ಭಾವನಾತ್ಮಕ ವಿಚಾರಗಳೇ ಬಿಜೆಪಿ ಪ್ರಣಾಳಿಕೆ
Team Udayavani, Apr 10, 2019, 3:00 AM IST
ಕಲಬುರಗಿ: ಭಾವನಾತ್ಮಕ ವಿಚಾರಗಳನ್ನು ಮುಂದಿಟ್ಟುಕೊಂಡು ಬಿಜೆಪಿ ಜನರನ್ನು ಕೆರಳಿಸುತ್ತಿದೆ ಎನ್ನುವುದಕ್ಕೆ ಬಿಡುಗಡೆಗೊಳಿಸಿರುವ ಪ್ರಣಾಳಿಕೆಯೇ ಸಾಕ್ಷಿಯಾಗಿವೆ ಎಂದು ಕಾಂಗ್ರೆಸ್ ಸಂಸದೀಯ ನಾಯಕ ಡಾ| ಮಲ್ಲಿಕಾರ್ಜುನ ಖರ್ಗೆ ಟೀಕಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಮ ಮಂದಿರ ನಿರ್ಮಾಣ, ಶಬರಿಮಲೆ ಮಹಿಳೆಯರ ಪ್ರವೇಶ ವಿಚಾರ, ಕಾಶ್ಮೀರದ 370(ಜೆ) ವಿಧಿ ರದ್ದು ಸೇರಿದಂತೆ ಅನೇಕ ಭಾವನಾತ್ಮಕ ವಿಚಾರಗಳು ಬಿಜೆಪಿ ಪ್ರಣಾಳಿಕೆಯಲ್ಲಿ ಸೇರಿವೆ.
ಭಾವನಾತ್ಮಕವಾಗಿ ಜನರನ್ನು ಕೆರಳಿಸಿ ಮತ ಪಡೆಯಲು ಸಾಧ್ಯವಿಲ್ಲ. ರಾಮ ಮಂದಿರ ನಿರ್ಮಾಣ ಬಿಜೆಪಿಯ ಕಾಯಂ ಇಶ್ಯೂ. ರಾಮಮಂದಿರಕ್ಕಾಗಿ ರಥಯಾತ್ರೆ ಮಾಡಿದ ಎಲ್.ಕೆ. ಅಡ್ವಾಣಿ ಅವರನ್ನೇ ಮೂಲೆಗುಂಪು ಮಾಡಿದ್ದಾರೆ. ಇನ್ನು ಮುಂದೆಯೂ ಇದೇ ರೀತಿ ಮಾಡಿಕೊಂದು ಹೋದರೆ ಮೋದಿ ಕೂಡ ಮೂಲೆಗುಂಪಾಗುತ್ತಾರೆ ಎಂದರು.
ಕಾಂಗ್ರೆಸ್ ಪಕ್ಷದ ನ್ಯಾಯ ಯೋಜನೆಗೆ ಪ್ರತಿ ಯೋಜನೆ ಕೊಡಲಾಗದೇ ಬಿಜೆಪಿ ತತ್ತರಿಸಿದೆ. ಬಿಜೆಪಿಯವರು ರೈತರಿಗೆ ವರ್ಷಕ್ಕೆ ಆರು ಸಾವಿರ ರೂ. ಕೊಡುವುದಾಗಿ ಹೇಳಿದ್ದರೆ, ಕಾಂಗ್ರೆಸ್ ಬಡವರಿಗೆ ತಿಂಗಳಿಗೆ ಆರು ಸಾವಿರ ರೂ. ಕೊಡುವುದಾಗಿ ಹೇಳಿದೆ. ಪ್ರಧಾನಿ ಮೋದಿ ಐಟಿ, ಇಡಿ, ಸಿಬಿಐ ಸೇರಿ ಸ್ವಾಯತ್ತ ಸಂಸ್ಥೆಗಳನ್ನು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ.
ಇದಕ್ಕೆ ಕಾಂಗ್ರೆಸ್ ಸೇರಿ ಪ್ರತಿಪಕ್ಷಗಳ ನಾಯಕರ ಮನೆಗಳು ಮಾತ್ರ ಕಾಣುತ್ತಿರುವಂತೆ ದಾಳಿ ನಡೆದಿರುವುದು ಸಾಕ್ಷಿಯಾಗಿದೆ. ಬಿಜೆಪಿಯಲ್ಲಿಯೂ ದೊಡ್ಡ ದೊಡ್ಡ ಉದ್ಯಮಿಗಳು, ಹಣವಂತರು ಇದ್ದರೂ ಯಾಕೆ ಐಟಿ ದಾಳಿ ನಡೆಯುತ್ತಿಲ್ಲ? ಸ್ವಾಯತ್ತ ಸಂಸ್ಥೆಗಳನ್ನು ದುರುಪಯೋಗ ಮಾಡಿಕೊಳ್ಳುವ ಮೂಲಕ ಬಿಜೆಪಿ ಕೆಟ್ಟ ಸಂಸ್ಕೃತಿಗೆ ನಾಂದಿ ಹಾಡಿದೆ ಎಂದು ಟೀಕಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ