ಸರ್ಕಾರ ನೆಗೆದು ಬೀಳಲಿ ಎಂದಿದ್ದೆ
Team Udayavani, Apr 3, 2019, 6:00 AM IST
ವಿಜಯಪುರ: “ಲೋಕಸಭೆ ಚುನಾವಣೆ ಬಳಿಕ ಸಿಎಂ ನೆಗೆದು ಬೀಳಲಿದ್ದಾರೆ’ ಎಂದು ಕೊಪ್ಪಳದಲ್ಲಿ ನೀಡಿದ್ದ ಹೇಳಿಕೆ ವಿವಾದವಾಗುತ್ತಿದ್ದಂತೆ ಎಚ್ಚೆತ್ತುಕೊಂಡಿರುವ ಮಾಜಿ ಡಿಸಿಎಂ
ಕೆ.ಎಸ್. ಈಶ್ವರಪ್ಪ, “ನನ್ನ ಹೇಳಿಕೆ ತಿರುಚಲಾಗಿದೆ. ಸಿಎಂ ನೆಗೆದು
ಬೀಳುತ್ತಾರೆ ಎಂದು ನಾನು ಹೇಳಿಲ್ಲ. ಸರ್ಕಾರ ನೆಗೆದು ಬೀಳಲಿದೆ ಎಂದು
ಹೇಳಿದ್ದೆ’ ಎಂದು ಸ್ಪಷ್ಟಪಡಿಸಿದ್ದಾರೆ.
ಮಂಗಳವಾರ ಸುದ್ದಿಗಾರರ ಜತೆ ಮಾತನಾಡಿ, ಲೋಕಸಭೆ ಚುನಾವಣೆ ಬಳಿಕ ರಾಜ್ಯ ಸಮ್ಮಿಶ್ರ ಸರ್ಕಾರ ಇರುವುದಿಲ್ಲ ಎಂಬ ಅರ್ಥದಲ್ಲಿ ಹೇಳಿಕೆ ನೀಡಿದ್ದೇನೆ. ಸಿಎಂ ಎಂದರೆ ಸರ್ಕಾರವೇ ಹೊರತು ಇಲ್ಲಿ ವ್ಯಕ್ತಿಗತವಾಗಿ ತೆಗೆದುಕೊಳ್ಳಬಾರದು. ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಈ ಚುನಾವಣೆಯಲ್ಲಿ
ಎರಡಂಕಿ ದಾಟುವುದಿಲ್ಲ. ಮೇಲ್ನೋಟಕ್ಕೆ ಎರಡೂ ಪಕ್ಷಗಳು ಚುನಾವಣಾ ಪೂರ್ವ ಸ್ಥಾನ ಹೊಂದಾಣಿಕೆ ಮಾಡಿಕೊಂಡಿದ್ದರೂ ಆಂತರಿಕ ಜಗಳ ಬೀದಿಗೆ ಬಿದ್ದಿದೆ. ಬಹುತೇಕ ಕಡೆಗಳಲ್ಲಿ ಅಭ್ಯರ್ಥಿಗಳೇ
ಇಲ್ಲದೇ ಪರದಾಡಿವೆ. ಮೈಸೂರಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಜೆಡಿಎಸ್
ಬೆಂಬಲಿಸುತ್ತಿಲ್ಲ, ಮಂಡ್ಯದಲ್ಲಿ ಜೆಡಿಎಸ್ ಅಭ್ಯರ್ಥಿಯನ್ನು ಕಾಂಗ್ರೆಸ್
ಬೆಂಬಲಿಸುತ್ತಿಲ್ಲ. ಹಾಸನ, ತುಮಕೂರು ಕಥೆ ಏನಾಗಿದೆ ಎಂಬುದು ಎಲ್ಲರಿಗೂ ಗೊತ್ತಿದೆ. ತಮ್ಮ ಈ ದೌರ್ಬಲ್ಯ ಮುಚ್ಚಿಕೊಳ್ಳಲು ಪರಸ್ಪರ ಕೀಳು
ಮಟ್ಟದ ಟೀಕೆಯಲ್ಲಿ ತೊಡಗಿವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
MUST WATCH
ಹೊಸ ಸೇರ್ಪಡೆ
Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’
Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್ ಹೆಗ್ಡೆ
Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ
Subramanya ಏನೆಕಲ್ಲು: ಕಾರಿಗೆ ಗೂಡ್ಸ್ ಆಟೋ ಢಿಕ್ಕಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ