- Wednesday 11 Dec 2019
ಚಾಮರಾಜ ನಗರ ಕ್ಷೇತ್ರದಿಂದ ವಿ.ಶ್ರೀನಿವಾಸ ಪ್ರಸಾದ್ ಸ್ಪರ್ಧೆ
Team Udayavani, Mar 16, 2019, 1:17 AM IST
ಬೆಂಗಳೂರು: ಚಾಮರಾಜನಗರ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಮಾಜಿ ಸಚಿವ ವಿ.ಶ್ರೀನಿವಾಸ ಪ್ರಸಾದ್ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದೆ.
ಶ್ರೀನಿವಾಸ ಪ್ರಸಾದ್ ಅವರು ಬೆಂಬಲಿಗರೊಂದಿಗೆ ಚರ್ಚಿಸಿ ಶನಿವಾರ ಅಂತಿಮ ತೀರ್ಮಾನ ಪ್ರಕಟಿಸುವುದಾಗಿ ತಿಳಿಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ಡಾಲರ್ ಕಾಲೋನಿ ನಿವಾಸಕ್ಕೆ ಶುಕ್ರವಾರ ಶಾಸಕ ಹರ್ಷವರ್ಧನ್ ಅವರೊಂದಿಗೆ ತೆರಳಿದ ಶ್ರೀನಿವಾಸ ಪ್ರಸಾದ್ ಅವರು ಕೆಲ ಹೊತ್ತು ಮಾತುಕತೆ ನಡೆಸಿದರು. ಈ ವೇಳೆ ಅವರು ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಯಡಿಯೂರಪ್ಪ ಅವರು ಮನವೊಲಿಸಿದರು ಎನ್ನಲಾಗಿದೆ.
ಭೇಟಿ ಬಳಿಕ ಮಾತನಾಡಿದ ವಿ.ಶ್ರೀನಿವಾಸ ಪ್ರಸಾದ್, ಚಾಮರಾಜನಗರ ಕ್ಷೇತ್ರದಲ್ಲಿ ಬಿಜೆಪಿಯಿಂದ ಸ್ಪರ್ಧಿಸಲು 17 ಮಂದಿ ಆಕಾಂಕ್ಷಿಗಳಿದ್ದರು. ಹಾಗಾಗಿ ನಾನು ಚುನಾವಣಾ ರಾಜಕಾರಣ ಬೇಡವೆಂಬ ನಿರ್ಧಾರಕ್ಕೆ ಬಂದಿದ್ದೆ. ಆದರೆ ಎಲ್ಲ ಆಕಾಂಕ್ಷಿಗಳು ನನ್ನನ್ನು ಸ್ಪರ್ಧಿಸುವಂತೆ ಒತ್ತಾಯಿಸಿದ್ದು, ಅವರು ಸ್ಪರ್ಧೆಯಿಂದ ಹಿಂದೆಸರಿದಿದ್ದಾರೆ. ಬೆಂಬಲಿಗರ ಒತ್ತಾಯಕ್ಕೆ ಮಣಿದು ಸ್ಪರ್ಧೆಗೆ ಒಪ್ಪಿದ್ದೇನೆ ಎಂದು ಹೇಳಿದರು.
ಈ ವಿಭಾಗದಿಂದ ಇನ್ನಷ್ಟು
-
ಪಶ್ಚಿಮ ಬಂಗಾಳದಲ್ಲಿ ಲೋಕಸಭೆ ಚುನಾವಣೆ ವೇಳೆ ನಡೆದ ಹಿಂಸಾಚಾರವನ್ನು ಗಣನೆಗೆ ತೆಗೆದುಕೊಂಡಿರುವ ಸುಪ್ರೀಂ ಕೋರ್ಟ್, ಬಿಜೆಪಿ ಅಭ್ಯರ್ಥಿಯೊಬ್ಬರಿಗೆ ಮೇ 28ರವರೆಗೆ...
-
ಲೋಕಸಭಾ ಚುನಾವಣೆಯ ಮತ ಎಣಿಕೆಗೂ ಮುನ್ನವೇ ಅನುಮಾನಾಸ್ಪದವಾಗಿ ಇವಿಎಂಗಳನ್ನು ಸಾಗಾಟ ಮಾಡುತ್ತಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ಬೆನ್ನಲ್ಲೇ...
-
ಈ ಬಾರಿ ಚುನಾವಣೆಯಲ್ಲಿ ದಿ.ರಾಜೀವ್ ಭ್ರಷ್ಟಾಚಾರದಿಂದ ಹಿಡಿದು ರಾಡಾರ್ನವರೆಗೆ, ಗೋಡ್ಸೆಯಿಂದ ಹಿಡಿದು ಮಹಾತ್ಮಾ ಗಾಂಧೀಜಿಯವರೆಗೆ, ಇವಿಎಂನಿಂದ ಹಿಡಿದು ಮಮತಾ...
-
ಕೊನೆಯ ಹಂತದ ಮತದಾನ ಮುಕ್ತಾಯವಾಗುತ್ತಿದ್ದಂತೆಯೇ ವಿವಿಧ ಸುದ್ದಿವಾಹಿನಿಗಳು ನಡೆಸಿದ ಚುನಾವಣೋತ್ತರ ಸಮೀಕ್ಷೆ ಪ್ರಕಟವಾಗಿವೆ. 13 ಸಮೀಕ್ಷೆಗಳ ಪೈಕಿ ಆರರಲ್ಲಿ...
-
ಲೋಕಸಭೆ ಚುನಾವಣೆಯ ಜೊತೆಗೆ ಈ ಬಾರಿ ನಾಲ್ಕು ರಾಜ್ಯಗಳ ವಿಧಾನಸಭೆ ಚುನಾವಣೆಯೂ ನಡೆದಿದೆ. ಆಂಧ್ರಪ್ರದೇಶ, ಅರುಣಾಚಲ ಪ್ರದೇಶ, ಒಡಿಶಾ ಮತ್ತು ಸಿಕ್ಕಿಂನಲ್ಲಿ ವಿಧಾನಸಭೆ...
ಹೊಸ ಸೇರ್ಪಡೆ
-
ದ ಹೇಗ್: ಮ್ಯಾನ್ಮಾರ್ ಸರಕಾರ ರೊಹಿಂಗ್ಯಾ ಮುಸ್ಲಿಮರ ವಿರುದ್ಧ ದಮನಕಾರಿ ನೀತಿ ಅನುಸರಿಸುತ್ತಿರುವುದಕ್ಕೆ ವಿಶ್ವಸಂಸ್ಥೆಯ ನ್ಯಾಯಾಲಯ ಅಸಮಾಧಾನ ವ್ಯಕ್ತಪಡಿಸಿದೆ....
-
ಸ್ಯಾಂಟಿಯಾಗೋ: 38 ಜನರನ್ನು ಹೊತ್ತೂಯ್ಯುತ್ತಿದ್ದ ಚಿಲಿಯ ಯುದ್ಧ ವಿಮಾನ ಸೋಮವಾರ ಸಂಜೆ ಕಾಣೆಯಾಗಿದೆ. ಸಿ-130 ಹರ್ಕ್ಯುಲಸ್ ವಿಮಾನದಲ್ಲಿ 17 ಸಿಬ್ಬಂದಿ ಮತ್ತು 12 ಪ್ರಯಾಣಿಕರು...
-
ರಾಯ್ಪುರ: ತಲೆಗೆ 40 ಲಕ್ಷ ರೂ. ಬಹುಮಾನ ಹೊತ್ತಿದ್ದ ಛತ್ತೀಸ್ಗಢದ ಪ್ರಮುಖ ನಕ್ಸಲ್ ನಾಯಕ ರಾಮಣ್ಣ ಹೃದಯಾಘಾತದಿಂದ ಮೃತಪಟ್ಟಿದ್ದಾನೆ ಎಂದು ಪೊಲೀಸರು ಮಂಗಳವಾರ...
-
ರಾಂಚಿ: ಜಾರ್ಖಂಡ್ನಲ್ಲಿ ಸೋಮವಾರ ರಾತ್ರಿ ಸಿಆರ್ಪಿಎಫ್ ಯೋಧರೊಬ್ಬರು ಪಾನಮತ್ತರಾಗಿ ತಮ್ಮ ಸಹೋದ್ಯೋಗಿ ಯೋಧ ಮತ್ತು ಅಧಿಕಾರಿ ಮೇಲೆ ಗುಂಡು ಹಾರಿಸಿ ಹತ್ಯೆಗೈದಿದ್ದಾರೆ....
-
ಹೊಸದಿಲ್ಲಿ: ಹೋಂಡಾ ಕಾರ್ಸ್ ಇಂಡಿಯಾವು ಮಂಗಳವಾರ ಬಿಎಸ್6 ಮಾದರಿಯ ಪೆಟ್ರೋಲ್ ಆವೃತ್ತಿಯ ಹೋಂಡಾ ಸಿಟಿ ಕಾರನ್ನು ಭಾರತದ ಮಾರುಕಟ್ಟೆಗೆ ಬಿಡುಗಡೆ ಮಾಡಿದೆ. ಹೊಸದಿಲ್ಲಿಯಲ್ಲಿ...