- Saturday 07 Dec 2019
ಚುನಾವಣೆ ಆಯೋಗದಲ್ಲಿ ಭಿನ್ನಾಭಿಪ್ರಾಯ ಸಹಜ
Team Udayavani, May 19, 2019, 8:25 AM IST
ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಸಂಬಂಧ ಪ್ರಧಾನಿ ಮೋದಿ ವಿರುದ್ಧ ದಾಖಲಾದ ಪ್ರಕರಣಗಳ ತೀರ್ಮಾನದ ವೇಳೆ ಭಿನ್ನಾಭಿಪ್ರಾಯ ವ್ಯಕ್ತಪಡಿಸಿದ್ದ ಚುನಾವಣಾ ಆಯುಕ್ತರಲ್ಲೊಬ್ಬರಾದ ಅಶೋಕ್ ಲವಾಸಾ ಮುಂದಿನ ಸಭೆಗಳಲ್ಲಿ ಭಾಗವಹಿಸುವುದಿಲ್ಲ ಎಂದು ನಿರ್ಧಾರ ಕೈಗೊಂಡಿರುವ ಬೆನ್ನಲ್ಲೇ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮುಖ್ಯ ಚುನಾವಣಾ ಆಯುಕ್ತ ಸುನೀಲ್ ಅರೋರಾ, ಚುನಾವಣಾ ಆಯೋಗದಲ್ಲಿ ಭಿನ್ನ ಅಭಿಪ್ರಾಯಗಳು ವ್ಯಕ್ತವಾಗುವುದು ಸಹಜ ಎಂದಿದ್ದಾರೆ. ಮೂರು ಆಯುಕ್ತರೂ ಒಂದೇ ರೀತಿ ಅಭಿಪ್ರಾಯ ಹೊಂದಿರಬೇಕು ಎಂದೇನಿಲ್ಲ. ಅವರೇನೂ ಅವಳಿಗಳಲ್ಲ. ಈ ಹಿಂದೆಯೂ ಹಲವು ಬಾರಿ ಭಿನ್ನ ಅಭಿಪ್ರಾಯಗಳು ಮೂಡಿ ಬಂದಿದ್ದವು ಎಂದಿದ್ದಾರೆ.
ಇದು ಚುನಾವಣಾ ಆಯೋಗದ ಆಂತರಿಕ ವಿಷಯ. ಯಾವುದೇ ಊಹಾಪೋಹಗಳಿಗೆ ಅವಕಾಶವಿಲ್ಲ. ಈ ಭಿನ್ನಾಭಿಪ್ರಾಯದ ಬಗ್ಗೆ ಹಾಗೂ ಇತರ ವಿಷಯಗಳ ಕುರಿತು ಚರ್ಚಿಸಲೆಂದೇ ಮೇ 21 ರಂದು ಸಭೆ ಕರೆಯಲಾಗಿದೆ ಎಂದು ಅರೋರಾ ಹೇಳಿದ್ದಾರೆ. ಈಗಾಗಲೇ ಸಿಇಸಿಗೆ ಮೂರು ಬಾರಿ ಲವಾಸಾ ಪತ್ರ ಬರೆದು, ಚುನಾವಣಾ ಆಯೋಗದ ನಿರ್ಧಾರಗಳಲ್ಲಿ ಪ್ರಕಟವಾದ ಭಿನ್ನ ಅಭಿಪ್ರಾಯವನ್ನೂ ದಾಖಲಿಸುವಂತೆ ಕೋರಿದ್ದಾರೆ ಎನ್ನಲಾಗಿದೆ.
ಪ್ರಧಾನಿ ಮೋದಿ ವಿರುದ್ಧ ದಾಖಲಾದ ಆರು ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳಲ್ಲಿ ಆಯೋಗ ಕ್ಲೀನ್ಚಿಟ್ ನೀಡಿತ್ತು. ಈ ಪೈಕಿ ಕೆಲವು ಪ್ರಕರಣಗಳಲ್ಲಿ ಮೋದಿಗೆ ನೋಟಿಸ್ ಕಳುಹಿಸಬೇಕು ಎಂಬ ಅಭಿಪ್ರಾಯವನ್ನು ಲವಾಸಾ ವ್ಯಕ್ತಪಡಿಸಿದ್ದರು. ಆದರೆ ಅರೋರಾ ಹಾಗೂ ಇನ್ನೊಬ್ಬ ಆಯುಕ್ತ ಸುಶೀಲ್ ಚಂದ್ರ ಅಭಿಪ್ರಾಯ ಭಿನ್ನವಾಗಿದ್ದರಿಂದ ಬಹುಮತದಂತೆ ಮೋದಿಗೆ ಕ್ಲೀನ್ಚಿಟ್ ನೀಡಲಾಗಿತ್ತು.
ತನಿಖೆಯಾಗಲಿ: ಕಾಂಗ್ರೆಸ್: ಲವಾಸಾ ಆಕ್ಷೇಪಿಸಿರುವ ವಿಷಯಗಳ ಕುರಿತು ವಿಸ್ತೃತ ತನಿಖೆ ನಡೆಯಲಿ ಎಂದು ಕಾಂಗ್ರೆಸ್ ಆಗ್ರಹಿಸಿದೆ. ಸಾಂಸ್ಥಿಕ ಗೌರವವನ್ನು ಹಾಳು ಮಾಡುವುದು ಮೋದಿ ಸರಕಾರದ ಧ್ಯೇಯವಾಗಿದೆ. ಚುನಾವಣಾ ಆಯೋಗವು ಮೋದಿಯ ಕೈಗೊಂಬೆಯಾಗಿದೆಯೇ ಎಂದು ಕಾಂಗ್ರೆಸ್ ಪ್ರಶ್ನಿಸಿದೆ. ಲವಾಸಾ ವ್ಯಕ್ತಪಡಿಸಿದ ಭಿನ್ನಾಭಿಪ್ರಾಯಗಳನ್ನು ದಾಖಲಿಸುವ ಮೂಲಕ ಚುನಾÊಣಾ ಆಯೋಗವು ತನ್ನ ಗೌರವವನ್ನು ಕಾಪಾಡಿಕೊಳ್ಳ¸ೇಕು ಎಂದು ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೆವಾಲ ಹೇಳಿದ್ದಾರೆ.
ಈ ವಿಭಾಗದಿಂದ ಇನ್ನಷ್ಟು
-
ಪಶ್ಚಿಮ ಬಂಗಾಳದಲ್ಲಿ ಲೋಕಸಭೆ ಚುನಾವಣೆ ವೇಳೆ ನಡೆದ ಹಿಂಸಾಚಾರವನ್ನು ಗಣನೆಗೆ ತೆಗೆದುಕೊಂಡಿರುವ ಸುಪ್ರೀಂ ಕೋರ್ಟ್, ಬಿಜೆಪಿ ಅಭ್ಯರ್ಥಿಯೊಬ್ಬರಿಗೆ ಮೇ 28ರವರೆಗೆ...
-
ಲೋಕಸಭಾ ಚುನಾವಣೆಯ ಮತ ಎಣಿಕೆಗೂ ಮುನ್ನವೇ ಅನುಮಾನಾಸ್ಪದವಾಗಿ ಇವಿಎಂಗಳನ್ನು ಸಾಗಾಟ ಮಾಡುತ್ತಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ಬೆನ್ನಲ್ಲೇ...
-
ಈ ಬಾರಿ ಚುನಾವಣೆಯಲ್ಲಿ ದಿ.ರಾಜೀವ್ ಭ್ರಷ್ಟಾಚಾರದಿಂದ ಹಿಡಿದು ರಾಡಾರ್ನವರೆಗೆ, ಗೋಡ್ಸೆಯಿಂದ ಹಿಡಿದು ಮಹಾತ್ಮಾ ಗಾಂಧೀಜಿಯವರೆಗೆ, ಇವಿಎಂನಿಂದ ಹಿಡಿದು ಮಮತಾ...
-
ಕೊನೆಯ ಹಂತದ ಮತದಾನ ಮುಕ್ತಾಯವಾಗುತ್ತಿದ್ದಂತೆಯೇ ವಿವಿಧ ಸುದ್ದಿವಾಹಿನಿಗಳು ನಡೆಸಿದ ಚುನಾವಣೋತ್ತರ ಸಮೀಕ್ಷೆ ಪ್ರಕಟವಾಗಿವೆ. 13 ಸಮೀಕ್ಷೆಗಳ ಪೈಕಿ ಆರರಲ್ಲಿ...
-
ಲೋಕಸಭೆ ಚುನಾವಣೆಯ ಜೊತೆಗೆ ಈ ಬಾರಿ ನಾಲ್ಕು ರಾಜ್ಯಗಳ ವಿಧಾನಸಭೆ ಚುನಾವಣೆಯೂ ನಡೆದಿದೆ. ಆಂಧ್ರಪ್ರದೇಶ, ಅರುಣಾಚಲ ಪ್ರದೇಶ, ಒಡಿಶಾ ಮತ್ತು ಸಿಕ್ಕಿಂನಲ್ಲಿ ವಿಧಾನಸಭೆ...
ಹೊಸ ಸೇರ್ಪಡೆ
-
ಲಕ್ನೋ: ಸಫ್ಜರ್ ಜಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಉನ್ನಾವ್ ಅತ್ಯಾಚಾರ ಸಂತ್ರಸ್ತೆ ಶುಕ್ರವಾರ ತಡರಾತ್ರಿ (11.40) ಸಾವನ್ನಪ್ಪಿದ್ದು, ಈ ಹಿನ್ನೆಲೆಯಲ್ಲಿ...
-
ಶಿವಮೊಗ್ಗ:ತೀರ್ಥಹಳ್ಳಿಯ ಬಳಿಯ ತುಂಗಾನದಿ ಸೇತುವೆ ಬಳಿ ಫುಡ್ ಇನ್ಸ್ ಪೆಕ್ಟರ್ ಒಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ನಡೆದಿದೆ. ಹೊಸನಗರದ ಫುಡ್ ಇನ್ಸ್...
-
ಶಿವಮೊಗ್ಗ: ನೂತನವಾಗಿ ರೂಪಿಸಲಾಗಿರುವ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯಾದಲ್ಲಿ, ಈಗಿನ ಏಕಶಿಸ್ತೀಯ ಉನ್ನತ ಶಿಕ್ಷಣ ತೆರೆಮರಿಗೆ ಸರಿದು, ಬಹುಶಿಸ್ತೀಯ ಶಿಕ್ಷಣ...
-
ವೆಂಕೋಬಿ ಸಂಗನಕಲ್ಲು ಬಳ್ಳಾರಿ: ವಿಜಯನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಮತಸಮರ ಗುರುವಾರ ಮುಗಿದಿದ್ದು, ಕ್ಷೇತ್ರದ ಜನರ ಚಿತ್ತ ಡಿ.9 ರ ಮತ ಎಣಿಕೆಯತ್ತ ನೆಟ್ಟಿದೆ. ಚುನಾವಣೆಯಲ್ಲಿ...
-
ಶ್ರೀರಂಗಪಟ್ಟಣ: ಕೂಡಲಕುಪ್ಪೆ ಹಾಗೂ ಕಿರಂಗೂರು ಗ್ರಾಮದ ಎಲ್ಲೆಗೆ ಸೇರಿದ ಎರೆಮಣೆ ನಾಲೆಯ ಏರಿ ಮೇಲಿರುವ ರಸ್ತೆ ಒತ್ತುವರಿ ಮಾಡಿಕೊಂಡಿದ್ದು, ಇದರಿಂದ ಸುತ್ತಮುತ್ತಲ...