ಈ ಬಾರಿ ಬದಲಾವಣೆ ತರುತ್ತಾರೆ
ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಸಂದರ್ಶನ
Team Udayavani, Mar 25, 2019, 6:30 AM IST
- ನೇರವಾಗಿ ಲೋಕಸಭೆಗೆ ಸ್ಪರ್ಧಿಸುತ್ತಿದ್ದೀರಿ; ಹೇಗೆನಿಸುತ್ತಿದೆ?
ಕಾರ್ಯಕರ್ತರ ಸಹಕಾರ, ಪಕ್ಷದ ಹಿರಿಯ ನಾಯಕರ ಅಶೀರ್ವಾದದಿಂದ ಸ್ಪರ್ಧೆಗೆ ಅವಕಾಶ ಲಭಿಸಿದೆ. ಕಾಂಗ್ರೆಸ್ ಯುವಕರಿಗೆ ಅವಕಾಶ ನೀಡುತ್ತಾ ಬಂದಿದ್ದು, ಈ ಬಾರಿ ನನಗೆ ಅವಕಾಶ ಸಿಕ್ಕಿದೆ. - ಸಾಮಾಜಿಕ ಚಟುವಟಿಕೆಗಳ ಕುರಿತು…
ಜಿಲ್ಲೆಯ ಸಾಂಸ್ಕೃತಿಕ ಪರಂಪರೆ, ಸೌಹಾರ್ದ ವಾತಾವರಣಕ್ಕೆ ಪೂರಕವಾಗಿ ಕಾರ್ಯನಿರ್ವಹಿ ಸುತ್ತಿದ್ದೇನೆ. ವಿವಿಧ ಸಮಿತಿಗಳ ಮೂಲಕ ಸಾಮಾಜಿಕ ಚಟುವಟಿಕೆಗಳಲ್ಲಿ ನಿರತನಾಗಿದ್ದೇನೆ. ಸರ್ವಧರ್ಮ ಹಬ್ಬಗಳ ಆಚರಣೆಯನ್ನು ವರ್ಷಂಪ್ರತಿ ಆಯೋಜಿಸುತ್ತಿದ್ದೇನೆ. ಯುವಜನರ ಅಶೋತ್ತರಗಳು ಚೆನ್ನಾಗಿ ಅರಿತಿದ್ದೇನೆ. ಇದಲ್ಲದೆ ಕಾಂಗ್ರೆಸ್ ಸರಕಾರದ ಜನಪರ ಯೋಜನೆಗಳು ಜನರ ಮನಸ್ಸಿನಲ್ಲಿದ್ದು, ನನ್ನ ಗೆಲ್ಲಿಸುತ್ತಾರೆ ಎಂಬ ದೃಢವಾದ ವಿಶ್ವಾಸ ನನ್ನದು. - ಕಿರಿಯ ವಯಸ್ಸಿನಲ್ಲಿ ದೊಡ್ಡ ಅವಕಾಶ ಹೇಗೆ ಸಾಧ್ಯವಾಯ್ತು?
ಪಕ್ಷಾಧ್ಯಕ್ಷ ರಾಹುಲ್ ಗಾಂಧಿ ಅವಕಾಶ ಮಾಡಿಕೊಟ್ಟಿದ್ದಾರೆ. ನನ್ನದು
ರಾಜಕೀಯ ಕುಟುಂಬವಲ್ಲ. ನನ್ನ ಒಲವು ಸಮಾಜಸೇವೆ, ರಾಜಕೀಯದ ಕಡೆಗೆ ಇತ್ತು. ವಿದ್ಯಾರ್ಥಿ ಸಂಘಟನೆ ಯಲ್ಲಿ ತೊಡಗಿಸಿಕೊಂಡು ಬಳಿಕ ಕಾಂಗ್ರೆಸ್ನ ತಣ್ತೀ ಸಿದ್ಧಾಂತಗಳ ಕಡೆಗೆ ಆಕರ್ಷಿತನಾಗಿ ಯುವ ಕಾಂಗ್ರೆಸ್ ಸೇರಿ ಜಿಲ್ಲಾ ಅಧ್ಯಕ್ಷನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. - ನಿಮ್ಮ ರಣತಂತ್ರಗಳೇನು?
ಪ್ರತಿಸ್ಪರ್ಧಿ ಯಾರು ಎಂಬುದು ಮುಖ್ಯವಲ್ಲ. ನಮ್ಮ ಗುರಿ ಚುನಾವಣೆಯಲ್ಲಿ ಗೆಲ್ಲುವುದು. ಅವಶ್ಯವಿರುವ ಕಾರ್ಯತಂತ್ರ ರೂಪಿಸುತ್ತೇವೆ. “ಕಳೆದ 25 ವರ್ಷಗಳಿಂದ ಬಿಜೆಪಿಗೆ ಅವಕಾಶ ನೀಡಿದ್ದೀರಿ ಈ ಬಾರಿ ಬದಲಾವಣೆ ಮಾಡಿ; ಕಾಂಗ್ರೆಸ್ಗೆ, ಮಿಥುನ್ಗೆ ಅವಕಾಶ ಮಾಡಿಕೊಡಿ’ ಎಂದು ಮತದಾರರಲ್ಲಿ ಮನವಿ ಮಾಡುತ್ತೇವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ
Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ
Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ
Sandalwood: ಸ್ಟಾರ್ ಸಿನ್ಮಾಗಳ ರಿಲೀಸ್ ಟೆನ್ಶನ್: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ
Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ