ಕೈ ಕೋಟೆಯಾದರೂ ಕಮಲಕ್ಕೆ ಒಲವು


Team Udayavani, Mar 17, 2019, 6:39 AM IST

kai-kote.jpg

ಕ್ಷೇತ್ರದ ವಸ್ತುಸ್ಥಿತಿ: ಕಳೆದ ಎರಡು ಅವಧಿಯಲ್ಲೂ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಶಾಸಕರಿದ್ದರೂ, 2014ರ ಲೋಕಸಭಾ ಚುನಾವಣೆಯಲ್ಲಿ ಕ್ಷೇತ್ರದ ಜನರು ಬಿಜೆಪಿ ಅಭ್ಯರ್ಥಿಗೆ ಹೆಚ್ಚಿನ ಮತ ನೀಡಿದ್ದರು. ಕಳೆದ ಚುನಾವಣೆಯಲ್ಲಿ ಕ್ಷೇತ್ರದಲ್ಲಿ ಒಟ್ಟು 2,14,275 ಮತಗಳು ಚಲಾವಣೆಯಾಗಿದ್ದು, ಬಿಜೆಪಿಯ ಪಿ.ಮುನಿರಾಜು ಗೌಡ 1,05,395 ಮತ ಪಡೆದಿದ್ದರು. ಹಾಲಿ ಸಂಸದ ಡಿ.ಕೆ.ಸುರೇಶ್‌ 73,626 ಮತ ಗಳಿಸಿದ್ದರು. ಜೆಡಿಎಸ್‌ನ ಪ್ರಭಾಕರ್‌ ರೆಡ್ಡಿ ಪರ 27,656 ಮತ ಚಲಾವಣೆಯಾಗಿದ್ದವು.

ಹಿಂದಿನ ಚುನಾವಣೆಗಳ ಅಂಕಿ-ಅಂಶ ಗಮನಿಸಿದರೆ ಕಾಂಗ್ರೆಸ್‌-ಬಿಜೆಪಿ ನಡುವೆ ನೇರ ಪೈಪೋಟಿಯಿದೆ. ಆದರೆ, ಜೆಡಿಎಸ್‌ ಬೆಂಬಲ ಕಾಂಗ್ರೆಸ್‌ಗೆ ದೊರೆಯುವುದರಿಂದ ಕಾಂಗ್ರೆಸ್‌ ಹಿಡಿತ ಹೆಚ್ಚಾಗಿದೆ. ಜತೆಗೆ ಕ್ಷೇತ್ರದ 9 ವಾರ್ಡ್‌ಗಳ ಪೈಕಿ 5ರಲ್ಲಿ ಕಾಂಗ್ರೆಸ್‌ ಹಾಗೂ 3ರಲ್ಲಿ ಬಿಜೆಪಿ ಸದಸ್ಯರಿದ್ದು, ಉಳಿದೊಂದು ವಾರ್ಡ್‌ನ ಜೆಡಿಎಸ್‌ ಸದಸ್ಯೆ, ಬಿಜೆಪಿ ಬೆಂಬಲಿಸುತ್ತಿದ್ದಾರೆ.

ಬಿಜೆಪಿ ಕಳೆದ ಎರಡು ಚುನಾವಣೆಗಳಲ್ಲಿ ಹೆಚ್ಚು ಮತ ಪಡೆದಿರುವುದರಿಂದ ಈ ಬಾರಿಯೂ ಅದೇ ನಿರೀಕ್ಷೆಯಲ್ಲಿದೆ. ಆದರೆ, ಸಂಸದರು ಐದು ವರ್ಷಗಳಲ್ಲಿ ಹೆಚ್ಚು ಅನುದಾನ ತಂದು ಮೂಲ ಸೌಕರ್ಯ ಕಲ್ಪಿಸಿರುವುದರಿಂದ ಪಕ್ಷಕ್ಕೆ ಅನುಕೂಲವಾಗಲಿದೆ ಎಂಬುದು ಕಾಂಗ್ರೆಸ್‌ ಭರವಸೆ. ಆದರೆ, ಕಾಂಗ್ರೆಸ್‌ ಪಾಲಿಕೆ ಸದಸ್ಯೆ ಸೇರಿದಂತೆ ಬಿಜೆಪಿ ಹಾಗೂ ಜೆಡಿಎಸ್‌ ಮಹಿಳಾ ಸದಸ್ಯರು, ಶಾಸಕರು ಕಿರುಕುಳ ನೀಡುತ್ತಿದ್ದಾರೆ ಎಂದು ಹಲವು ಬಾರಿ ಆರೋಪಿಸಿದ್ದಾರೆ. ಇದೇ ವಿಚಾರವನ್ನು ಬಿಜೆಪಿ ರಾಜಕೀಯವಾಗಿ ಬಳಸಿಕೊಂಡು ಮಹಿಳಾ ಮತದಾರರನ್ನು ಸೆಳೆಯುವ ಪ್ರಯತ್ನಕ್ಕೆ ಕೈಹಾಕಿದರೂ ಅಚ್ಚರಿಯಿಲ್ಲ.

ಸಂಸದರ ಪ್ರಮುಖ ಕೊಡುಗೆಗಳು
-20ಕ್ಕೂ ಹೆಚ್ಚು ಶುದ್ಧ ಕುಡಿಯುವ ನೀರಿನ ಘಟಕ
-ಸರ್ಕಾರಿ ಶಾಲೆ, ಕಾಲೇಜುಗಳಲ್ಲಿ ಸ್ಮಾರ್ಟ್‌ ಕ್ಲಾಸ್‌ರೂಂ ನಿರ್ಮಾಣಕ್ಕೆ ಅನುದಾನ
-ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರ ರಚನೆಯಲ್ಲಿ ಪ್ರಮುಖ ಪಾತ್ರ

ನಿರೀಕ್ಷೆಗಳು
-ವೃಷಭಾವತಿ ನೀರುಗಾಲುವೆ ಪುನಶ್ಚೇತನ
-ಮೈಸೂರು ರಸ್ತೆ ಹಾಗೂ ಹೊರ ವರ್ತುಲ ರಸ್ತೆಗಳ ಅಭಿವೃದ್ಧಿ
-ಕ್ಷೇತ್ರದಲ್ಲಿನ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ

-ವಾರ್ಡ್‌ಗಳು- 9
-ಬಿಜೆಪಿ- 5
-ಕಾಂಗ್ರೆಸ್‌- 3
-ಜೆಡಿಎಸ್‌- 1

-ಜನಸಂಖ್ಯೆ- 6,54,545
-ಮತದಾರರ ಸಂಖ್ಯೆ- 4,45,839
-ಪುರುಷರು- 3,38,686
-ಮಹಿಳೆಯರು- 3,15,859

2014ರ ಚುನಾವಣೆಯಲ್ಲಿ
-ಚಲಾವಣೆಯಾದ ಮತಗಳು- 2,14,275 (ಶೇ.56.13)
-ಬಿಜೆಪಿ ಪಡೆದ ಮತಗಳು- 1,05,395    (ಶೇ. 49.2)
-ಕಾಂಗ್ರೆಸ್‌ ಪಡೆದ ಮತಗಳು- 73,626 (ಶೇ. 34.4)
-ಜೆಡಿಎಸ್‌ ಪಡೆದ ಮತಗಳು- 27,656 (ಶೇ. 12.9)

2014ರ ಲೋಕಸಭೆ ಚುನಾವಣೆ ವೇಳೆ ಕ್ಷೇತ್ರದ ಚಿತ್ರಣ
-ಕಾಂಗ್ರೆಸ್‌ ಶಾಸಕ
-ಪಾಲಿಕೆಯಲ್ಲಿ ಕಾಂಗ್ರೆಸ್‌ ಸದಸ್ಯರು- 5
-ಬಿಜೆಪಿ ಸದಸ್ಯರು- 4
-ಜೆಡಿಎಸ್‌- 0

ಮಾಹಿತಿ: ವೆಂ.ಸುನೀಲ್‌ಕುಮಾರ್‌

ಟಾಪ್ ನ್ಯೂಸ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

lead

ವಾರಾಣಸಿಯತ್ತ ದೇಶದ ಗಮನ, ಮತ್ತೆ ಮೋದಿಗೇ ಕಾಶಿವಾಸಿಗಳ ನಮನ?

Ravi-Shankar-Prasad,-Shatrughan-Sinha

ಪಾಟ್ನಾಗೆ ಯಾರು ಸಾಹೇಬ್‌?

kankana-1

ಸಿಂಧಿಯಾಗೆ ಜೈ ಅನ್ನುತ್ತಾ ಗುಣಾ?

38

ಸ್ಲಂ, ಅನಧಿಕೃತ ಕಾಲನಿಗಳಲ್ಲೇ ಕದನ

28

ವಾಯವ್ಯ ದೆಹಲಿಯಲ್ಲಿ ಯಾರ ಪರ ಒಲವು?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12-uv-fusion

UV Fusion: ಮಕ್ಕಳ ಆಸಕ್ತಿ ಹುಡುಕುವ ಕೆಲಸವಾಗಲಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

11-mallige

Bappanadu Durgaparameshwari: ಮಲ್ಲಿಗೆ ಪ್ರಿಯೆ ದೇವಿಗೆ ಲಕ್ಷ ಮಲ್ಲಿಗೆ ಶಯನೋತ್ಸವ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.