ಗೆಲುವು ನನ್ನದೇ: ಸುಮಲತಾ
Team Udayavani, Mar 29, 2019, 7:18 AM IST
ಕೆ.ಆರ್.ನಗರ: “ಯಾರು ಏನೇ ಷಡ್ಯಂತ್ರ ಮಾಡಿದರೂ ಗೆಲುವು ನನ್ನದೇ’ ಎಂದು ಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ವಿಶ್ವಾಸ ವ್ಯಕ್ತಪಡಿಸಿದರು.
ತಾಲೂಕಿನ ವಿವಿಧೆಡೆ ಪ್ರಚಾರ ನಡೆಸಿದ ಅವರು, “ಮಂಡ್ಯ ಲೋಕಸಭಾ ಕ್ಷೇತ್ರದ ಮತದಾರರು ಮತ್ತು ಅಂಬರೀಶ್ ಅಭಿಮಾನಿಗಳನ್ನು ನಂಬಿಕೊಂಡು ನಾನು ಚುನಾವಣೆಗೆ ಸ್ಫರ್ಧಿಸಿದ್ದೇನೆ. ಅವರೆಲ್ಲರೂ ನನಗೆ ಆಶೀರ್ವಾದ ಮಾಡಿ ನನ್ನನ್ನು ಗೆಲುವಿನ ದಡ ಸೇರಿಸಲಿದ್ದಾರೆ. ಮತದಾರರು ನನ್ನನ್ನು ಆಯ್ಕೆ ಮಾಡಿದರೆ ಅವರ ಋಣ ತೀರಿಸಲು ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ. ಪಕ್ಷೇತರ ಅಭ್ಯರ್ಥಿಯಾಗಿ ಮುಖ್ಯಮಂತ್ರಿಯ ಮಗನ ವಿರುದ್ಧ ಸ್ಪರ್ಧಿಸುವುದು ಎಂತಹ ಸವಾಲಿನ ಕೆಲಸ ಎಂಬುದು ಗೊತ್ತಿದ್ದರೂ ಮತದಾರರನ್ನು ನಂಬಿ ಆ ಸವಾಲು ಸ್ವೀಕರಿಸಿದ್ದೇನೆ’ ಎಂದರು.
“ನನಗೂ ನಿಖೀಲ್ ಹೆಸರಿನವರಿಂದ ನಾಮಪತ್ರ ಸಲ್ಲಿಸಲು ಹೇಳಿದ್ದರು. ನಾನು ಬೇಕಿದ್ದರೆ 9 ಜನ ನಿಖೀಲ್ ಹೆಸರಿನವರನ್ನು ನಿಲ್ಲಿಸಬಹುದಿತ್ತು. ಆದರೆ, ನಾನೇ ಬೇಡ, ನೇರ ಹೋರಾಟ ಮಾಡುತ್ತೇನೆ. ಹಿಂಬಾಗಿಲ ರಾಜಕಾರಣ ಮಾಡುವ ಅವಶ್ಯಕತೆ ಇಲ್ಲ
ಎಂದು ಹೇಳಿದ್ದೇನೆ ‘ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ