ಅಭ್ಯರ್ಥಿಗಿಂತ ರಾಷ್ಟ್ರ ರಾಜಕೀಯ ಪರಿಸ್ಥಿತಿಯೇ ನಿರ್ಣಾಯಕ

ರಣಾಂಗಣ: ದಕ್ಷಿಣ ಕನ್ನಡ

Team Udayavani, Apr 11, 2019, 6:38 AM IST

abyrthigi

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ರಾಜಕೀಯ ವಿಶೇಷತೆ ಮತ್ತು ವಿಭಿನ್ನತೆಗಳನ್ನು ಮೈಗೂಡಿಸಿಕೊಂಡು ರಾಜ್ಯ ಮತ್ತು ರಾಷ್ಟ್ರ ರಾಜಕಾರಣದಲ್ಲಿ ಗಮನ ಸೆಳೆದಿರುವ ಕ್ಷೇತ್ರ. ಈ ಹಿಂದೆ ಮಂಗಳೂರು ಕ್ಷೇತ್ರವಾಗಿದ್ದು, ಪುನರ್‌ ವಿಂಗಡನೆ ಬಳಿಕ ಕೊಡಗು ಜಿಲ್ಲೆಯನ್ನು ಕಳಚಿಕೊಂಡು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರವಾಗಿ ಬದಲಾಗಿದೆ.

1991ರಿಂದ 2019ವರೆಗೆ ಒಟ್ಟು 28 ವರ್ಷ ಬಿಜೆಪಿ ಸಂಸದರು ಈ ಕ್ಷೇತ್ರವನ್ನು ಪ್ರತಿನಿಧಿಸುತ್ತಾ ಬಂದಿದ್ದಾರೆ. 2009 ಹಾಗೂ 2014ರಲ್ಲಿ ಸತತವಾಗಿ ಆಯ್ಕೆಯಾಗಿರುವ ಹಾಲಿ ಸಂಸದ ನಳಿನ್‌ ಕುಮಾರ್‌ ಕಟೀಲು ಈ ಬಾರಿಯೂ ಸ್ಪರ್ಧಿಸುತ್ತಿದ್ದು ಹ್ಯಾಟ್ರಿಕ್‌ ಜಯದ ನಿರೀಕ್ಷೆಯಲ್ಲಿದ್ದಾರೆ.

ಕಳೆದ 28 ವರ್ಷಗಳಿಂದ ತಮ್ಮಿಂದ ಜಾರಿಹೋಗಿರುವ ಈ ಕ್ಷೇತ್ರವನ್ನು ಕೈವಶ ಮಾಡಿಕೊಳ್ಳಬೇಕೆಂದು ಪ್ರಯತ್ನಿಸುತ್ತಿರುವ ಕಾಂಗ್ರೆಸ್‌, ಜಿಲ್ಲಾ ಯುವ ಕಾಂಗ್ರೆಸ್‌ ಅಧ್ಯಕ್ಷ ಮಿಥುನ್‌ ರೈ ಅವರನ್ನು ಕಣಕ್ಕಿಳಿಸಿದೆ. ಎಸ್‌ಡಿಪಿಐ, ಬಿಎಸ್‌ಪಿ, ಉತ್ತಮ ಪ್ರಜಾಕೀಯ ಪಾರ್ಟಿ, ಹಿಂದೂಸ್ತಾನ್‌ ಜನತಾ ಪಾರ್ಟಿ ಹಾಗೂ 7 ಮಂದಿ ಪಕ್ಷೇತರರು ಸೇರಿ ಒಟ್ಟು 13 ಮಂದಿ ಸ್ಪರ್ಧಾಕಣದಲ್ಲಿದ್ದಾರೆ.

ಈ ಕ್ಷೇತ್ರದ ಇತಿಹಾಸ ಗಮನಿಸಿದರೆ ಇಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್‌ ಸಾಂಪ್ರದಾಯಿಕ ಎದುರಾಳಿಗಳು. ಈ ಹಿಂದಿನ ಎಲ್ಲಾ ಚುನಾವಣೆಗಳಲ್ಲಿ ನಿಕಟ ಸ್ಪರ್ಧೆ ಈ ಎರಡೂ ಪಕ್ಷಗಳ ನಡುವೆಯೇ ನಡೆದಿತ್ತು. ಈ ಬಾರಿಯೂ ಇದೇ ಚಿತ್ರಣ ಕಂಡುಬಂದಿದೆ.

ಗೆಲುವಿನ ಸಾಧ್ಯತೆ: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ಒಟ್ಟು 8 ಕ್ಷೇತ್ರಗಳನ್ನು ಹೊಂದಿದೆ. 2018ರಲ್ಲಿ ನಡೆದ ವಿಧಾನ ಸಭಾ ಚುನಾವಣೆಯಲ್ಲಿ 8ರಲ್ಲಿ ಬಿಜೆಪಿ 7 ಕ್ಷೇತ್ರಗಳಲ್ಲಿ ಹಾಗೂ ಒಂದು ಕ್ಷೇತ್ರದಲ್ಲಿ ಕಾಂಗ್ರೆಸ್‌ ಜಯ ಸಾಧಿಸಿದೆ. ಚುನಾವಣೆಯಲ್ಲಿ ಒಟ್ಟಾರೆ ಮತ ಗಳಿಕೆಯಲ್ಲಿ ಬಿಜೆಪಿ ಒಟ್ಟು 8 ಕ್ಷೇತ್ರಗಳಲ್ಲಿ 7,15,208 ಹಾಗೂ ಕಾಂಗ್ರೆಸ್‌ 5,57,935 ಮತಗಳನ್ನು ಗಳಿಸಿದೆ.

ಅಂದರೆ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷಕ್ಕಿಂತ ಬಿಜೆಪಿ 1,57,273 ಅಧಿಕ ಮತಗಳನ್ನು ಪಡೆದುಕೊಂಡಿದೆ. ಇಲ್ಲಿ ಇನ್ನೊಂದು ಗಮನಿಸಬೇಕಾದ ಅಂಶವೆಂದರೆ 2014ರ ಲೋಕಸಭಾ ಚುನಾವಣೆಯಲ್ಲಿ ಹಾಲಿ ಸಂಸದ ಬಿಜೆಪಿಯ ನಳಿನ್‌ ಕುಮಾರ್‌ ಕಟೀಲು ಕಾಂಗ್ರೆಸ್‌ನ ಬಿ.ಜನಾರ್ದನ ಪೂಜಾರಿ ವಿರುದ್ಧ 1,42,000 ಮತಗಳ ಅಂತರದಿಂದ ಜಯ ಸಾಧಿಸಿದ್ದರು.

2018ರ ಚುನಾವಣೆಯಲ್ಲಿ ಬಿಜೆಪಿ ಮುನ್ನಡೆಯಲ್ಲಿ ಇನ್ನಷ್ಟು ಹೆಚ್ಚಳವಾಗಿದ್ದು, ಬಿಜೆಪಿಯ ಗೆಲುವಿನ ಆತ್ಮವಿಶ್ವಾಸವನ್ನು ವೃದ್ಧಿಸಿದೆ. ನರೇಂದ್ರ ಮೋದಿಯವರ ಸಾಧನೆಗಳನ್ನು ಚುನಾವಣಾ ಪ್ರಚಾರದಲ್ಲಿ ಪ್ರಮುಖ ಅಸ್ತ್ರವಾಗಿ ಬಳಸಿಕೊಳ್ಳುತ್ತಿದೆ.

ಕ್ಷೇತ್ರದಲ್ಲಿ 1991ರಿಂದ ಲೋಕಸಭಾ ಚುನಾವಣೆಗಳಲ್ಲಿ ನಿರಂತರವಾಗಿ ಸೋಲು ಅನುಭವಿಸುತ್ತಾ ಬಂದಿರುವ ಕಾಂಗ್ರೆಸ್‌ ಈ ಬಾರಿ ಕ್ಷೇತ್ರವನ್ನು ಕೈವಶ ಮಾಡಿಕೊಳ್ಳಬೇಕೆಂಬ ಪಣತೊಟ್ಟು 4 ದಶಕಗಳ ಬಳಿಕ ಹೊಸ ಮುಖಕ್ಕೆ ಅವಕಾಶ ನೀಡಿ ಮಿಥುನ್‌ ರೈ ಅವರನ್ನು ಕಣಕ್ಕಿಳಿಸಿದೆ.

ನಳಿನ್‌ ಕುಮಾರ್‌ ಕಟೀಲು ಅವರ ವೈಫಲ್ಯಗಳನ್ನು ಪಟ್ಟಿ ಮಾಡಿ ಚುನಾವಣೆಯಲ್ಲಿ ಪ್ರಮುಖ ಅಸ್ತ್ರವಾಗಿ ಮಾಡಿಕೊಂಡಿದೆ. ಜತೆಗೆ ಮೋದಿ ಸರಕಾರ 5 ವರ್ಷಗಳ ಆಡಳಿತದಲ್ಲಿ ಸಂಪೂರ್ಣ ವಿಫಲವಾಗಿದೆ ಎಂಬುದಾಗಿ ಮತದಾರರ ಮುಂದೆ ಪ್ರತಿಪಾದಿಸುತ್ತಿದೆ. ಇದೆಲ್ಲಾ ಅಂಶಗಳು ಈ ಬಾರಿ ನಮಗೆ ಗೆಲವು ತಂದುಕೊಡಲಿದೆ ಎಂಬ ಆತ್ಮವಿಶ್ವಾಸ ಕಾಂಗ್ರೆಸ್‌ ಪಾಳೆಯದಲ್ಲಿದೆ.

ಎಸ್‌ಡಿಪಿಐ ಅಭ್ಯರ್ಥಿಯಾಗಿ ಇಲ್ಯಾಸ್‌ ಮಹಮ್ಮದ್‌ ತುಂಬೆ ಸ್ಪರ್ಧಿಸುತ್ತಿದ್ದಾರೆ. ಎಸ್‌ಡಿಪಿಐ ಕಳೆದ ಬಾರಿ 27,254 ಮತಗಳನ್ನು ಗಳಿಸಿತ್ತು . ಈ ಬಾರಿಯೂ ಎಸ್‌ಡಿಪಿಐ ಸಾಕಷ್ಟು ಪ್ರಮಾಣದಲ್ಲಿ ಮುಸ್ಲಿಂ ಮತಗಳನ್ನು ಗಳಿಸುವ ಸಾಧ್ಯತೆಗಳಿವೆ. ಕಳೆದ ಬಾರಿ ಸ್ಪರ್ಧಿಸಿದ್ದ ಎಡ ಪಕ್ಷಗಳು ಈ ಬಾರಿ ಕಣದಿಂದ ದೂರ ಉಳಿದಿದ್ದು ಇದರ ಸಾಂಪ್ರದಾಯಿಕ ಮತಗಳು ಕಾಂಗ್ರೆಸ್‌ ಪಾಲಾಗುವ ನಿರೀಕ್ಷೆಯಿದೆ.

ವಿದ್ಯಾವಂತ ಮತದಾರರೇ ಹೆಚ್ಚಿರುವ ಕಾರಣ ಈ ಕ್ಷೇತ್ರದಲ್ಲಿ ಹಣ ಮತ್ತು ಆಮಿಷಗಳ ಪ್ರಭಾವ ಅಷ್ಟೊಂದಿಲ್ಲ. ಸ್ಥಳೀಯ ವಿಚಾರಗಳಿಗಿಂತ ರಾಷ್ಟ್ರ ಮತ್ತು ರಾಜ್ಯ ರಾಜಕಾರಣವೇ ಮತಗಳ ಮೇಲೆ ಹೆಚ್ಚು ಪ್ರಭಾವ ಬೀರುತ್ತದೆ ಎಂಬುದು ಕಣದಲ್ಲಿ ಕಂಡುಬರುತ್ತಿರುವ ಚಿತ್ರಣ.

ಯಾವ ಜಾತಿ ಎಷ್ಟೆಷ್ಟು?: ಜಾತಿವಾರು ಲೆಕ್ಕಚಾರದ ಬಗ್ಗೆ ಅಧಿಕೃತ ಅಂಕಿಅಂಶಗಳಿಲ್ಲ. ಆದರೆ ಒಂದು ಅಂದಾಜಿನ ಪ್ರಕಾರ ಇಲ್ಲಿ ಸುಮಾರು 4.20 ಲಕ್ಷ ಬಿಲ್ಲವರು, 3.60 ಲಕ್ಷ ಮುಸ್ಲಿಮರು, 1.55 ಲಕ್ಷ ಕ್ರಿಶ್ಚಿಯನ್‌, 2.20 ಲಕ್ಷ ಬಂಟ ಸಮುದಾಯದ ಮತದಾರದಿದ್ದಾರೆ. ಕುಲಾಲ್‌, ಮೊಗವೀರ, ಬ್ರಾಹ್ಮಣ, ಜೈನ್‌, ಜಿಎಸ್‌ಬಿ, ವಿಶ್ವಕರ್ಮ, ಕ್ಷತ್ರಿಯ, ಗಾಣಿಗ, ದೇವಾಡಿಗ, ಒಕ್ಕಲಿಗ, ಮಡಿವಾಳ ಸೇರಿ ಇತರ ಸಮುದಾಯದ ಸುಮಾರು 5 .60ಲಕ್ಷ ಮತದಾರರಿದ್ದಾರೆ ಎಂದು ಅಂದಾಜಿಸಲಾಗಿದೆ.

ಒಟ್ಟು ಮತದಾರರು: 17,24,566
ಪುರುಷರು: 8,45,283
ಮಹಿಳೆಯರು: 879186

* ಕೇಶವ ಕುಂದರ್‌

ಟಾಪ್ ನ್ಯೂಸ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.