ಬಂಧನದಲ್ಲಿದ್ದಾಗ ಹಿಂಸೆ: ಸಾಧ್ವಿ ಪ್ರಜ್ಞಾ ಆರೋಪ
Team Udayavani, Apr 19, 2019, 5:46 AM IST
ಭಯೋತ್ಪಾದನೆ ಹೆಸರಿನಲ್ಲಿ ತಮ್ಮನ್ನು ಬಂಧಿಸಿದ ಮೊದಲ ದಿನವೇ ತಮ್ಮನ್ನು ಪೊಲೀಸರು ಬೆಲ್ಟ್ಗಳಿಂದ ತಮ್ಮನ್ನು ಥಳಿಸಿದ್ದಾಗಿ, ಭೋಪಾಲ್ನ ಬಿಜೆಪಿ ಅಭ್ಯರ್ಥಿ ಸಾಧ್ವಿ ಪ್ರಜ್ಞಾಸಿಂಗ್ ಠಾಕೂರ್ ಆರೋಪಿಸಿದ್ದಾರೆ. ಗುರುವಾರ, ಭೋಪಾಲ್ ಕ್ಷೇತ್ರದಲ್ಲಿ ತಮ್ಮ ಪ್ರಚಾರ ಆರಂಭಿಸಿದ ಅವರು, ತಮ್ಮ ಮೊದಲ ರ್ಯಾಲಿಯಲ್ಲಿ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.
2008ರಲ್ಲಿ ನಡೆದಿದ್ದ ಮಾಲೆಗಾಂವ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮನ್ನು ಬಂಧಿಸಿದ್ದಾಗ ತಾವು ಅನುಭವಿಸಿದ ಸನ್ನಿವೇಶಗಳನ್ನು ರ್ಯಾಲಿಯಲ್ಲಿ ವಿವರಿಸುವಾಗ ಸಾಧ್ವಿ ಕಣ್ಣೀರು ಹಾಕಿದರು. “ಬಂಧನವಾಗಿ 24 ಗಂಟೆಯವರೆಗೂ ನನಗೆ ಊಟ, ನೀರನ್ನೂ ನೀಡಿರಲಿಲ್ಲ. ಮಾಲೆಗಾಂವ್ ಸ್ಫೋಟದಲ್ಲಿ ಭಾಗಿಯಾಗಿದ್ದೇನೆ ಎಂದು ಬಲವಂತವಾಗಿ ಒಪ್ಪಿಕೊಳ್ಳುವಂತೆ ನನ್ನ ಮೇಲೆ ಒತ್ತಡ ಹೇರಲಾಗಿತ್ತು’ ಎಂದು ಅವರು ತಿಳಿಸಿದ್ದಾರೆ.
ಇದೇ ವೇಳೆ, ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ದಿಗ್ವಿಜಯ್ ಸಿಂಗ್ ಅವರನ್ನು “ಆಮದು ನೇತಾರ’ ಎಂದು ಟೀಕಿಸಿದ ಅವರು, ದೇಶದ ವಿರುದ್ಧ ಷಡ್ಯಂತ್ರ ನಡೆಸುವ ದಿಗ್ವಿಜಯ್ ಸಿಂಗ್ರವರ ಬಗ್ಗೆ ಎಚ್ಚರದಿಂದ ಇರಬೇಕೆಂದು ಮತದಾರರಲ್ಲಿ ಮನವಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ