ಬಿಜೂರು: ನೀರಿನ ಸಮಸ್ಯೆಗೆ ಸ್ಪಂದಿಸದ ಜಿಲ್ಲಾಡಳಿತಕ್ಕೆ ನೀರಸ ಮತದಾನದ ಉತ್ತರ


Team Udayavani, Apr 24, 2019, 6:11 AM IST

beejur

ಬೈಂದೂರು: ಶಿವಮೊಗ್ಗ ಲೋಕಸಭಾ ವ್ಯಾಪ್ತಿಗೆ ಒಳಪಡುವ ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಬೆಳಗ್ಗೆಯಿಂದ ಯಶಸ್ವಿ ಮತದಾನ ನಡೆದಿದೆ. ಆದರೆ ಬಿಜೂರಿನಲ್ಲಿ ಮಾತ್ರ ಮತದಾರರು ಜಿಲ್ಲಾಡಳಿತದ ಮೇಲಿನ ಮುನಿಸನ್ನು ಚುನಾವಣೆಗೆ ನೀರಸ ಸ್ಪಂದ‌ನದ ಮೂಲಕ ತೋರ್ಪಡಿಸಿದ್ದಾರೆ.

ಬೇಸಗೆ ಆರಂಭದಲ್ಲಿ ಕುಡಿಯುವ ನೀರಿನ ಬೇಡಿಕೆ ಇಟ್ಟಿರುವ ಬಿಜೂರಿನ ಚಮ್ಮಾಣಹಿತ್ಲು, ಗರಡಿ ಮುಂತಾದ ಭಾಗದ ಜನರು ಮತದಾನ ಬಹಿಷ್ಕರಿಸುವ ಫಲಕ ಅಳವಡಿಸಿದ್ದರು. ಈ ಸಂದರ್ಭ ತಹಶೀಲ್ದಾರ್‌ ಈ ಭಾಗಕ್ಕೆ ಭೇಟಿ ನೀಡಿ ಫಲಕ ತೆರವುಗೊಳಿಸಿ ಮತದಾನ ಮಾಡುವಂತೆ ತಿಳಿಸಿದ್ದರು.ಇದಕ್ಕೆ ಸ್ಪಂದಿಸದ ಜನರು ಹನ್ನೊಂದು ಗಂಟೆಯ ಹೊತ್ತಿಗೆ ಮೊದಲ ಮತ ಚಲಾವಣೆಯಾಗಿದೆ. 1 ಗಂಟೆ ಸುಮಾರಿಗೆ ಕೇವಲ ನಾಲ್ಕು ಮತದಾರರು ಮಾತ್ರ ಮತ ಚಲಾಯಿಸಿದ್ದಾರೆ. 100ರಿಂದ 150 ಮತದಾರರಿರುವ ಈ ಭಾಗದಲ್ಲಿ 300ಕ್ಕೂ ಅಧಿಕ ಜನಸಂಖ್ಯೆಯಿದೆ. ಬೇಸಗೆಯಲ್ಲಿ ವ್ಯಾಪಕ ನೀರಿನ ಸಮಸ್ಯೆ ಈ ಭಾಗದಲ್ಲಿ ಕುಡಿಯುವ ನೀರಿಗಾಗಿ ಪರಿತಪಿಸಬೇಕಾದ ಪರಿಸ್ಥಿತಿಯಿದೆ.

ಚುನಾವಣೆ ದಿನ ಭಾಗದ ಮತದಾರರು ನಮಗೆ ಕುಡಿಯಲು ನೀರಿಲ್ಲ.ಈ ಬಗ್ಗೆ ಜಿಲ್ಲಾಧಿಕಾರಿಗಳನ್ನು ಬೇಟಿ ಮಾಡಿದಾಗ ನಮಗೆ ಸೂಕ್ತ ಸ್ಪಂದನೆ ದೊರೆತಿಲ್ಲ. ಶಾಸಕರು ಕೂಡ ಕೊಲ್ಲೂರು ಮೂಕಾಂಬಿಕಾ ದೇವಿಯ ಆಣೆ ಮಾಡಿ ಭಾವಿ ತೋಡಿಸುವ ಭರವಸೆ ನೀಡಿದ್ದರು.ಆದರೆ ಯಾರೂ ಕೂಡ ಸ್ಪಂದಿಸಿಲ್ಲ. ಹೀಗಾಗಿ ನಾವು ಮತ ಚಲಾಯಿಸುವುದಿಲ್ಲ ಎಂದು ಇಲ್ಲಿನ ಪ್ರಜ್ಞಾವಂತ ಯುವಕರು ಹೇಳುತ್ತಿರುವುದು ಸಮಸ್ಯೆಯ ಗಂಭೀರತೆಯನ್ನು ಬಿಂಬಿಸುತ್ತದೆ.ಮತದಾನ ಕೇಂದ್ರ ಮಾತ್ರ ಬಿಕೋ ಎನ್ನುತ್ತಿದೆ.

ಜಿಲ್ಲಾಧಿಕಾರಿಗಳು ಬಂದರೆ ಮಾತ್ರ ಮತ
ಈ ಭಾಗದ ಯುವಕರು ಹಾಗೂ ಮಹಿಳೆಯರು ಹೇಳುವ ಪ್ರಕಾರ ನಮಗೆ ಸರಕಾರ ಬಾವಿ ನೀಡಿದರು ಸಹ ಸ್ಥಳೀಯ ರಾಜಕೀಯದಿಂದಾಗಿ ಕೈ ತಪ್ಪಿ ಹೋಗಿದೆ.ಜಿಲ್ಲಾಡಳಿತ ನಮಗೆ ಸಮರ್ಪಕವಾಗಿ ಸ್ಪಂಧಿಸಿಲ್ಲ.ಮತದಾನ ತಪ್ಪಿಸಬಾರದು ಎನ್ನುವ ತಿಳುವಳಿಕೆ ನಮಗೂ ಇದೆ. ಆದರೆ ಜನರ ಸಮಸ್ಯೆಗಳಿಗೆ ಸ್ಪಂಧಿಸಬೇಕಾದ ಇಲಾಖೆ ನಮ್ಮನ್ನು ನಿರ್ಲಕ್ಷಿಸಬಾರದು.

ಜಿಲ್ಲಾಧಿಕಾರಿಗಳು ಬೈಂದೂರಿ ನಲ್ಲಿದ್ದರು ಕೂಡ ನಮ್ಮ ಬಗ್ಗೆ ಗಮನಹರಿಸಿಲ್ಲ.ಯಾರಿಂದಲೂ ನಮಗೆ ಸ್ಪಂಧನೆ ಸಿಕ್ಕಿಲ್ಲ ಹೀಗಾಗಿ ಕನಿಷ್ಟ ಪಕ್ಷ ಜಿಲ್ಲಾಧಿಕಾರಿಗಳಾದರು ನಮ್ಮ ಭಾಗಕ್ಕೆ ಬೇಟಿ ನೀಡಿ ಜನರ ಮನವೊಲಿಸಲಿ ಎನ್ನುವುದು ಇವರ ಅಭಿಪ್ರಾಯವಾಗಿದೆ. ಬೆಳಿಗ್ಗೆಯಿಂದಲೂ ವಿವಿಧ ಪಕ್ಷದ ಮುಖಂಡರು ಇಲ್ಲಿನ ಜನರ ಮನ ಒಲಿಸುವ ಪ್ರಯತ್ನ ಮಾಡುತ್ತಿದ್ದಾರೆ.

ಎಡಿಸಿ ಮೊಕ್ಕಾಂ
ಅಪರ ಡಿಸಿ ವಿದ್ಯಾಕುಮಾರಿ ಅವರು ಮೊಕ್ಕಾಂ ಹೂಡಿ, ಬೈಂದೂರು ಕ್ಷೇತ್ರದ ಮತದಾನ ಪ್ರಕ್ರಿಯೆ ಮೇಲೆ ನಿಗಾ ಇಟ್ಟಿದ್ದರು.

ಟಾಪ್ ನ್ಯೂಸ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್‌ನಿಂದ ಸುಳ್ಳಿನ ರಾಜಕಾರಣ: BYR

LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್‌ನಿಂದ ಸುಳ್ಳಿನ ರಾಜಕಾರಣ: BYR

13 ರಾಜ್ಯಗಳಿಗೆ ಬೇಕಾಗಿದ್ದ ಕಳ್ಳ ಕೋಟದಲ್ಲಿ ಪೊಲೀಸರ ಬಲೆಗೆ!

Theft; 13 ರಾಜ್ಯಗಳಿಗೆ ಬೇಕಾಗಿದ್ದ ಕಳ್ಳ ಕೋಟದಲ್ಲಿ ಪೊಲೀಸರ ಬಲೆಗೆ!

Kota; 1 ಕೋಟಿ ರೂ. ಮೌಲ್ಯದ 1.2 ಕೆಜಿ ಚಿನ್ನ ವಶ: ಚಿತ್ರ ನಿರ್ಮಾಪಕನ ಮನೆಯಿಂದ ಕದ್ದಾತ ಸೆರೆ

Kota; 1 ಕೋಟಿ ರೂ. ಮೌಲ್ಯದ 1.2 ಕೆಜಿ ಚಿನ್ನ ವಶ: ಚಿತ್ರ ನಿರ್ಮಾಪಕನ ಮನೆಯಿಂದ ಕದ್ದಾತ ಸೆರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12-uv-fusion

UV Fusion: ಮಕ್ಕಳ ಆಸಕ್ತಿ ಹುಡುಕುವ ಕೆಲಸವಾಗಲಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

11-mallige

Bappanadu Durgaparameshwari: ಮಲ್ಲಿಗೆ ಪ್ರಿಯೆ ದೇವಿಗೆ ಲಕ್ಷ ಮಲ್ಲಿಗೆ ಶಯನೋತ್ಸವ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.