ಬಿಜೆಪಿ 22 ಸ್ಥಾನ ಗೆದ್ದರೆ ರಾಜ್ಯ ಸರ್ಕಾರ ಪತನ: ವಿಜಯೇಂದ್ರ
Team Udayavani, Apr 15, 2019, 3:00 AM IST
ಹೊಳಲ್ಕೆರೆ: ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ 22 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದರೆ ಚುನಾವಣಾ ಫಲಿತಾಂಶ ಪ್ರಕಟಗೊಂಡ 24 ಗಂಟೆಗಳಲ್ಲಿ ಸಮ್ಮಿಶ್ರ ಸರ್ಕಾರ ಪತನವಾಗಲಿದೆ. ಅಲ್ಲದೆ, ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ಬಿಜೆಪಿ ರಾಜ್ಯ ಯುವ ಘಟಕದ ಪ್ರಧಾನ ಕಾರ್ಯದರ್ಶಿ ಬಿ.ವೈ. ವಿಜಯೇಂದ್ರ ತಿಳಿಸಿದರು.
ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹೆಚ್ಚು ಸ್ಥಾನಗಳಲ್ಲಿ ಗೆಲುವು ಸಾಧಿಸುವಂತೆ ನಾವೆಲ್ಲರೂ ಶ್ರಮಿಸಬೇಕಾಗಿದೆ. ಆಗ ರಾಜ್ಯದಲ್ಲಿರುವ ಸಮ್ಮಿಶ್ರ ಸರ್ಕಾರ ತಾನಾಗಿಯೇ ಬಿದ್ದು ಹೋಗುತ್ತದೆ. ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ಶಾಸಕರೇ ಕಿತ್ತಾಡಿಕೊಂಡು ಸರ್ಕಾರದ ಪತನಕ್ಕೆ ಕಾರಣರಾಗುತ್ತಾರೆ. ಆಗ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ ಎಂದರು.
ಮುಖ್ಯಮಂತ್ರಿ ಕುಮಾರಸ್ವಾಮಿಯವರು ಅಧಿ ಕಾರ ಹಾಗೂ ಹಣ ಬಲದಿಂದ ಮಂಡ್ಯದಲ್ಲಿ ಗೆಲ್ಲಲು ಸಾಧ್ಯವಿಲ್ಲ. ಮಂಡ್ಯದ ಸ್ವಾಭಿಮಾನಿ ಜನರು ಸುಮಲತಾ ಅವರನ್ನೇ ಗೆಲ್ಲಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ ವಿಜಯೇಂದ್ರ, ಗುತ್ತಿಗೆದಾರರಿಂದ ಆಕ್ರಮವಾಗಿ ಹಣ ವಸೂಲಿ ಮಾಡಿ ಬೂತ್ ಒಂದಕ್ಕೆ 5 ಲಕ್ಷ ರೂ.ನೀಡುವುದಾಗಿ ಆಮಿಷವೊಡ್ಡಿರುವುದು ಗುಟ್ಟಾಗಿ ಉಳಿದಿಲ್ಲ. ಎಷ್ಟೇ ಪ್ರಯತ್ನ ಪಟ್ಟರೂ ನಿಖೀಲ್ ಕುಮಾರಸ್ವಾಮಿ ಸೋಲು ಖಚಿತ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ