ಅಮಾಯಕರ ಗೋರಿ ಮೇಲೆ ಅನಂತ ಸಾಮ್ರಾಜ್ಯ


Team Udayavani, Apr 19, 2019, 11:34 AM IST

CM-a

ಕುಮಟಾ: “ಅನಂತಕುಮಾರ ಹೆಗಡೆ ದೇಶಾಭಿಮಾನದ ಹೆಸರಿನಲ್ಲಿ ಅಮಾಯಕ ಯುವಕರನ್ನು ಬಲಿತೆಗೆದುಕೊಂಡು ತಮ್ಮ ರಾಜಕೀಯ ಭವಿಷ್ಯ ಕಟ್ಟಿಕೊಳ್ಳುತ್ತಿದ್ದಾರೆ.

ಇಂತಹ ಕೀಳು ಅಭಿರುಚಿಯ ಸಂಸದರನ್ನು ಬದಲಾಯಿಸುವ ಅಗತ್ಯತೆ ಜಿಲ್ಲೆಯ ಜನತೆಗಿದೆ. ಕೋಮುಗಲಭೆ ಸೃಷ್ಟಿಸುವಂತಹ ಭಾಷಣ ಮಾಡು ವವರಿಗೆ ಮತ ಹಾಕುವ ಬದಲು ಅಭಿವೃದ್ಧಿ ಕೆಲಸ ಮಾಡುವವರಿಗೆ ಮತ ಹಾಕಿ’ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದರು.

ಪಟ್ಟಣದ ಮಣಕಿ ಮೈದಾನದಲ್ಲಿ ನಡೆದ ಕಾಂಗ್ರೆಸ್‌ ಜೆಡಿಎಸ್‌ ಮೈತ್ರಿ ಪಕ್ಷದ ಪ್ರಚಾರ ಸಭೆಯಲ್ಲಿ ಮಾತನಾಡಿದರು.”ನಾನು ಈ ಹಿಂದಿನ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಉತ್ತರಕನ್ನಡ ಅತಿಕ್ರಮ ಣದಾರರ ಸಮಸ್ಯೆ ಬಗೆಹರಿಸುವ ನಿಟ್ಟಿ ನಲ್ಲಿ ಗ್ರಾಮ ವಾಸ್ತವ್ಯ ಕೈಗೊಳ್ಳುವ ಬಗ್ಗೆ ಪ್ರಸ್ತಾಪ ಮಾಡಿದ್ದೆ. ಆದರೆ ಚುನಾವಣೆ ನಂತರ ಮೈತ್ರಿ ಸರ್ಕಾ ರ ಆಡಳಿತಕ್ಕೆ ಬಂತು. ಅದೇ ಸಂದರ್ಭದಲ್ಲಿ ಬಿಜೆಪಿಯವರು ಮುಖ್ಯಮಂತ್ರಿ ಆಸನಕ್ಕಾಗಿ ಅಪಪ್ರಚಾರದಂತಹ ಹಲವು ಸಮಸ್ಯೆ ತಂದೊಡ್ಡಿದರು. ಆದರೆ ರೈತರ ಹಾಗೂ ರಾಜ್ಯದ ಹಲವು ಯುವಕರ ಸಮಸ್ಯೆಗೆ ಸ್ಪಂದಿಸದೇ ಸುಮ್ಮನೆ ಕುಳಿತಿಲ್ಲ. ನನ್ನ ಅಧಿಕಾರಾವಧಿಯಲ್ಲಿ ರಾಜ್ಯಾದ್ಯಂತ 16 ಲಕ್ಷ ರೈತ ಕುಟುಂಬದ ಸಾಲಮ ನ್ನಾ ಮಾಡಿದ್ದೇನೆ.
ಉತ್ತರ ಕನ್ನಡ ಜಿಲ್ಲೆಗೆ ಸಂಬಂಧಿಸಿದಂತೆ 46,000 ಕುಟುಂಬದ ಸಾಲಮನ್ನಾ ಮಾಡ ಲಾಗಿದೆ’ ಎಂದರು.

ಭಟ್ಕಳದ ಡಾಣ ಚಿತ್ತರಂಜನ್‌, ತಿಮ್ಮಪ್ಪ ನಾಯ್ಕರ ಸಾವಿಗೆ ನ್ಯಾಯ ದೊರೆತಿಲ್ಲ. ಆರೋಪಿಗಳ ಪತ್ತೆಯಾಗಿಲ್ಲ. ಪರೇಶ ಮೇಸ್ತಾ ಸಾವನ್ನು ಸಿಬಿಐಗೆ ಒಪ್ಪಿಸಿದರೂ ಇತ್ಯರ್ಥವಾಗಿಲ್ಲ. ಈ ಮೂವರ ಸಾವಿಗೂ ನ್ಯಾಯ ದೊರೆಯುವುದಿಲ್ಲ. ಆದರೆ ಬಿಜೆಪಿ ಇವರ ಸಾವನ್ನು ಬಂಡವಾಳವನ್ನಾಗಿಸಿಕೊಂಡಿದೆ. ಇವೆಲ್ಲ ಸಮಸ್ಯೆ  ಇತ್ಯರ್ಥವಾಗಬೇಕಾದರೆ ಕೆನರಾ ಲೋಕಸಭಾ ಕ್ಷೇತ್ರದಿಂದ ಆನಂದ ಅಸ್ನೋಟಿಕರ್‌ ಅವರನ್ನು ಬಹುಮತದಿಂದ ಗೆಲ್ಲಿಸಿ ಎಂದು ವಿನಂತಿಸಿಕೊಂಡರು.

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.