ಪೊಲೀಸರಿಗೆ ಅಭಿನಂದನೆ ಸಲ್ಲಿಸಿದ ಡಿಜಿಪಿ
Team Udayavani, Apr 24, 2019, 3:15 AM IST
ಬೆಂಗಳೂರು: ರಾಜ್ಯದಲ್ಲಿ ನಡೆದ ಎರಡು ಹಂತದ ಲೋಕಸಭಾ ಚುನಾವಣೆಯನ್ನು ಶಾಂತಿಯುತವಾಗಿ ಯಶಸ್ವಿಗೊಳಿಸಿದ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಯ ಕಾರ್ಯಕ್ಕೆ ಡಿಜಿಪಿ ನೀಲಮಣಿ ಎನ್ ರಾಜು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಎರಡೂ ಹಂತದ ಚುನಾವಣೆಯನ್ನು ಶಾಂತಿಯುವಾಗಿ ಯಶಸ್ವಿಗೊಳಿಸಲು ಉತ್ತಮ ಸೇವೆ ಸಲ್ಲಿಸಿದ್ದ ಅಧಿಕಾರಿಗಳು, ಸಿಬ್ಬಂದಿಗೆ ವೈಯಕ್ತಿಕ ಹಾಗೂ ಇಲಾಖೆ ಪರವಾಗಿ ಧನ್ಯವಾದ ಎಂದು ತಿಳಿಸಿದ್ದಾರೆ.