ಅಪ್ಪನ ಕ್ಷೇತ್ರದಲ್ಲಿ ಈ ಬಾರಿ ಕಾರ್ತಿಗೆ ಗೆಲ್ಲುವ ತವಕ


Team Udayavani, Apr 8, 2019, 6:30 AM IST

appana-kshetra

ಶಿವಗಂಗಾ ಲೋಕಸಭಾ ಕ್ಷೇತ್ರ ಎನ್ನುವುದು ತಮಿಳುನಾಡಿನಲ್ಲಿ ಕಾಂಗ್ರೆಸ್‌ನ ಭದ್ರ ಕೋಟೆ ಎಂಬ ಅಂಶ 1980ರಿಂದ 2014ರ ವರೆಗೆ ಸಾಬೀತಾಗಿತ್ತು. ಆ ಪಕ್ಷದ ಹಿರಿಯ ನಾಯಕ, ಮಾಜಿ ಸಚಿವ ಪಳನಿಯಪ್ಪನ್‌ ಚಿದಂಬರಂ ಏಳು ಬಾರಿ ಮತ್ತು ಆರ್‌.ಸ್ವಾಮಿನಾಥನ್‌ ಒಂದು ಬಾರಿ ಗೆದ್ದಿದ್ದಾರೆ. ಸದ್ಯ ಎಐಎಡಿಎಂಕೆಯ ಪಿ.ಆರ್‌.ಸೆಂಥಿಲ್‌ನಾಥನ್‌ ಸಂಸದರಾಗಿದ್ದಾರೆ. ಈ ಸಾಲಿನಲ್ಲಿ ಸ್ಪರ್ಧೆಗೆ ಚಿದಂಬರಂ ಪುತ್ರ ಕಾರ್ತಿ ಚಿದಂಬರಂಗೆ ಕಾಂಗ್ರೆಸ್‌ ಅನುವು ಮಾಡಿಕೊಟ್ಟಿದೆ. ಅದು ಪಕ್ಷದ ನಾಯಕ ಇ.ಎಂ.ಸುದರ್ಶನ ನಾಚಿಯಪ್ಪನ್‌ ಬಹಿರಂಗವಾಗಿಯೇ ದನಿಯೆ ತ್ತಿದ್ದಾರೆ. ಕ್ಷೇತ್ರದ ಜನರು ಚಿದಂಬರಂ ಕುಟುಂಬದವರನ್ನು ದ್ವೇಷಿಸುತ್ತಿದ್ದಾರೆ ಮತ್ತು ಅವರಿಂದ ಏನು ಪ್ರಯೋಜನ­ವಾಗಿಲ್ಲ ಎಂದು ಟೀಕಿಸಿದ್ದರು.

ಕಾರ್ತಿ ವಿರುದ್ಧ ಐಎನ್‌ಎಕ್ಸ್‌ ಮಾಧ್ಯಮ ಲಂಚ ಪ್ರಕರಣ, ಏರ್‌ಸೆಲ್‌ ಮ್ಯಾಕ್ಸಿಸ್‌ ಡೀಲ್‌ ಕೇಸ್‌ನಲ್ಲಿ ಅಕ್ರಮ ಎಸಗಿದ ಆರೋಪವಿದೆ. ಸದ್ಯ ಅವರು ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ. 1984-1999ರ ವರೆಗೆ ಮಾಜಿ ಸಚಿವ ಪಿ.ಚಿದಂಬರಂ ಈ ಕ್ಷೇತ್ರದಲ್ಲಿ ಗೆದ್ದಿದ್ದರು. 1999-2004ರಲ್ಲಿ ಇ.ಎಂ.ಸುದರ್ಶನ ನಾಚಿಯಪ್ಪನ್‌ ಕಾಂಗ್ರೆಸ್‌ನ ಸಂಸದರಾಗಿದ್ದರು. 2004-2014ರ ವರೆಗೆ ಚಿದಂಬರಂ ಅವರೇ ಮತ್ತೆ ಗೆದ್ದಿದ್ದರು. 2014ರಲ್ಲಿ ಕಾರ್ತಿ ಚಿದಂಬರಂ ಸ್ಪರ್ಧಿಸಿದ್ದರಾದರೂ, 1,04, 678 ಮತಗಳನ್ನು ಪಡೆದು ನಾಲ್ಕನೇ ಸ್ಥಾನಕ್ಕೆ ಇಳಿದಿದ್ದರು. ಹೀಗಾಗಿ ಕಳೆದು ಹೋಗಿರುವ ಕ್ಷೇತ್ರವನ್ನು ಮತ್ತೆ ಪಡೆಯಲು ಕಾರ್ತಿ ಹರಸಾಹಸ ಪಡಬೇಕಾಗಿದೆ. ಕಾಂಗ್ರೆಸ್‌ನಲ್ಲಿಯೇ ಮಾಜಿ ಸಚಿವರ ಪುತ್ರನ ಸ್ಪರ್ಧೆಗೆ ಪ್ರಬಲ ವಿರೋಧವೂ ಇದೆ. ಎಐಎಡಿಎಂಕೆಯಿಂದ ಹಾಲಿ ಸಂಸದರೇ ಮತ್ತೆ ಕಣಕ್ಕೆ ಇಳಿದಿದ್ದಾರೆ. ಬಿಜೆಪಿಯಿಂದ ಎಚ್‌.ರಾಜಾ ಕಣದಲ್ಲಿದ್ದಾರೆ.

ಕಾಂಗ್ರೆಸ್‌ ಡಿಎಂಕೆ ಜತೆ ಮೈತ್ರಿ ಮಾಡಿಕೊಂಡಿರುವುದರಿಂದ ಅದು ಅಭ್ಯರ್ಥಿಯನ್ನು ಕಣಕ್ಕೆ ಇಳಿಸಿಲ್ಲ. ಹೀಗಾಗಿ, ಆ ಪಕ್ಷದ ಮತಗಳು ಕಾರ್ತಿ ಚಿದಂಬರಂಗೆ ನೆರವಾಗಲಿದೆಯೋ ನೋಡಬೇಕಾಗಿದೆ. ಏ.18ರಂದು ಈ ಕ್ಷೇತ್ರದ ಜನರು ಹಕ್ಕು ಚಲಾವಣೆ ನಡೆಸಲಿದ್ದಾರೆ.

ಜಾತಿ ಲೆಕ್ಕಾಚಾರ: ಈ ಕ್ಷೇತ್ರದಲ್ಲಿ ತಮಿಳುನಾಡಿನಲ್ಲಿ ವ್ಯಾಪರ, ಉದ್ದಿಮೆಗೆ ಹೆಸರುವಾಸಿಯಾಗಿರುವ ಚೆಟ್ಟಿಯಾರ್‌ ಸಮುದಾಯ ಹೆಚ್ಚಿನ ಸಂಖ್ಯೆಯಲ್ಲಿದೆ. ಈ ಸಮುದಾಯದ ಪ್ರಮಾಣವೇ ಶೇ.8-10ರ ಪ್ರಮಾಣದಲ್ಲಿದೆ. ದಲಿತರು, ತೇವರ್‌ ಮತ್ತು ಕೊನಾರ್ಸ್‌ ಸಮುದಾಯಕ್ಕೆ ಸೇರಿದವರೂ ಈ ಕ್ಷೇತ್ರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ.

2014ರ ಚುನಾವಣೆ
– ಪಿ.ಆರ್‌.ಸೆಂಥಿಲ್‌ನಾಥನ್‌ (ಎಐಎಡಿಎಂಕೆ) –  4,75,993
– ದೊರೈ ರಾಜಾ ಶುಭಾ (ಡಿಎಂಕೆ) – 2,46, 608

ಟಾಪ್ ನ್ಯೂಸ್

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.