ ಸರ್ಕಾರ ಎಂದು ದೂರಿದರು.

ಮೋದಿ ಇಲ್ಲೇನು ಕಿಸಿದಿರೋದು?: ಮೋದಿ ಪರ ಘೋಷಣೆ ಹಾಕುತ್ತಾರೆ. ಆದರೆ, ನರೇಂದ್ರ ಮೋದಿ ಇಲ್ಲಿ ಕಿಸಿದಿರೋದು ಏನು ಎಂದು ವಾಗ್ಧಾಳಿ ನಡೆಸಿದರು. ಕರಾವಳಿ ಭಾಗದಲ್ಲಿ 500 ಜನ ನಮ್ಮನ್ನು ನೋಡಿ ಅಣ್ಣಾ, ಅಣ್ಣಾ ಎಂದು ಕರೆಯುತ್ತಾರೆ. ಆದರೆ, ನಾಲ್ಕು ಜನ ಯುವಕರ ಗುಂಪು ಮೋದಿ, ಮೋದಿ ಎಂದು ಕರೆಯುತ್ತದೆ. ಈ ಯುವಕರಿಗೆ ಬುದ್ದಿ ಇದೆಯಾ?. ಇವರಿಗೆ ಮೋದಿ ಕೆಲಸ ಕೊಡಿಸಿದ್ದಾರಾ?. ಸುಮ್ಮನೆ ಮೋದಿ, ಮೋದಿ ಎಂದು ಕಿರುಚುತ್ತಿದ್ದಾರೆ ಎಂದು ಹೇಳಿದರು.

“ಲೋಕಸಭೆ ಚುನಾವಣೆ ನಂತರ ನಾನು ನೆಗೆದು ಬೀಳುತ್ತೇನೆ ಎಂದು ಈಶ್ವರಪ್ಪ ಹೇಳಿದ್ದಾರೆ. ಆದರೆ, ದೈವ ನಂಬಿ ಬಂದ ಕುಟುಂಬ ನಮ್ಮದು. ಅಷ್ಟು ಸುಲಭವಾಗಿ ನಾನು ಸಾಯುವುದಿಲ್ಲ. ನನಗೆ ಆಯಸ್ಸು ಗಟ್ಟಿಯಾಗಿದೆ ಎಂದು ನಂಬಿದ್ದೇನೆ’ ಎಂದು ತಿಳಿಸಿದರು.

ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ಮಾತನಾಡಿ, ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಸದಾನಂದಗೌಡರು ಯಾವುದೇ ಅಭಿವೃದ್ಧಿ ಕೆಲಸ ಮಾಡಿಲ್ಲ. ಅವರನ್ನು ಕ್ಷೇತ್ರದ ಜನರೂ ನೋಡಿಲ್ಲ. ತಮ್ಮ ಕೆಲಸ ನೋಡಿ ಮತ ಕೊಡಿ ಎನ್ನುವ ಬದಲು ಮೋದಿ ಅವರನ್ನು ನೋಡಿ ಮತ ಕೊಡಿ ಎಂದು ಕೇಳುತ್ತಿದ್ದಾರೆ ಎಂದು ಲೇವಡಿ ಮಾಡಿದರು.

ದೇವೇಗೌಡರನ್ನು ಸಂಸತ್‌ಗೆ ಕೈ ಹಿಡಿದು ಕರೆದುಕೊಂಡು ಹೋಗಬೇಕು ಎಂದು ಬಿಜೆಪಿಯವರು ಹೇಳುತ್ತಾರೆ. ಆದರೆ, ದೇವೇಗೌಡರಿಗೆ ಇರುವ ಬ್ರೈನ್‌ 24 ವರ್ಷದ ಹುಡುಗನಿಗೂ ಇಲ್ಲ. ಅವರಿಗೆ ವಯಸ್ಸಾಗಿರಬಹುದು, ಆದರೆ, ಅವರ ಜ್ಞಾಪಕ ಶಕ್ತಿ, ಚಿಂತನೆ ಯಾವುದಕ್ಕೂ ಕಡಿಮೆ ಇಲ್ಲ. ಅವರು ಸಮಯ, ದಿನಾಂಕ, ದಿನ ಸೇರಿದಂತೆ ಪ್ರತಿದಿನದ ವಿಷಯಗಳನ್ನು ಕರೆಕ್ಟಾಗಿ ಹೇಳ್ತಾರೆ. ದೇವೇಗೌಡರ ಮೇಲೆ ಇಲ್ಲಿವರೆಗೆ ಒಂದು ಕಪ್ಪು ಚುಕ್ಕೆಯೂ ಇಲ್ಲ.
-ಎಚ್‌.ಡಿ.ಕುಮಾರಸ್ವಾಮಿ, ಸಿಎಂ

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.