ಮತದಾನಕ್ಕೆ ರೇಷನ್‌ ಕಾರ್ಡ್‌ ಕೂಡ ದಾಖಲೆಯಲ್ಲ


Team Udayavani, Apr 9, 2019, 6:09 AM IST

Shashikant-Senthil

ಮಂಗಳೂರು: ಭಾವ ಚಿತ್ರ ಇರುವ ಮತದಾರರ ಗುರುತು ಚೀಟಿ (ಎಪಿಕ್‌ ಕಾರ್ಡ್‌) ಇಲ್ಲದಿದ್ದಲ್ಲಿ ಮತದಾರರು ತಮ್ಮ ಹಕ್ಕು ಚಲಾಯಿಸಲು ಮತದಾರರ ಚೀಟಿ (ವೋಟರ್‌ ಸ್ಲಿಪ್‌) ಹಾಗೂ ಪಡಿತರ ಚೀಟಿ (ರೇಷನ್‌ ಕಾರ್ಡ್‌) ಈ ಬಾರಿ ಅರ್ಹ ದಾಖಲೆಗಳೆಂದು ಪರಿಗಣಿಸಲಾಗುವುದಿಲ್ಲ ಎಂದು ಜಿಲ್ಲಾಧಿಕಾರಿ, ಜಿಲ್ಲಾ ಚುನಾವಣಾಧಿಕಾರಿ ಶಶಿಕಾಂತ್‌ ಸೆಂಥಿಲ್‌ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಎಪಿಕ್‌ ಕಾರ್ಡ್‌ ಇಲ್ಲದಿದ್ದಲ್ಲಿ ಪರಿಗಣಿಸಲಾಗುವ ನಿಗದಿತ ದಾಖಲೆಗಳಿಂದ ರೇಷನ್‌ ಕಾರ್ಡ್‌ ಹಾಗೂ ವೋಟರ್‌ ಸ್ಲಿಪ್‌ ಕೈಬಿಡಲಾಗಿದೆ. ಮತದಾರರು ಎಪಿಕ್‌ ಕಾರ್ಡ್‌ ಇಲ್ಲದಿದ್ದಲ್ಲಿ ಚುನಾವಣಾ ಆಯೋಗ ನಿಗದಿಪಡಿಸಿದ 11 ಗುರುತು ದಾಖಲೆಗಳ ಪೈಕಿ ಯಾವುದಾದರೂ ಒಂದನ್ನು ನೀಡಿ ಮತ ಚಲಾಯಿಸಬಹುದು ಎಂದರು.

ಇವಿಎಂ ಸಿದ್ಧತೆ ಪ್ರಕ್ರಿಯೆ
ಚುನಾವಣೆಗೆ ವಿದ್ಯುನ್ಮಾನ ಮತಯಂತ್ರಗಳನ್ನು (ಇವಿಎಂ) ಸಿದ್ಧಗೊಳಿಸುವ ಪ್ರಕ್ರಿಯೆ ನಡೆಯುತ್ತಿದೆ. ಮೊದಲ ಹಂತದ ರ್‍ಯಾಂಡಮೈಷೇಶನ್‌ ಅನ್ನು ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಮಕ್ಷಮದಲ್ಲಿ ನಡೆಸಿ 8 ವಿಧಾನಸಭಾ ವ್ಯಾಪ್ತಿಗಳ ಒಟ್ಟು 1,861 ಮತಗಟ್ಟೆಗಳಿಗೆ 2,236 ಕಂಟ್ರೋಲ್‌ ಯೂನಿಟ್‌ (ಸಿಯು), 2,236 ಬ್ಯಾಲೆಟ್‌ ಯೂನಿಟ್‌ಗಳು ಹಾಗೂ 2,495 ವಿವಿಪ್ಯಾಟ್‌ಗಳನ್ನು ಹಂಚಿಕೆ ಮಾಡಲಾಗಿದೆ. ಮತಗಟ್ಟೆವಾರು ಹಂಚಿಕೆ ಪ್ರಕ್ರಿಯೆಯನ್ನು ಅಭ್ಯರ್ಥಿಗಳ ಸಮಕ್ಷಮ ಎ. 3ರಂದು ನಡೆಸಲಾಗಿದೆ. ಇವಿಎಂಗಳನ್ನು ಸಿದ್ಧಪಡಿಸುವ ಕಾರ್ಯ ಎ. 10ರಂದು 9.30ಕ್ಕೆ ನಡೆಯಲಿದೆ. ನಿಯೋಜಿತ ಬಿಇಎಲ್‌ನ ತಾಂತ್ರಿಕ ಸಿಬಂದಿ ಹಾಗೂ ಅಭ್ಯರ್ಥಿಗಳ ಸಮಕ್ಷಮದಲ್ಲಿ ಚಿಹ್ನೆಗಳ ಲೋಡಿಂಗ್‌ ಆಗಲಿದೆ ಎಂದರು.

ಸಹಾಯವಾಣಿಗೆ 2,598 ಕರೆ
ಉಚಿತ ಸಹಾಯವಾಣಿಗೆ 2,598 ಕರೆಗಳು ಬಂದಿದ್ದು, 2,595ನ್ನು ಇತ್ಯರ್ಥ ಮಾಡಲಾಗಿದೆ. ಸಿ-ವಿಜಿಲ್‌ಗೆ 32 ದೂರು ಬಂದಿದ್ದು 24ರ ಬಗ್ಗೆ ಕ್ರಮ ಕೈಗೊಳ್ಳಲಾಗಿದೆ.

23 ಚೆಕ್‌ಪೋಸ್ಟ್‌
ಸ್ಥಾಪಿಸಲಾಗಿದೆ. ಪರವಾನಿಗೆ ಪಡೆದ 11,631 ಆಯುಧಗಳ ಪೈಕಿ 11,545ನ್ನು ಮಾಲಕರು ಠಾಣೆಗಳಲ್ಲಿ ಠೇವಣಿ ಇಟ್ಟಿದ್ದಾರೆ. 86 ಆಯುಧಗಳಿಗೆ ವಿನಾಯತಿ ನೀಡಲಾಗಿದೆ ಎಂದರು.

ಜಿ.ಪಂ.ಸಿಇಒ ಡಾ| ಆರ್‌. ಸೆಲ್ವಮಣಿ, ಆಪರ ಜಿಲ್ಲಾಧಿಕಾರಿ ವೆಂಕಟಾಚಲಪತಿ ಉಪಸ್ಥಿತರಿದ್ದರು.

ಪ್ರಥಮ ಬಾರಿಗೆ ಅಭ್ಯರ್ಥಿಗಳ ಭಾವಚಿತ್ರ
ಚುನಾವಣೆಯಲ್ಲಿ ಪ್ರಥಮ ಬಾರಿಗೆ ಇವಿಎಂ ಮತಪತ್ರದಲ್ಲಿ ಅಭ್ಯರ್ಥಿಗಳ ಭಾವಚಿತ್ರವನ್ನು ಅಳವಡಿಸಲಾಗುತ್ತಿದೆ. ಒಂದೇ ಹೆಸರಿನ ಅನೇಕ ಅಭ್ಯರ್ಥಿಗಳು ಇದ್ದರೂ ಮತದಾರ ಗೊಂದಲಕ್ಕೀಡಾಗುವ ಸಾಧ್ಯತೆ ಇಲ್ಲ.

93.92 ಲಕ್ಷ ರೂ. ಮೌಲ್ಯದ ಮದ್ಯ ವಶ
ದ.ಕ. ಜಿಲ್ಲೆಯಲ್ಲಿ ಮಾದರಿ ನೀತಿಸಂಹಿತೆ ಜಾರಿಗೆ ಬಂದ ಬಳಿಕ 93,92,437 ರೂ. ಮೌಲ್ಯದ 84,181,02 ಲೀಟರ್‌ ಮದ್ಯ ವಶಪಡಿಸಿಕೊಳ್ಳಲಾಗಿದೆ. 3 ಬೈಕ್‌, 3 ಲಾರಿ, 3 ಕಾರು, 1 ಟ್ರಕ್‌, 1 ಟ್ಯಾಂಕರ್‌ ವಶವಾಗಿದ್ದು, ಮೌಲ್ಯ 1.07 ಕೋ.ರೂ. ಆಗಿದೆ. ತಪಾಸಣೆ ವೇಳೆ ವಶವಾಗಿದ್ದ 28,10,500 ರೂ. ನಗದನ್ನು ದಾಖಲಾತಿ ಪರಿಶೀಲಿಸಿ ಮರಳಿಸಿದ್ದಾಗಿ ಜಿಲ್ಲಾಧಿಕಾರಿ ತಿಳಿಸಿದರು.

ಟಾಪ್ ನ್ಯೂಸ್

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Virat Kohli and Rohit to open in t20 world cup; report

T20 World Cup; ರೋಹಿತ್‌, ವಿರಾಟ್‌ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಿಹಾರದ ವಲಸೆ ಕಾರ್ಮಿಕ ಮೃತ್ಯು

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.