ಧರ್ಮ ಒಡೆಯಲು ಹೋಗಿ ಸೋತು ಬುದ್ಧಿ ಬಂದಿದೆ: ಶೆಟ್ಟರ್
Team Udayavani, Apr 14, 2019, 3:00 AM IST
ಹುಬ್ಬಳ್ಳಿ: ವೀರಶೈವ ಮತ್ತು ಲಿಂಗಾಯತ ಧರ್ಮ ಒಡೆಯಲು ಹೋಗಿ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ನವರು ಪೆಟ್ಟು ತಿಂದಿದ್ದಾರೆ. ಅವರಿಗೆ ಸೋತ ಮೇಲೆ ಬುದ್ಧಿ ಬಂದಿದೆ ಎಂದು ಮಾಜಿ ಸಿಎಂ ಜಗದೀಶ ಶೆಟ್ಟರ್ ಹೇಳಿದರು.
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ಲಿಂಗಾಯತ ಸ್ವತಂತ್ರ ಧರ್ಮ ಹೋರಾಟ ಮಾಡಿದವರಿಗೆ ಸಮಾಜದ ಬಗ್ಗೆ ನಿಜವಾದ ಕಳಕಳಿಯಿದ್ದರೆ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಮೇಲ್ವರ್ಗದವರಿಗೆ ಮೀಸಲಾತಿ ನೀಡುವ ಕಾನೂನನ್ನು ರಾಜ್ಯದಲ್ಲಿ ಜಾರಿಗೆ ತರಲು ಪ್ರಯತ್ನಿಸಲಿ.
ಲಿಂಗಾಯತ ಧರ್ಮ ಇಬ್ಭಾಗಿಸಲು ಪ್ರಯತ್ನಿಸಿದ್ದಕ್ಕೆ ಡಿ.ಕೆ.ಶಿವಕುಮಾರ ಮತ್ತು ಸಿದ್ದರಾಮಯ್ಯ ಈಗಾಗಲೇ ಕ್ಷಮೆ ಕೇಳಿದ್ದಾರೆ. ಧಾರವಾಡ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ವಿನಯ ಕುಲಕರ್ಣಿ ಲಿಂಗಾಯತ ಪ್ರತ್ಯೇಕ ಧರ್ಮದ ವಿಷಯ ಈಗ ಅಪ್ರಸ್ತುತ ಎಂದು ಹೇಳುತ್ತಿದ್ದಾರೆ. ಸಚಿವ ಎಂ.ಬಿ. ಪಾಟೀಲ ಮೊದಲು ಈ ಕುರಿತು ವಿನಯ ಕುಲಕರ್ಣಿ ಅವರನ್ನು ಪ್ರಶ್ನಿಸಬೇಕು. ಆ ಮೇಲೆ ಡಿಕೆಶಿ ಅವರನ್ನು ಕೇಳಲಿ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Campaign: ಕಾಂಗ್ರೆಸ್ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ
Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ
ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು
Temperature; ರಾಜ್ಯದಲ್ಲಿ ಮತ್ತೆ ದಿಢೀರ್ ಏರಿದ ತಾಪಮಾನ
ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ
MUST WATCH
ಹೊಸ ಸೇರ್ಪಡೆ
Panaji: ಸರಕಾರದ ಆ್ಯಪ್ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ
Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ
Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ
Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್ ಸೆರೆ