ಕಾಂಚಾಣದ್ದೇ ಸದ್ದು, ಹಣ-ಹೆಂಡದ ಮೇಲಾಟ


Team Udayavani, Apr 22, 2019, 3:00 AM IST

kanchande

ಸಾಂದರ್ಭಿಕ ಚಿತ್ರ

ಬೆಂಗಳೂರು: “ಲೋಕ’ ಸಮರದಲ್ಲಿ ಕಾಂಚಾಣ ಸದ್ದು ಮಾಡಿದ್ದು, ಹಣ ಹಾಗೂ ಹೆಂಡದ ಮೇಲಾಟ ಓಟಿನ ಮೌಲ್ಯದ ಜತೆಗೆ ಚೆಲ್ಲಾಟ ಆಡಿವೆ. ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಜಪ್ತಿ ಮಾಡಲಾದ ಅಕ್ರಮ ಹಣ “ಶತಕದ’ ಅಂಚಿಗೆ ಬಂದು ನಿಂತಿದೆ.

ಚುನಾವಣಾ ಅಕ್ರಮಗಳನ್ನು ತಡೆದು, ಹಣ ಮತ್ತು ಹೆಂಡದ ಹಂಚಿಕೆಗೆ ಕಡಿವಾಣ ಹಾಕಲು ಚುನಾವಣಾ ಆಯೋಗ ಚಾಪೆ ಕೆಳಗೆ ತೂರಿದರೆ ಅಕ್ರಮ ಎಸಗುವ ಅಸಾಮಿಗಳು ರಂಗೋಲಿ ಕೆಳಗೆ ತೂರುತ್ತಾರೆ ಅನ್ನುವುದಕ್ಕೆ 2019ರ ಲೋಕಸಭಾ ಚುನಾವಣೆಯಲ್ಲಿ ಇಲ್ಲಿವರೆಗೆ ಚುನಾವಣಾ ನೀತಿ ಸಂಹಿತೆ ಜಾರಿ ತಂಡಗಳು ವಶಪಡಿಸಿಕೊಂಡ ಅಕ್ರಮ ಹಣ 87.43 ಕೋಟಿ ಸಾಕ್ಷಿ.

ಇದು ಲೆಕ್ಕಕ್ಕೆ ಸಿಕ್ಕಿದ್ದು ಮಾತ್ರ, ಲೆಕ್ಕಕ್ಕೆ ಸಿಗದ ಅಕ್ರಮ ಹಣ ನೂರಾರು ಕೋಟಿ ರೂಪಾಯಿ. ರಾಜ್ಯದಲ್ಲಿ ಚುನಾವಣೆಗಿಂತ ಚುನಾವಣೆಗೆ ಅಕ್ರಮಗಳ ಪ್ರಮಾಣ ಏರುಗತಿಯಲ್ಲೇ ಇದೆ. 2014 ಲೋಕಸಭಾ ಚುನಾವಣೆಯಲ್ಲಿ ಒಟ್ಟಾರೆ ನಗದು, ಮದ್ಯ ಸೇರಿ ಒಟ್ಟಾರೆ ಜಪ್ತಿ 37.68 ಕೋಟಿ ಆಗಿತ್ತು.

ಈವರೆಗೆ 87.43 ಕೋಟಿ ರೂ. ಅಕ್ರಮ ಹಣ ಜಪ್ತಿ ಮಾಡಲಾಗಿದ್ದು, ಸಾಮಾನ್ಯವಾಗಿ ಕೊನೆಯ 48 ಗಂಟೆಗಳಲ್ಲಿ ಹಣ ಹಂಚಿಕೆ ಹೆಚ್ಚಾಗಿರುವುದರಿಂದ ಅಕ್ರಮ ಹಣದ ಪ್ರಮಾಣ ಇನ್ನೂ ಹೆಚ್ಚಾಗಬಹುದು ಎಂದು ಆಯೋಗದ ಅಧಿಕಾರಿಗಳು ಹೇಳುತ್ತಾರೆ. ಕಳೆದ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಇಡೀ ಚುನಾವಣೆ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ವಶಪಡಿಸಿಕೊಂಡಿದ್ದ ನಗದು 28.08 ಕೋಟಿ ರೂ. ಆಗಿತ್ತು.

ಆದರೆ, ಈ ಚುನಾವಣೆಯಲ್ಲಿ ಈವರೆಗೆ 31 ಕೋಟಿ ನಗದು ವಶಪಡಿಸಿಕೊಳ್ಳಲಾಗಿದೆ. ಒಟ್ಟಾರೆ ಅಕ್ರಮ ಹಣದ ಪ್ರಮಾಣ ಮೂರು ಪಟ್ಟು ಹೆಚ್ಚಾಗಿದೆ. ಈ ಚುನಾವಣೆಯಲ್ಲಿ ಹಣಕ್ಕಿಂತ ಹೆಂಡದ ಹರಿದಾಟ ಹೆಚ್ಚಾಗಿದೆ. ಕಳೆದ ಬಾರಿ 2.82 ಕೋಟಿ ಮೊತ್ತದ ಮದ್ಯ ಜಪ್ತಿ ಮಾಡಿದ್ದರೆ, ಈ ಬಾರಿ ಅಬಕಾರಿ ಇಲಾಖೆಯು 36.89 ಕೋಟಿ ಮೊತ್ತದ ಅಕ್ರಮ ಮದ್ಯವನ್ನು ವಶಪಡಿಸಿಕೊಂಡಿದೆ.

ಬೆಂಗಳೂರು ದಕ್ಷಿಣ, ಶಿವಮೊಗ್ಗ ಮುಂದೆ: ಚುನಾವಣಾ ನೀತಿ ಸಂಹಿತೆ ಜಾರಿ ತಂಡಗಳು ವಿವಿಧ ಕಡೆ ದಾಳಿ ಮತ್ತು ತಪಾಸಣೆ ನಡೆಸಿ ನಗದು ವಶಪಡಿಸಿಕೊಂಡ ಕ್ಷೇತ್ರಗಳ ಪೈಕಿ ಬೆಂಗಳೂರು ದಕ್ಷಿಣ ಹಾಗೂ ಶಿವಮೊಗ್ಗ ಲೋಕಸಭಾ ಕ್ಷೇತ್ರಗಳು ಮುಂದಿವೆ. ಬೆಂಗಳೂರು ದಕ್ಷಿಣದಲ್ಲಿ ಒಟ್ಟಾರೆ 9.09 ಕೋಟಿ ರೂ. ಅಕ್ರಮ ಹಣ ವಶಪಡಿಸಿಕೊಂಡಿದ್ದರೆ, ಶಿವಮೊಗ್ಗದಲ್ಲಿ 10.41 ಕೋಟಿ ವಶಪಡಿಸಿಕೊಳ್ಳಲಾಗಿದೆ.

ಮೊದಲ ಹಂತದಲ್ಲಿ ಮತದಾನ ನಡೆದ 14 ಲೋಕಸಭಾ ಕ್ಷೇತ್ರಗಳಲ್ಲಿ 15.17 ಕೋಟಿ ನಗದು ಸೇರಿ 39.48 ಕೋಟಿ ಅಕ್ರಮ ಹಣ ವಶಪಡಿಸಿಕೊಂಡಿದ್ದರು. ಅದೇ ರೀತಿ 2ನೇ ಹಂತದಲ್ಲಿ ಏ.23ರಂದು ಮತದಾನ ನಡೆಯಲಿರುವ 14 ಕ್ಷೇತ್ರಗಳಲ್ಲಿ ಏ.21ರ ತನಕ 16.64 ಕೋಟಿ ನಗದು ಸೇರಿ 87.43 ಕೋಟಿ ಅಕ್ರಮ ಹಣ ವಶಪಡಿಸಿಕೊಳ್ಳಲಾಗಿದೆ.

ಸಾವಿರಗಟ್ಟಲೇ ಪ್ರಕರಣಗಳು: 2013ರ ವಿಧಾನಸಭೆ ಚುನಾವಣೆಯಲ್ಲಿ ಚುನಾವಣಾ ನೀತಿ ಸಂಹಿತೆಯ 5,281 ಪ್ರಕರಣಗಳು ದಾಖಲಾಗಿದ್ದರೆ, 2014 ಲೋಕಸಭಾ ಚುನಾವಣೆಯಲ್ಲಿ 1,934 ಹಾಗೂ 2018ರ ವಿಧಾನಸಭೆ ಚುನಾವಣೆಯಲ್ಲಿ 3,324 ಪ್ರಕರಣಗಳು ದಾಖಲಾಗಿದ್ದವು. 2019ರ ಲೋಕಸಭಾ ಚುನಾವಣೆಯಲ್ಲಿ ಇಲ್ಲಿತನಕ 17 ಸಾವಿರ ಪ್ರಕರಣಗಳು ದಾಖಲಾಗಿವೆ. ಈ ಪೈಕಿ 2013ರಲ್ಲಿ ದಾಖಲಾಗಿದ್ದ ಒಟ್ಟು ಪ್ರಕರಣಗಳಲ್ಲಿ 1,744, 2014ರಲ್ಲಿನ 472, 2018ರಲ್ಲಿನ 2,406 ಪ್ರಕರಣಗಳು ವಿಚಾರಣಾ ಹಂತದಲ್ಲಿ ಬಾಕಿ ಇವೆ. ಈ ಚುನಾವಣೆಯಲ್ಲಿ ದಾಖಲಾಗಿರುವ ಎಲ್ಲ ಪ್ರಕರಣಗಳೂ ಪ್ರಾಥಮಿಕ ವಿಚಾರಣಾ ಹಂತದಲ್ಲಿವೆ.

ಚುನಾವಣಾ ಅಕ್ರಮಗಳ ಇತಿಹಾಸ
ಅಕ್ರಮ ಜಪ್ತಿ 2013ರ ವಿಧಾನಸಭೆ 2014ರ ಲೋಕಸಭೆ 2018ರ ವಿಧಾನಸಭೆ 2019 ಲೋಕಸಭೆ

ನಗದು 14.42 ಕೋಟಿ 28.08 ಕೋಟಿ 92.89 ಕೋಟಿ 31.81 ಕೋಟಿ

ಮದ್ಯ 68 ಸಾವಿರ ಲೀಟರ್‌ 2.82 ಕೋಟಿ ಮೊತ್ತ 24.78 ಕೋಟಿ ಮೊತ್ತ 37.01 ಕೋಟಿ ಮೊತ್ತ

ಮಾದಕ ವಸ್ತುಗಳು 1 ಕೋಟಿ ಮೊತ್ತ 25 ಸಾವಿರ ಮೊತ್ತ 39.80 ಸಾವಿರ ಮೊತ್ತ 11.20 ಸಾವಿರ ಮೊತ್ತ

ಇತರೆ ವಸ್ತುಗಳು 6.78 ಕೋಟಿ ಮೊತ್ತ 66.13 ಕೋಟಿ ಮೊತ್ತ 1.31 ಕೋಟಿ ಮೊತ್ತ

ಒಟ್ಟು 15.42 ಕೋಟಿ 37.68 ಕೋಟಿ 184 ಕೋಟಿ 87.43 ಕೋಟಿ (ಏ.21ರ ತನಕ)

* ರಫೀಕ್‌ ಅಹ್ಮದ್‌

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.